Homeಸಿನಿಮಾಕ್ರೀಡೆಮೈದಾನದಲ್ಲೇ ಹೊಡೆದಾಡಿಕೊಂಡ ಭಾರತ-ಬಾಂಗ್ಲಾ ಕ್ರಿಕೆಟಿಗರು! : ಕ್ಷಮೆ ಕೇಳಿದ ಬಾಂಗ್ಲಾ ನಾಯಕ

ಮೈದಾನದಲ್ಲೇ ಹೊಡೆದಾಡಿಕೊಂಡ ಭಾರತ-ಬಾಂಗ್ಲಾ ಕ್ರಿಕೆಟಿಗರು! : ಕ್ಷಮೆ ಕೇಳಿದ ಬಾಂಗ್ಲಾ ನಾಯಕ

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ನಡೆದ ಘಟನೆ

- Advertisement -
- Advertisement -

ಅಂಡರ್19 ವಿಶ್ವಕಪ್ ಫೈನಲ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶದ ಆಟಗಾರರು ಮೈದಾನದಲ್ಲೇ ಹೊಡೆದಾಡಿಕೊಂಡಿದ್ದಾರೆ. ವಿಶ್ವಕಪ್ ಫೈನಲ್ ನಲ್ಲಿ ಬಾಂಗ್ಲಾದೇಶವು 3 ವಿಕೆಟುಗಳಿಂದ ಪಂದ್ಯವನ್ನು ಗೆದ್ದುಕೊಂದಿತ್ತು. ಕೂಡಲೇ ಆಟಗಾರು ಮೈದಾನದಲ್ಲೇ ಹೊಡೆದಾಡಿಕೊಂಡಿದ್ದಾರೆ.

ಬಾಂಗ್ಲಾದೇಶವು ಇದೇ ಮೊದಲ ಬಾರಿಗೆ ಅಂಡರ್19 ವಿಶ್ವಕಪ್ ಅನ್ನು ಗೆದ್ದುಕೊಂಡಿದೆ. ಕ್ರಿಕೆಟಿಗರ ನಡುವೆ ವಾಗ್ವಾದಕ್ಕೆ ಕಾರಣವೇನೆಂದು ಇನ್ನೂ ಸ್ಪಷ್ಟವಾಗಿಲ್ಲ.

ಹೊಡೆದಾಟ ಪ್ರಾರಂಭವಾದ ಕೂಡಲೆ ಫೀಲ್ಡ್ ಅಂಪೈರ್‌ಗಳು ಮತ್ತು ಎರಡೂ ಕಡೆಯ ಸಿಬ್ಬಂದಿಗಳು ಕ್ರಿಕೆಟಿಗರನ್ನು ಬೇರ್ಪಡಿಸಲು ಪ್ರಯತ್ನಿಸಿದರು. ಆದರೂ ಸುಮಾರು 40-50 ಸೆಕೆಂಡುಗಳ ಕಾಲ ತಳ್ಳುವಿಕೆಯು ಮುಂದುವರೆಯಿತು. ಕೊನೆಯಲ್ಲಿ ಭಾರತದ ಅಂಡರ್19 ಕೋಚ್ ಪ್ಯಾರಾಸ್ ಮಾಂಬ್ರೆ ಆಟಗಾರರನ್ನು ಶಾಂತಗೊಳಿಸಿ, ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯುವಲ್ಲಿ ಯಶಸ್ವಿಯಾದರು.

ಅಂಡರ್ -19 ವಿಶ್ವಕಪ್ ಫೈನಲ್ ಪಂದ್ಯದ ನಂತರ ಘಟನೆಗೆ ಭಾರತದ ಕ್ಯಾಪ್ಟನ್ ಪ್ರಿಯಮ್ ಗರ್ಗ್ ಬಾಂಗ್ಲಾದೇಶದ ವಿರುದ್ಧ ಕಿಡಿಕಾರಿದ್ದಾರೆ. “ನಾವು ಸುಮ್ಮನಿದ್ದೆವು. ಗೆಲುವು ಮತ್ತು ಸೋಲು ಆಟದ ಒಂದು ಭಾಗವಾಗಿದೆ. ಆದರೆ ಇನ್ನೊಂದು ಕಡೆಯಿಂದ ಪ್ರತಿಕ್ರಿಯೆ ಕೆಟ್ಟದಾಗಿತ್ತು. ಅದು ಸಂಭವಿಸಬಾರದು” ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಭಾರತದ ನಾಯಕ ಪ್ರಿಯಮ್ ಗರ್ಗ್ ಹೇಳಿದ್ದಾರೆ.

“ಕೆಲವೊಮ್ಮೆ ಈ ಸಂಗತಿಗಳು ಸಂಭವಿಸುತ್ತವೆ. ಆಟಗಾರರು ಕೆಲವೊಮ್ಮೆ ತುಂಬಾ ಭಾವುಕರಾಗಬಹುದು. ಆದರೆ ನಿನ್ನೆ ಏನಾಯಿತು ಅದು ಕ್ರಿಕೆಟ್‌ಗೆ ಒಳ್ಳೆಯದಲ್ಲ. ಭವಿಷ್ಯದಲ್ಲಿ ನೀವು ಈ ವಿಷಯಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಭಾರತದ ಕೋಚ್ ಪರಾಸ್ ಮಾಂಬ್ರೆ ಹೇಳಿದ್ದಾರೆ.

ಬಾಂಗ್ಲಾದೇಶ ನಾಯಕ ಅಕ್ಬರ್ ಅಲಿ ತಮ್ಮ ತಂಡದ ಪರವಾಗಿ ಕ್ಷಮೆಯಾಚಿಸಿದ್ದಾರೆ ಮತ್ತು ಅವರ ತಂಡದ ಕೆಲವು ಆಟಗಾರರಲ್ಲಿ ಭಾವನೆಗಳು ಉತ್ತಮಗೊಂಡಿವೆ ಎಂದು ಒಪ್ಪಿಕೊಂಡಿದ್ದಾರೆ.

“ಘಟನೆಯ ಬಗ್ಗೆ ನನಗೆ ನಿಖರವಾಗಿ ತಿಳಿದಿಲ್ಲ. ಆದರೆ ಏನಾಯಿತು ಅದು ನಡೆಯಬಾರದಿತ್ತು. ನಮ್ಮ ಎದುರಾಳಿಗಳಿಗೆ ಗೌರವವನ್ನು ತೋರಿಸಬೇಕು ಮತ್ತು ನಾವು ಆಟದ ಬಗ್ಗೆ ಗೌರವವನ್ನು ಹೊಂದಿರಬೇಕು. ಏಕೆಂದರೆ ಕ್ರಿಕೆಟ್ ಅನ್ನು ಸಜ್ಜನರ ಆಟ ಎಂದು ಕರೆಯಲಾಗುತ್ತದೆ. ಆದ್ದರಿಂದ ನನ್ನ ತಂಡದ ಪರವಾಗಿ ನಾನು ವಿಷಾದಿಸುತ್ತೇನೆ ಎಂದು ಅಕ್ಬರ್ ಅಲಿ ಹೇಳಿದ್ದಾರೆ.

ವಿಶ್ವಕಪ್ ಫೈನಲ್‌ಗೆ ಮುಂಚಿತವಾಗಿ ನಾವು ಭಾರತದ ಎದುರು ಏಷ್ಯಾಕಪ್ ಫೈನಲ್‌ನಲ್ಲಿ ಸೋತಿದ್ದೆವು. ಆದ್ದರಿಂದ ಹುಡುಗರು ತುಂಬಾ ಸಿಟ್ಟಿನಲ್ಲಿದ್ದು, ಸೇಡು ತೀರಿಸಿಕೊಳ್ಳಲು ಬಯಸಿದ್ದರು. ಆದರೆ ಅದು ಆಗಬೇಕಿತ್ತು ಎಂದು ನಾನು ಹೇಳುವುದಿಲ್ಲ. ನನ್ನ ಕಡೆಯಿಂದ ಕ್ಷಮಿಸಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...