Homeಅಂತರಾಷ್ಟ್ರೀಯಸುದೀರ್ಘ 11 ಗಂಟೆ ಸಭೆ ನಡೆಸಿದ ಇಂಡೋ-ಚೀನಾ ಲೆಫ್ಟಿನೆಂಟ್ ಕಮಾಂಡರ್‌ಗಳು

ಸುದೀರ್ಘ 11 ಗಂಟೆ ಸಭೆ ನಡೆಸಿದ ಇಂಡೋ-ಚೀನಾ ಲೆಫ್ಟಿನೆಂಟ್ ಕಮಾಂಡರ್‌ಗಳು

- Advertisement -
- Advertisement -

ಭಾರತೀಯ ಸೇನೆ ಮತ್ತು ಚೀನೀ ಸೇನೆಯ ಉನ್ನತ ಮಿಲಿಟರಿ ಅಧಿಕಾರಿಗಳು ಎರಡೂ ಸೈನ್ಯಗಳ ನಡುವೆ ಶಾಂತಿ ಸ್ಥಾಪಿಸಲು ಸೋಮವಾರ (ಜೂನ್ 23) ಎರಡನೇ ಸುತ್ತಿನ ಮ್ಯಾರಥಾನ್ ಸಭೆಯನ್ನು ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಚೀನಾದ ಬದಿಯಲ್ಲಿರುವ ಮೊಲ್ಡೊದಲ್ಲಿ ನಡೆಸಿದ್ದಾರೆ.

ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ಮಾತುಕತೆ ನಡೆಯುತ್ತಿದೆ.

ಸೋಮವಾರದ ಸಭೆಯಲ್ಲಿ ಚೀನಾದೊಂದಿಗಿನ ಸಮಸ್ಯೆಯನ್ನು ಎತ್ತಿ ತೋರಿಸಿದ ಭಾರತ, ಪೂರ್ವ ಲಡಾಖ್‌ನ ಎಲ್ಲಾ ಘರ್ಷಣೆ ಸ್ಥಳಗಳಿಂದ, ವಿಶೇಷವಾಗಿ ಚೀನಿ ಸೇನೆ ಸ್ಥಾಪಿಸಿರುವ ಬಂಕರ್‌ಗಳು ಮತ್ತು ವೀಕ್ಷಣಾ ಪೋಸ್ಟ್‌ಗಳನ್ನು , ಪಾಂಗೊಂಗ್ ತ್ಸೊದ ಫಿಂಗರ್ ಪ್ರದೇಶದಿಂದ ಚೀನಾದ ಸೈನ್ಯವನ್ನು ತಕ್ಷಣ ಹಿಂದೆ ಕರೆಸಿಕೊಳ್ಳಬೇಕೆಂದು ಒತ್ತಾಯಿಸಿದೆ ಎಂದು ವರದಿಗಳು ತಿಳಿಸಿವೆ.

ಲೇಹ್ ಕಮಾಂಡರ್ 14 ಕಾರ್ಪ್ಸ್ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಮತ್ತು ದಕ್ಷಿಣ ಕ್ಸಿನ್‌ಜಿಯಾಂಗ್ ಮಿಲಿಟರಿ ಪ್ರದೇಶದ ಕಮಾಂಡರ್ ಮೇಜರ್ ಜನರಲ್ ಲಿಯು ಲಿನ್ ನೇತೃತ್ವದ ನಿಯೋಗಗಳ ನಡುವೆ ಈ ಸಭೆ ನಡೆದಿದೆ.

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ನಂತರ ನಡೆದ ಮೊದಲ ಲೆಫ್ಟಿನೆಂಟ್ ಜನರಲ್ ಮಟ್ಟದ ಮಾತುಕತೆ ಇದಾಗಿದೆ.

ಬೆಳಿಗ್ಗೆ 11.30 ಕ್ಕೆ ಪ್ರಾರಂಭವಾದ ಮಾತುಕತೆ ರಾತ್ರಿ 10.15 ರವರೆಗೆ ಸರಿ ಸುಮಾರು ಹನ್ನೊಂದು ಗಂಟೆಗಳ ಕಾಲ ಈ ಸಭೆ ನಡೆದವು ಎನ್ನಲಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಪೂರ್ವ ಲಡಾಖ್‌ನಲ್ಲಿ ಸೈನ್ಯವನ್ನು ನಿಷ್ಕ್ರಿಯಗೊಳಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿದ್ದು, ಈ ಮಾತುಕತೆಯ ಫಲಿತಾಂಶದ ಕುರಿತು ಇನ್ನೂ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ.

ಇದಲ್ಲದೆ, ಸೋಮವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉನ್ನತ ಸೇನಾ ಕಮಾಂಡರ್‌ಗಳು ಪೂರ್ವ ಲಡಾಕ್ ನಿಲುಗಡೆ ಮತ್ತು ವಾಸ್ತವಿಕ ನಿಯಂತ್ರಣ ರೇಖೆಯ ಒಟ್ಟಾರೆ ಪರಿಸ್ಥಿತಿಯ ಬಗ್ಗೆ ವಿವರವಾದ ಚರ್ಚೆಯನ್ನು ನಡೆಸಿದ್ದಾರೆಂದು ದಿ ಫೆಡರಲ್ ವರದಿ ಮಾಡಿದೆ.


ಓದಿ: ವಾಟ್ಸಾಪ್‌ ಮೆಸೇಜನ್ನು ನಂಬಿ ಭಾರತ-ಚೀನಾ ಸಂಘರ್ಷದ ಬಗ್ಗೆ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...