Homeಸಿನಿಮಾಕ್ರೀಡೆಮೈದಾನದಲ್ಲೇ ಹೊಡೆದಾಡಿಕೊಂಡ ಭಾರತ-ಬಾಂಗ್ಲಾ ಕ್ರಿಕೆಟಿಗರು! : ಕ್ಷಮೆ ಕೇಳಿದ ಬಾಂಗ್ಲಾ ನಾಯಕ

ಮೈದಾನದಲ್ಲೇ ಹೊಡೆದಾಡಿಕೊಂಡ ಭಾರತ-ಬಾಂಗ್ಲಾ ಕ್ರಿಕೆಟಿಗರು! : ಕ್ಷಮೆ ಕೇಳಿದ ಬಾಂಗ್ಲಾ ನಾಯಕ

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ನಡೆದ ಘಟನೆ

- Advertisement -
- Advertisement -

ಅಂಡರ್19 ವಿಶ್ವಕಪ್ ಫೈನಲ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶದ ಆಟಗಾರರು ಮೈದಾನದಲ್ಲೇ ಹೊಡೆದಾಡಿಕೊಂಡಿದ್ದಾರೆ. ವಿಶ್ವಕಪ್ ಫೈನಲ್ ನಲ್ಲಿ ಬಾಂಗ್ಲಾದೇಶವು 3 ವಿಕೆಟುಗಳಿಂದ ಪಂದ್ಯವನ್ನು ಗೆದ್ದುಕೊಂದಿತ್ತು. ಕೂಡಲೇ ಆಟಗಾರು ಮೈದಾನದಲ್ಲೇ ಹೊಡೆದಾಡಿಕೊಂಡಿದ್ದಾರೆ.

ಬಾಂಗ್ಲಾದೇಶವು ಇದೇ ಮೊದಲ ಬಾರಿಗೆ ಅಂಡರ್19 ವಿಶ್ವಕಪ್ ಅನ್ನು ಗೆದ್ದುಕೊಂಡಿದೆ. ಕ್ರಿಕೆಟಿಗರ ನಡುವೆ ವಾಗ್ವಾದಕ್ಕೆ ಕಾರಣವೇನೆಂದು ಇನ್ನೂ ಸ್ಪಷ್ಟವಾಗಿಲ್ಲ.

ಹೊಡೆದಾಟ ಪ್ರಾರಂಭವಾದ ಕೂಡಲೆ ಫೀಲ್ಡ್ ಅಂಪೈರ್‌ಗಳು ಮತ್ತು ಎರಡೂ ಕಡೆಯ ಸಿಬ್ಬಂದಿಗಳು ಕ್ರಿಕೆಟಿಗರನ್ನು ಬೇರ್ಪಡಿಸಲು ಪ್ರಯತ್ನಿಸಿದರು. ಆದರೂ ಸುಮಾರು 40-50 ಸೆಕೆಂಡುಗಳ ಕಾಲ ತಳ್ಳುವಿಕೆಯು ಮುಂದುವರೆಯಿತು. ಕೊನೆಯಲ್ಲಿ ಭಾರತದ ಅಂಡರ್19 ಕೋಚ್ ಪ್ಯಾರಾಸ್ ಮಾಂಬ್ರೆ ಆಟಗಾರರನ್ನು ಶಾಂತಗೊಳಿಸಿ, ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯುವಲ್ಲಿ ಯಶಸ್ವಿಯಾದರು.

ಅಂಡರ್ -19 ವಿಶ್ವಕಪ್ ಫೈನಲ್ ಪಂದ್ಯದ ನಂತರ ಘಟನೆಗೆ ಭಾರತದ ಕ್ಯಾಪ್ಟನ್ ಪ್ರಿಯಮ್ ಗರ್ಗ್ ಬಾಂಗ್ಲಾದೇಶದ ವಿರುದ್ಧ ಕಿಡಿಕಾರಿದ್ದಾರೆ. “ನಾವು ಸುಮ್ಮನಿದ್ದೆವು. ಗೆಲುವು ಮತ್ತು ಸೋಲು ಆಟದ ಒಂದು ಭಾಗವಾಗಿದೆ. ಆದರೆ ಇನ್ನೊಂದು ಕಡೆಯಿಂದ ಪ್ರತಿಕ್ರಿಯೆ ಕೆಟ್ಟದಾಗಿತ್ತು. ಅದು ಸಂಭವಿಸಬಾರದು” ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಭಾರತದ ನಾಯಕ ಪ್ರಿಯಮ್ ಗರ್ಗ್ ಹೇಳಿದ್ದಾರೆ.

“ಕೆಲವೊಮ್ಮೆ ಈ ಸಂಗತಿಗಳು ಸಂಭವಿಸುತ್ತವೆ. ಆಟಗಾರರು ಕೆಲವೊಮ್ಮೆ ತುಂಬಾ ಭಾವುಕರಾಗಬಹುದು. ಆದರೆ ನಿನ್ನೆ ಏನಾಯಿತು ಅದು ಕ್ರಿಕೆಟ್‌ಗೆ ಒಳ್ಳೆಯದಲ್ಲ. ಭವಿಷ್ಯದಲ್ಲಿ ನೀವು ಈ ವಿಷಯಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಭಾರತದ ಕೋಚ್ ಪರಾಸ್ ಮಾಂಬ್ರೆ ಹೇಳಿದ್ದಾರೆ.

ಬಾಂಗ್ಲಾದೇಶ ನಾಯಕ ಅಕ್ಬರ್ ಅಲಿ ತಮ್ಮ ತಂಡದ ಪರವಾಗಿ ಕ್ಷಮೆಯಾಚಿಸಿದ್ದಾರೆ ಮತ್ತು ಅವರ ತಂಡದ ಕೆಲವು ಆಟಗಾರರಲ್ಲಿ ಭಾವನೆಗಳು ಉತ್ತಮಗೊಂಡಿವೆ ಎಂದು ಒಪ್ಪಿಕೊಂಡಿದ್ದಾರೆ.

“ಘಟನೆಯ ಬಗ್ಗೆ ನನಗೆ ನಿಖರವಾಗಿ ತಿಳಿದಿಲ್ಲ. ಆದರೆ ಏನಾಯಿತು ಅದು ನಡೆಯಬಾರದಿತ್ತು. ನಮ್ಮ ಎದುರಾಳಿಗಳಿಗೆ ಗೌರವವನ್ನು ತೋರಿಸಬೇಕು ಮತ್ತು ನಾವು ಆಟದ ಬಗ್ಗೆ ಗೌರವವನ್ನು ಹೊಂದಿರಬೇಕು. ಏಕೆಂದರೆ ಕ್ರಿಕೆಟ್ ಅನ್ನು ಸಜ್ಜನರ ಆಟ ಎಂದು ಕರೆಯಲಾಗುತ್ತದೆ. ಆದ್ದರಿಂದ ನನ್ನ ತಂಡದ ಪರವಾಗಿ ನಾನು ವಿಷಾದಿಸುತ್ತೇನೆ ಎಂದು ಅಕ್ಬರ್ ಅಲಿ ಹೇಳಿದ್ದಾರೆ.

ವಿಶ್ವಕಪ್ ಫೈನಲ್‌ಗೆ ಮುಂಚಿತವಾಗಿ ನಾವು ಭಾರತದ ಎದುರು ಏಷ್ಯಾಕಪ್ ಫೈನಲ್‌ನಲ್ಲಿ ಸೋತಿದ್ದೆವು. ಆದ್ದರಿಂದ ಹುಡುಗರು ತುಂಬಾ ಸಿಟ್ಟಿನಲ್ಲಿದ್ದು, ಸೇಡು ತೀರಿಸಿಕೊಳ್ಳಲು ಬಯಸಿದ್ದರು. ಆದರೆ ಅದು ಆಗಬೇಕಿತ್ತು ಎಂದು ನಾನು ಹೇಳುವುದಿಲ್ಲ. ನನ್ನ ಕಡೆಯಿಂದ ಕ್ಷಮಿಸಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...