Homeಸಿನಿಮಾಕ್ರೀಡೆಮೈದಾನದಲ್ಲೇ ಹೊಡೆದಾಡಿಕೊಂಡ ಭಾರತ-ಬಾಂಗ್ಲಾ ಕ್ರಿಕೆಟಿಗರು! : ಕ್ಷಮೆ ಕೇಳಿದ ಬಾಂಗ್ಲಾ ನಾಯಕ

ಮೈದಾನದಲ್ಲೇ ಹೊಡೆದಾಡಿಕೊಂಡ ಭಾರತ-ಬಾಂಗ್ಲಾ ಕ್ರಿಕೆಟಿಗರು! : ಕ್ಷಮೆ ಕೇಳಿದ ಬಾಂಗ್ಲಾ ನಾಯಕ

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ನಡೆದ ಘಟನೆ

- Advertisement -
- Advertisement -

ಅಂಡರ್19 ವಿಶ್ವಕಪ್ ಫೈನಲ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶದ ಆಟಗಾರರು ಮೈದಾನದಲ್ಲೇ ಹೊಡೆದಾಡಿಕೊಂಡಿದ್ದಾರೆ. ವಿಶ್ವಕಪ್ ಫೈನಲ್ ನಲ್ಲಿ ಬಾಂಗ್ಲಾದೇಶವು 3 ವಿಕೆಟುಗಳಿಂದ ಪಂದ್ಯವನ್ನು ಗೆದ್ದುಕೊಂದಿತ್ತು. ಕೂಡಲೇ ಆಟಗಾರು ಮೈದಾನದಲ್ಲೇ ಹೊಡೆದಾಡಿಕೊಂಡಿದ್ದಾರೆ.

ಬಾಂಗ್ಲಾದೇಶವು ಇದೇ ಮೊದಲ ಬಾರಿಗೆ ಅಂಡರ್19 ವಿಶ್ವಕಪ್ ಅನ್ನು ಗೆದ್ದುಕೊಂಡಿದೆ. ಕ್ರಿಕೆಟಿಗರ ನಡುವೆ ವಾಗ್ವಾದಕ್ಕೆ ಕಾರಣವೇನೆಂದು ಇನ್ನೂ ಸ್ಪಷ್ಟವಾಗಿಲ್ಲ.

ಹೊಡೆದಾಟ ಪ್ರಾರಂಭವಾದ ಕೂಡಲೆ ಫೀಲ್ಡ್ ಅಂಪೈರ್‌ಗಳು ಮತ್ತು ಎರಡೂ ಕಡೆಯ ಸಿಬ್ಬಂದಿಗಳು ಕ್ರಿಕೆಟಿಗರನ್ನು ಬೇರ್ಪಡಿಸಲು ಪ್ರಯತ್ನಿಸಿದರು. ಆದರೂ ಸುಮಾರು 40-50 ಸೆಕೆಂಡುಗಳ ಕಾಲ ತಳ್ಳುವಿಕೆಯು ಮುಂದುವರೆಯಿತು. ಕೊನೆಯಲ್ಲಿ ಭಾರತದ ಅಂಡರ್19 ಕೋಚ್ ಪ್ಯಾರಾಸ್ ಮಾಂಬ್ರೆ ಆಟಗಾರರನ್ನು ಶಾಂತಗೊಳಿಸಿ, ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯುವಲ್ಲಿ ಯಶಸ್ವಿಯಾದರು.

ಅಂಡರ್ -19 ವಿಶ್ವಕಪ್ ಫೈನಲ್ ಪಂದ್ಯದ ನಂತರ ಘಟನೆಗೆ ಭಾರತದ ಕ್ಯಾಪ್ಟನ್ ಪ್ರಿಯಮ್ ಗರ್ಗ್ ಬಾಂಗ್ಲಾದೇಶದ ವಿರುದ್ಧ ಕಿಡಿಕಾರಿದ್ದಾರೆ. “ನಾವು ಸುಮ್ಮನಿದ್ದೆವು. ಗೆಲುವು ಮತ್ತು ಸೋಲು ಆಟದ ಒಂದು ಭಾಗವಾಗಿದೆ. ಆದರೆ ಇನ್ನೊಂದು ಕಡೆಯಿಂದ ಪ್ರತಿಕ್ರಿಯೆ ಕೆಟ್ಟದಾಗಿತ್ತು. ಅದು ಸಂಭವಿಸಬಾರದು” ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಭಾರತದ ನಾಯಕ ಪ್ರಿಯಮ್ ಗರ್ಗ್ ಹೇಳಿದ್ದಾರೆ.

“ಕೆಲವೊಮ್ಮೆ ಈ ಸಂಗತಿಗಳು ಸಂಭವಿಸುತ್ತವೆ. ಆಟಗಾರರು ಕೆಲವೊಮ್ಮೆ ತುಂಬಾ ಭಾವುಕರಾಗಬಹುದು. ಆದರೆ ನಿನ್ನೆ ಏನಾಯಿತು ಅದು ಕ್ರಿಕೆಟ್‌ಗೆ ಒಳ್ಳೆಯದಲ್ಲ. ಭವಿಷ್ಯದಲ್ಲಿ ನೀವು ಈ ವಿಷಯಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಭಾರತದ ಕೋಚ್ ಪರಾಸ್ ಮಾಂಬ್ರೆ ಹೇಳಿದ್ದಾರೆ.

ಬಾಂಗ್ಲಾದೇಶ ನಾಯಕ ಅಕ್ಬರ್ ಅಲಿ ತಮ್ಮ ತಂಡದ ಪರವಾಗಿ ಕ್ಷಮೆಯಾಚಿಸಿದ್ದಾರೆ ಮತ್ತು ಅವರ ತಂಡದ ಕೆಲವು ಆಟಗಾರರಲ್ಲಿ ಭಾವನೆಗಳು ಉತ್ತಮಗೊಂಡಿವೆ ಎಂದು ಒಪ್ಪಿಕೊಂಡಿದ್ದಾರೆ.

“ಘಟನೆಯ ಬಗ್ಗೆ ನನಗೆ ನಿಖರವಾಗಿ ತಿಳಿದಿಲ್ಲ. ಆದರೆ ಏನಾಯಿತು ಅದು ನಡೆಯಬಾರದಿತ್ತು. ನಮ್ಮ ಎದುರಾಳಿಗಳಿಗೆ ಗೌರವವನ್ನು ತೋರಿಸಬೇಕು ಮತ್ತು ನಾವು ಆಟದ ಬಗ್ಗೆ ಗೌರವವನ್ನು ಹೊಂದಿರಬೇಕು. ಏಕೆಂದರೆ ಕ್ರಿಕೆಟ್ ಅನ್ನು ಸಜ್ಜನರ ಆಟ ಎಂದು ಕರೆಯಲಾಗುತ್ತದೆ. ಆದ್ದರಿಂದ ನನ್ನ ತಂಡದ ಪರವಾಗಿ ನಾನು ವಿಷಾದಿಸುತ್ತೇನೆ ಎಂದು ಅಕ್ಬರ್ ಅಲಿ ಹೇಳಿದ್ದಾರೆ.

ವಿಶ್ವಕಪ್ ಫೈನಲ್‌ಗೆ ಮುಂಚಿತವಾಗಿ ನಾವು ಭಾರತದ ಎದುರು ಏಷ್ಯಾಕಪ್ ಫೈನಲ್‌ನಲ್ಲಿ ಸೋತಿದ್ದೆವು. ಆದ್ದರಿಂದ ಹುಡುಗರು ತುಂಬಾ ಸಿಟ್ಟಿನಲ್ಲಿದ್ದು, ಸೇಡು ತೀರಿಸಿಕೊಳ್ಳಲು ಬಯಸಿದ್ದರು. ಆದರೆ ಅದು ಆಗಬೇಕಿತ್ತು ಎಂದು ನಾನು ಹೇಳುವುದಿಲ್ಲ. ನನ್ನ ಕಡೆಯಿಂದ ಕ್ಷಮಿಸಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...