ಪೂರ್ವ ಜಾವಾ ಪ್ರಾಂತ್ಯದಲ್ಲಿ ರಾತ್ರಿಯಿಡೀ ನಡೆದ ಫುಟ್ಬಾಲ್ ಪಂದ್ಯವೊಂದರ ವೇಳೆ ಕಾಲ್ತುಳಿತದಿಂದಾಗಿ 127 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಅರೆಮಾ ಎಫ್ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಮೈದಾನಕ್ಕೆ ನುಗ್ಗಿದಾಗ ಪೊಲೀಸರು ಅಶ್ರುವಾಯು ಸಿಡಿಸಲಾಯಿತು. ಕಾಲ್ತುಳಿತ ಮತ್ತು ಉಸಿರುಗಟ್ಟಿದ ವಾತಾವರಣ ಸೃಷ್ಟಿಯಾಯಿತು ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸ್ಥಳೀಯ ಸುದ್ದಿ ವಾಹಿನಿಗಳು ವಿಡಿಯೊಗಳನ್ನು ಪ್ರಸಾರ ಮಾಡಿವೆ. ಮಲಾಂಗ್ನಲ್ಲಿರುವ ಕ್ರೀಡಾಂಗಣದಲ್ಲಿನ ಪಿಚ್ಗೆ ಜನರು ನುಗ್ಗುತ್ತಿರುವುದನ್ನು ವಿಡಿಯೊಗಳಲ್ಲಿ ಕಾಣಬಹುದಾಗಿದೆ.
#WATCH | At least 127 people died after violence at a football match in Indonesia, last night. The deaths occurred when angry fans invaded a football pitch after a match in East Java
(Video source: Reuters) pic.twitter.com/j7Bet6f9mE
— ANI (@ANI) October 2, 2022
ಇಂಡೋನೇಷ್ಯಾದ ಪ್ರಖ್ಯಾತ ಲೀಗ್ ಆಗಿರುವ ‘ಬಿಆರ್ಐ ಲಿಗಾ 1’ರ ಪಂದ್ಯದಲ್ಲಿ ಪರ್ಸೆಬಯಾ 3-2 ಅಂತರದಲ್ಲಿ ಗೆದ್ದಿತ್ತು. ಒಂದು ವಾರ ಕಾಲ ಆಟಗಳನ್ನು ಸ್ಥಗಿತಗೊಳಿಸಲಾಗಿದ್ದು, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಇಂಡೋನೇಷ್ಯಾದ ಫುಟ್ಬಾಲ್ ಅಸೋಸಿಯೇಷನ್ (PSSI) ತಿಳಿಸಿದೆ.
ಇಂಡೋನೇಷ್ಯಾದಲ್ಲಿ ಫುಟ್ಬಾಲ್ ಪಂದ್ಯಗಳ ವೇಳೆ ಗಲಾಟೆಯಾಗಿರುವ ಉದಾಹರಣೆಗಳಿವೆ. ಕ್ಲಬ್ಗಳ ನಡುವಿನ ಪ್ರಬಲ ಪೈಪೋಟಿ ಕೆಲವೊಮ್ಮೆ ಬೆಂಬಲಿಗರ ನಡುವೆ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ.
ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹಳ್ಳಿಯೊಂದರ ಬಳಿ ಶನಿವಾರ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವಿಶಾಕ್ ಜಿ.ಅಯ್ಯರ್ ತಿಳಿಸಿದ್ದಾರೆ.
ಸಾವಿಗೀಡಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಟ್ರಾಕ್ಟರ್-ಟ್ರಾಲಿಯಲ್ಲಿ ಸುಮಾರು 50 ಜನರಿದ್ದರು. ಇವರು ಫತೇಪುರ್ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿದ ನಂತರ ಘಟಂಪುರಕ್ಕೆ ತೆರಳುತ್ತಿದ್ದರು. ಆಗ ಅವಘಡ ನಡೆದಿದ್ದು ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದ್ದಾರೆ.
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
“ಕಾನ್ಪುರದಲ್ಲಿ ನಡೆದ ಟ್ರಾಕ್ಟರ್-ಟ್ರಾಲಿ ಅಪಘಾತದಿಂದ ದುಃಖಿತನಾಗಿರುವೆ. ಗಾಯಗೊಂಡವರ ಉಳಿವಿಗಾಗಿ ಪ್ರಾರ್ಥಿಸುವೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ” ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿಯು (ಪಿಎಂಒ) ತಿಳಿಸಿದೆ. ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆದಿತ್ಯನಾಥ್, “ಕಾನ್ಪುರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ನಡೆಸಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ” ಎಂದಿದ್ದಾರೆ.
“ಅಪಘಾತದಲ್ಲಾದ ಜೀವಹಾನಿ ಬಹಳ ದುಃಖ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಮೃತರ ಕುಟುಂಬಗಳಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಧೈರ್ಯವನ್ನು ನೀಡಲೆಂದು ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ. (ವಿವರಗಳನ್ನು ‘ಇಲ್ಲಿ’ ಓದಿರಿ)