Homeಅಂತರಾಷ್ಟ್ರೀಯಸುದೀರ್ಘ 11 ಗಂಟೆ ಸಭೆ ನಡೆಸಿದ ಇಂಡೋ-ಚೀನಾ ಲೆಫ್ಟಿನೆಂಟ್ ಕಮಾಂಡರ್‌ಗಳು

ಸುದೀರ್ಘ 11 ಗಂಟೆ ಸಭೆ ನಡೆಸಿದ ಇಂಡೋ-ಚೀನಾ ಲೆಫ್ಟಿನೆಂಟ್ ಕಮಾಂಡರ್‌ಗಳು

- Advertisement -
- Advertisement -

ಭಾರತೀಯ ಸೇನೆ ಮತ್ತು ಚೀನೀ ಸೇನೆಯ ಉನ್ನತ ಮಿಲಿಟರಿ ಅಧಿಕಾರಿಗಳು ಎರಡೂ ಸೈನ್ಯಗಳ ನಡುವೆ ಶಾಂತಿ ಸ್ಥಾಪಿಸಲು ಸೋಮವಾರ (ಜೂನ್ 23) ಎರಡನೇ ಸುತ್ತಿನ ಮ್ಯಾರಥಾನ್ ಸಭೆಯನ್ನು ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಚೀನಾದ ಬದಿಯಲ್ಲಿರುವ ಮೊಲ್ಡೊದಲ್ಲಿ ನಡೆಸಿದ್ದಾರೆ.

ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ಮಾತುಕತೆ ನಡೆಯುತ್ತಿದೆ.

ಸೋಮವಾರದ ಸಭೆಯಲ್ಲಿ ಚೀನಾದೊಂದಿಗಿನ ಸಮಸ್ಯೆಯನ್ನು ಎತ್ತಿ ತೋರಿಸಿದ ಭಾರತ, ಪೂರ್ವ ಲಡಾಖ್‌ನ ಎಲ್ಲಾ ಘರ್ಷಣೆ ಸ್ಥಳಗಳಿಂದ, ವಿಶೇಷವಾಗಿ ಚೀನಿ ಸೇನೆ ಸ್ಥಾಪಿಸಿರುವ ಬಂಕರ್‌ಗಳು ಮತ್ತು ವೀಕ್ಷಣಾ ಪೋಸ್ಟ್‌ಗಳನ್ನು , ಪಾಂಗೊಂಗ್ ತ್ಸೊದ ಫಿಂಗರ್ ಪ್ರದೇಶದಿಂದ ಚೀನಾದ ಸೈನ್ಯವನ್ನು ತಕ್ಷಣ ಹಿಂದೆ ಕರೆಸಿಕೊಳ್ಳಬೇಕೆಂದು ಒತ್ತಾಯಿಸಿದೆ ಎಂದು ವರದಿಗಳು ತಿಳಿಸಿವೆ.

ಲೇಹ್ ಕಮಾಂಡರ್ 14 ಕಾರ್ಪ್ಸ್ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಮತ್ತು ದಕ್ಷಿಣ ಕ್ಸಿನ್‌ಜಿಯಾಂಗ್ ಮಿಲಿಟರಿ ಪ್ರದೇಶದ ಕಮಾಂಡರ್ ಮೇಜರ್ ಜನರಲ್ ಲಿಯು ಲಿನ್ ನೇತೃತ್ವದ ನಿಯೋಗಗಳ ನಡುವೆ ಈ ಸಭೆ ನಡೆದಿದೆ.

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ನಂತರ ನಡೆದ ಮೊದಲ ಲೆಫ್ಟಿನೆಂಟ್ ಜನರಲ್ ಮಟ್ಟದ ಮಾತುಕತೆ ಇದಾಗಿದೆ.

ಬೆಳಿಗ್ಗೆ 11.30 ಕ್ಕೆ ಪ್ರಾರಂಭವಾದ ಮಾತುಕತೆ ರಾತ್ರಿ 10.15 ರವರೆಗೆ ಸರಿ ಸುಮಾರು ಹನ್ನೊಂದು ಗಂಟೆಗಳ ಕಾಲ ಈ ಸಭೆ ನಡೆದವು ಎನ್ನಲಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಪೂರ್ವ ಲಡಾಖ್‌ನಲ್ಲಿ ಸೈನ್ಯವನ್ನು ನಿಷ್ಕ್ರಿಯಗೊಳಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿದ್ದು, ಈ ಮಾತುಕತೆಯ ಫಲಿತಾಂಶದ ಕುರಿತು ಇನ್ನೂ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ.

ಇದಲ್ಲದೆ, ಸೋಮವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉನ್ನತ ಸೇನಾ ಕಮಾಂಡರ್‌ಗಳು ಪೂರ್ವ ಲಡಾಕ್ ನಿಲುಗಡೆ ಮತ್ತು ವಾಸ್ತವಿಕ ನಿಯಂತ್ರಣ ರೇಖೆಯ ಒಟ್ಟಾರೆ ಪರಿಸ್ಥಿತಿಯ ಬಗ್ಗೆ ವಿವರವಾದ ಚರ್ಚೆಯನ್ನು ನಡೆಸಿದ್ದಾರೆಂದು ದಿ ಫೆಡರಲ್ ವರದಿ ಮಾಡಿದೆ.


ಓದಿ: ವಾಟ್ಸಾಪ್‌ ಮೆಸೇಜನ್ನು ನಂಬಿ ಭಾರತ-ಚೀನಾ ಸಂಘರ್ಷದ ಬಗ್ಗೆ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...