Homeಕರ್ನಾಟಕಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವುದು ಅಶಿಸ್ತು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಕರ್ನಾಟಕದ ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದ ವಿದ್ಯಾರ್ಥಿನಿಗಳನ್ನು ಹೊರಗಿಟ್ಟು ಮೂರು ವಾರಗಳಾಗಿವೆ. ವಿದ್ಯಾರ್ಥಿನಿಗಳು ಕಾಲೇಜಿನ ಗೇಟ್‌ ಬಳಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿ, ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಕೇಳುತ್ತಿದ್ದಾರೆ.

“ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಗಳಿಗೆ ಪ್ರವೇಶ ನೀಡಲಾಗುತ್ತಿಲ್ಲ. ನಾವು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದೇವೆ. ಆದರೆ, ತರಗತಿಗಳಿಗೆ ಹಾಜರಾಗದಂತೆ ಮತ್ತೊಮ್ಮೆ ನಮ್ಮನ್ನು ನಿರ್ಬಂಧಿಸಲಾಗಿದೆ” ಎಂದು ವಿದ್ಯಾರ್ಥಿನಿಗಳಲ್ಲಿ ಒಬ್ಬರಾದ ಅಲಿಯಾ ಎನ್‌ಡಿಟಿವಿಗೆ ಪ್ರತಿಕ್ರಿಯಿಸಿದ್ದಾರೆ.

“ಹಿಜಾಬ್ ಧರಿಸಿದ್ದಕ್ಕಾಗಿ ನಮಗೆ 20 ದಿನಗಳಿಂದ ನಿರ್ಬಂಧ ವಿಧಿಸಲಾಗಿದೆ. ನಮಗೆ ನ್ಯಾಯ ಬೇಕು” ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿನಿ ಮುಸ್ಕಾನ್ ಜೈನಾಬ್, “ಸಂವಿಧಾನ ನಮಗೆ ಹಿಜಾಬ್ ಧರಿಸುವ ಹಕ್ಕನ್ನು ನೀಡಿದೆ, ಕಾಲೇಜು ಅದನ್ನು ತಿರಸ್ಕರಿಸುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳ ಹೋರಾಟದ ಕುರಿತು ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡಿದ್ದು, “ಹಿಜಾಬ್‌ ಧರಿಸುವುದು ಅಶಿಸ್ತು. ಶಾಲಾ, ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ” ಎಂದಿದ್ದಾರೆ.

“ಕೆಲವು ಜನರು 2023ರ ಅಸೆಂಬ್ಲಿ ಚುನಾವಣೆಗೆ ಮುಂಚಿತವಾಗಿ ಸಮಸ್ಯೆಯನ್ನು ರಾಜಕೀಯಗೊಳಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. “ವಿದ್ಯಾರ್ಥಿಗಳು ಸಾಂವಿಧಾನಿಕ ಹಕ್ಕುಗಳ ಕುರಿತು ಈಗ ಏಕೆ ಪ್ರಸ್ತಾಪಿಸಲು ಬಯಸುತ್ತಾರೆ” ಎಂದು ಸಚಿವರು ಕೇಳಿದ್ದಾರೆ. ಫ್ಯಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾವು ವಿದ್ಯಾರ್ಥಿಗಳ ಹಿಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಆ ಆರೋಪವನ್ನು ವಿದ್ಯಾರ್ಥಿಗಳು ನಿರಾಕರಿಸಿದ್ದು, ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾಕ್ಕೂ ಹೋರಾಟಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರಭಾವಿತರಾಗಿಲ್ಲ. ನಾವು ಅವರ ಭಾಗವಾಗಿಲ್ಲ. ನಮಗೆ ಸಕಾರಾತ್ಮಕ ಪ್ರತಿಕ್ರಿಯೆ ಅಥವಾ ಯಾವುದೇ ಬೆಂಬಲ ಸಿಗದ ಕಾರಣ ನಾವು CFI ಅನ್ನು ಸಂಪರ್ಕಿಸಿದ್ದೆವು” ಎಂದು ಆಲಿಯಾ ಎನ್‌ಡಿಟಿವೆಗೆ ತಿಳಿಸಿದ್ದಾರೆ.

“ಸದರಿ ಕಾಲೇಜಿನಲ್ಲಿ ದಾಖಲಾದ 100ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಇಲ್ಲ. ಈ ವಿದ್ಯಾರ್ಥಿಗಳು ಮಾತ್ರ (ಡ್ರೆಸ್ ಕೋಡ್) ಅನುಸರಿಸಲು ಬಯಸುವುದಿಲ್ಲ. ಶಾಲೆಯು ಧರ್ಮವನ್ನು ಅಭ್ಯಾಸ ಮಾಡುವ ಸ್ಥಳವಲ್ಲ” ಸಚಿವವರು ಹೇಳಿಕೆ ನೀಡಿದ್ದಾರೆ.

“ಕಾಂಗ್ರೆಸ್ ಸರ್ಕಾರವಿದ್ದಾಗ… ನಿಯಮವನ್ನು ಅನುಸರಿಸಿದ್ದರು. ಆದರೆ ಈಗ ಅವರಿಗೆ ಸಮಸ್ಯೆ ಇದೆಯೇ? ಅವರು ಈಗ ಸಾಂವಿಧಾನಿಕ ಹಕ್ಕುಗಳನ್ನು ಪಾಲಿಸಲು ಬಯಸುತ್ತಾರೆಯೇ? ಅಶಿಸ್ತು ಹಕ್ಕಾಗುವುದಿಲ್ಲ” ಎಂದು ನಾಗೇಶ್‌ ಹೇಳಿದ್ದಾರೆ.

“ತಮ್ಮ ಪೋಷಕರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕಾಲೇಜಿನ ಅಧಿಕಾರಿಗಳಿಗೆ ಪದೇ ಪದೇ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಆರಾಮವಾಗಿ ಕೂರಲು ಆಗುತ್ತಿಲ್ಲ… ಅದಕ್ಕೇ ಹಿಜಾಬ್ ಹಾಕಿಕೊಂಡಿದ್ದೇವೆ. ಇದು ಸರ್ಕಾರಿ ಕಾಲೇಜು… ಬಾಲಕಿಯರ ಕಾಲೇಜು (ಆದರೆ) ನಮ್ಮಲ್ಲಿ ಪುರುಷ ಉಪನ್ಯಾಸಕರು ಇದ್ದಾರೆ” ಎಂದು ದ್ವಿತೀಯ ವರ್ಷದ ವಿದ್ಯಾರ್ಥಿ ಸಫಾ ಹೇಳಿದ್ದಾರೆ.

“ಕಾಲೇಜಿನಲ್ಲಿ ಧಾರ್ಮಿಕ ತಾರತಮ್ಯವಿದೆ. ನಾವು ಸಲಾಮ್ ಹೇಳುವಂತಿಲ್ಲ. ಸರಕಾರಿ ಕಾಲೇಜಾದರೂ ಉರ್ದುವಿನಲ್ಲಿ ಮಾತನಾಡುವಂತಿಲ್ಲ. ಇತರೆ ವಿದ್ಯಾರ್ಥಿಗಳಿಗೆ ತುಳುವಿನಲ್ಲಿ (ಸ್ಥಳೀಯ ಭಾಷೆ) ಮಾತನಾಡಲು ಅವಕಾಶವಿದೆ. ಉಪನ್ಯಾಸಕರು ನಮ್ಮೊಂದಿಗೆ ತುಳುವಿನಲ್ಲಿ ಮಾತನಾಡುತ್ತಾರೆ. ಆದರೆ ಉರ್ದುವಿನಲ್ಲಿ ಮಾತನಾಡಲು ನಮಗೆ ಅವಕಾಶವಿಲ್ಲ” ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ನಿಯಮಗಳಲ್ಲಿ ಹಿಜಾಬ್ ಧರಿಸುವುದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ನಾವು ಅಪರಾಧ ಮಾಡುವವರಂತೆ ಏಕೆ ವರ್ತಿಸುತ್ತಿದ್ದಾರೆ, ನಾವು ತಲೆಗೆ ಸ್ಕಾರ್ಫ್ ಮಾತ್ರ ಕೇಳುತ್ತಿದ್ದೇವೆ ಎಂದಿದ್ದಾರೆ.

ವಿವಾದದ ಬಗ್ಗೆ ಈ ಹಿಂದೆ ನಾನುಗೌರಿ.ಕಾಂ ಜೊತೆ ಸಾಮಾಜಿಕ ಕಾರ್ಯಕರ್ತರೊಬ್ಬರು, “ವಿದ್ಯಾರ್ಥಿನಿಯರು ತಲೆಗೆ ಶಾಲು ಸುತ್ತಿಕೊಳ್ಳುವುದರ ಬಗ್ಗೆ ಕೇಳುತ್ತಿದ್ದಾರೆ. ಅದು ಅವರ ಧಾರ್ಮಿಕ ಆಚರಣೆ, ಅದರಲ್ಲಿ ತಪ್ಪೇನಿದೆ. ಸಂವಿಧಾನದಲ್ಲಿ ಧಾರ್ಮಿಕ ಆಚರಣೆಯನ್ನು ಮೂಲಭೂತ ಹಕ್ಕಾಗಿ ನೀಡಲಾಗಿದೆ” ಎಂದಿದ್ದರು.

“ಈ ಹಿಂದೆ ಯಾವುದೇ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಹಾಕಿ ಬರುತ್ತಿರಲಿಲ್ಲ ಎಂಬ ವಾದವಿದೆ. ಆದರೆ ಅವರು ಧರಿಸುತ್ತಿರಲಿಲ್ಲ ಎಂದರೆ, ಈಗಿರುವ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯ ಹಕ್ಕುಗಳನ್ನು ಕೇಳಬಾರದೇ? ಹೀಗೆಯೆ ಬೇರೆ ವಿದ್ಯಾರ್ಥಿನಿಯರು ಅವರ ಧಾರ್ಮಿಕ ಆಚರಣೆಗಳಾದ ಕೈಗೆ ಬಳೆ ಧರಿಸುವುದು, ಹಣೆಗೆ ಕುಂಕುಮ ಹಚ್ಚುವುದು, ತಲೆಗೆ ಹೂವು ಮುಡಿದುಕೊಳ್ಳುವುದನ್ನು ನಿರಾಕರಿಸಲು ಆಗುತ್ತದೆಯೆ? ಅಥವಾ ಅವರು ಹೊಸದಾಗಿ ಈ ಆಚರಣೆಯನ್ನು ಶುರು ಮಾಡಿದರೆ ತಪ್ಪು ಎನ್ನಲು ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದರು.

ವಿದ್ಯಾರ್ಥಿನಿಯರ ಹೋರಾಟಕ್ಕೆ ಹಲವರ ದನಿ

ಹಿಜಾಬ್‌ ಧರಿಸಲು ಅವಕಾಶ ಕೋರಿ ಹೋರಾಡುತ್ತಿರುವ ವಿದ್ಯಾರ್ಥಿಗಳ ಪರ ಅನೇಕರು ದನಿ ಎತ್ತಿದ್ದಾರೆ.


ಇದನ್ನೂ ಓದಿರಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಚಿವರು ನಿಜಾನೇ ಹೇಳಿದ್ದಾರೆ,ಆದರೆ ಕಮ್ಯೂನಿಸ್ಟ್ ,ಮಾವೋವಾದಿಗಳಿಗೆ ಮಾತ್ರವೇ ಅದು ವಿವಾದ ಅನಿಸ್ತಿದೆ

  2. ಮುದುಕರಾದಮೇಲೇ ಮುಚ್ಚಿಕೋಂಡಿರಬೇಕಲ್ಲವೇ, ಸಿಖ್ ಗಳು ಅದೇನೋ ಹಾಕಿಕೋತಾರಲ್ಲವೇ ,ಬ್ರಾಮ್ಹಣರರು ಜುಟ್ಟು ಬಿಟ್ಟುಕೋಳ್ಳವೇ

  3. Can you ban the Sikh turban? Bindi?Vibhuti? Different color threads on the wrists? Do you think these practices will not disturb the uniformity? What’s the problem if Muslim girls wear hijaab? How it is going to affect the uniformity and education. Stop this cheap politics. Live and let live harmoniously. This practice is prevailant since beginning and not new. Why this issue is being raked now? Just because ur government is in power?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...