ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೇ ಪೂರ್ವ ಲಡಾಕ್ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ಇಂದು ಹೇಳಿದೆ.
ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯವು ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳಲ್ಲಿ ತೊಡಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?
ಪ್ಯಾಗೋಂಗ್-ತ್ಶೋ ಸರೋವರದ ಉತ್ತರ ತೀರದಲ್ಲಿ ಚೀನಾ ಸೈನ್ಯ ನಡೆಸಿದ ಪ್ರಯತ್ನವನ್ನು ಭಾರತೀಯ ಸೈನ್ಯವು ವಿಫಲಗೊಳಿಸಿದೆ ಮತ್ತು ಚೀನಾ ಸೈನ್ಯದ ಪ್ರಯತ್ನವನ್ನು ತಡೆಯಲು ಭಾರತವು ತಮ್ಮ ಸ್ಥಾನವನ್ನು ಬಲಪಡಿಸಿದೆ ಎಂದು ಭಾರತ ಸರ್ಕಾರ ಹೇಳಿದೆ.
ಮಾತುಕತೆಗಳ ಮೂಲಕ ಶಾಂತಿಯನ್ನು ಕಾಪಾಡಿಕೊಳ್ಳಲು ಬದ್ಧವಾಗಿರುವ ಅದೇ ಸಂದರ್ಭದಲ್ಲಿ ಭಾರತೀಯ ಮಿಲಿಟರಿ ತನ್ನ ಭೂಪ್ರದೇಶವನ್ನು ರಕ್ಷಿಸಲು ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ.
ಪ್ರಸ್ತುತ ಸಮಸ್ಯೆಯನ್ನು ಬಗೆರಿಸಲು ಗಡಿಯಲ್ಲಿರುವ ಸುಶುಲ್ನಲ್ಲಿ ಬ್ರಿಗೇಡ್ ಕಮಾಂಡರ್ ಮಟ್ಟದ ಧ್ವಜ ಸಭೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಭಾರತ ಚೀನಾ ಗಡಿ ವಿವಾದ: ಟ್ರಂಪ್ ಜೊತೆ ಮೋದಿ ಮಾತುಕತೆ ನಡೆಸಿಲ್ಲ – ಭಾರತ ಸ್ಪಷ್ಟನೆ