Homeಮುಖಪುಟಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

ಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

- Advertisement -
- Advertisement -

ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಪಕ್ಷ 27 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.

2019ರಲ್ಲಿ ಚುನಾವಣಾ ಆಯೋಗದಲ್ಲಿ ನೋಂದಾವಣೆಗೊಂಡ ಹೊಸ ಪಕ್ಷ ಝೆಡ್‌ಪಿಎಂ, ಕೆಲವೇ ವರ್ಷಗಳಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಸ್ಥಾನಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದೆ. ಈ ಪಕ್ಷದ ಸ್ಥಾಪಕ 73 ವರ್ಷದ ಲಾಲ್ದುಹೋಮಾ ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ. ಲಾಲ್ದುಹೋಮಾ ಅವರು ಪ್ರತಿಸ್ಪರ್ಧಿ ಎಂಎನ್‌ಎಫ್ ಪಕ್ಷದ ಅಭ್ಯರ್ಥಿ ವಿರುದ್ಧ 2,982 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಯಾರಿವರು ಲಾಲ್ದುಹೋಮಾ? ಹೊಸ ಪಕ್ಷ ಕಟ್ಟಿ ಕಡಿಮೆ ಅವಧಿಯಲ್ಲಿ ರಾಜ್ಯದ ಸಿಎಂ ಆಗಲು ಸಿದ್ದರಾಗಿರುವ ಲಾಲ್ದುಹೋಮಾ 1984ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಜೋರಾಂ ವಿಧಾನಸಭೆಗೆ ಸ್ಪರ್ಧಿಸಿದ್ದರು. ಆದರೆ, ಪೀಪಲ್ಸ್ ಕಾನ್ಪರೆನ್ಸ್ ಪಕ್ಷದ ಅಭ್ಯರ್ಥಿ ಮುಂದೆ 846 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಅದೇ ವರ್ಷ ಲೋಕಸಭೆಗೆ ಸ್ಪರ್ಧಿಸಿದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ ಪಕ್ಷದ ಸಂಸದರಾಗಿದ್ದ ಲಾಲ್ದುಹೋಮಾ ಅವರನ್ನು ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದಡಿ ಉಚ್ಚಾಟನೆ ಮಾಡಲಾಗಿತ್ತು. ಲಾಲ್ದುಹೋಮಾ 1988ರ ಪಕ್ಷಾಂತರ ವಿರೋಧ ಕಾಯ್ದೆಯಡಿ ಲೋಕಸಭೆಯಿಂದ ಉಚ್ಚಾಟನೆಗೊಂಡ ಮೊದಲ ಸಂಸದರಾಗಿದ್ದಾರೆ.

2018 ರಲ್ಲಿ, ಲಾಲ್ದುಹೋಮಾ ಸ್ವತಂತ್ರ ಅಭ್ಯರ್ಥಿಯಾಗಿ ಐಜ್ವಾಲ್ ವೆಸ್ಟ್-I ಮತ್ತು ಸೆರ್ಚಿಪ್ ಎರಡು ಕ್ಷೇತ್ರಗಳಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ನಂತರ, ಅವರು ಸೆರ್ಚಿಪ್ ಕ್ಷೇತ್ರ ಉಳಿಸಿಕೊಳ್ಳಲು ಐಜ್ವಾಲ್ ವೆಸ್ಟ್-I ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲೂ ಲಾಲ್ದುಹೋಮಾ ಸೆರ್ಚಿಪ್‌ನಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ.

2018 ರ ಚುನಾವಣೆಯಲ್ಲಿ ಲಾಲ್ದುಹೋಮಾ ಸ್ಪರ್ಧಿಸಿದ್ದಾಗ ಅವರು ಝೆಡ್‌ಪಿಎಂ ಪಕ್ಷದ ಮುಖ್ಯಸ್ಥರಾಗಿದ್ದರು. ಆದರೆ ಆ ಪಕ್ಷ ನೋಂದಣಿಯಾಗಿರದ ಕಾರಣ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರು. 2020 ರಲ್ಲಿ ಝೆಡ್‌ಪಿಎಂಗೆ ಪಕ್ಷಾಂತರ ಮಾಡಿದ್ದಕ್ಕಾಗಿ ಲಾಲ್ದುಹೋಮಾ ಅವರನ್ನು ತಾಂತ್ರಿಕ ಕಾರಣಕ್ಕಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಇಂದಿರಾ ಗಾಂಧಿಗೆ ಭದ್ರತಾಧಿಕಾರಿಯಾಗಿದ್ದರು ಲಾಲ್ದುಹೋಮಾ:

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಲಾಲ್ದುಹೋಮಾ ಅವರ ಹಿನ್ನೆಲೆ ರೋಚಕವಾಗಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅವರ ಭದ್ರತಾ ವಿಭಾಗದ ಮುಖ್ಯಸ್ಥರಾಗಿದ್ದ ಲಾಲ್ದುಹೋಮಾ, ಬಳಿಕ ಕಾಂಗ್ರೆಸ್ ಸೇರುವ ಸಲುವಾಗಿ ತಮ್ಮ ಉನ್ನತ ಹುದ್ದೆ ತೊರೆದಿದ್ದರು. ಅಧಿಕಾರಿಯಾಗಿದ್ದಾಗ ಲಾಲ್ದುಹೋಮಾ ಅವರನ್ನು ಮಿಜೋ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಲಾಲ್ಡೆಂಗಾ ಅವರೊಂದಿಗೆ ಶಾಂತಿ ಮಾತುಕತೆ ನಡೆಸಲು ಪ್ರಧಾನಿ ಇಂದಿರಾ ಗಾಂಧಿ ಲಂಡನ್‌ಗೆ ಕಳುಹಿಸಿದ್ದರು. ಈ ಮಾತುಕತೆಯ ಫಲವಾಗಿ 1987ರಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಲಾಲ್ಡೆಂಗಾ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರು.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...