Homeಅಂತರಾಷ್ಟ್ರೀಯಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

- Advertisement -
- Advertisement -

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ.

ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ ಸಂದ ಒಂದು ಸಣ್ಣ ಜಯ ಎಂದು ಮಾನವ ಹಕ್ಕುಗಳ ಸಂಘಟನೆಗಳು ಈ ತೀರ್ಪನ್ನು ಬಣ್ಣಿಸಿವೆ.

ಸಂಸದರಿಗೆ ಆರ್ಥಿಕ ಸವಲತ್ತುಗಳನ್ನು ಅಥವಾ ಪ್ರೋತ್ಸಾಹಕ ಧನವನ್ನು ಹೆಚ್ಚಿಸುವ ಸರ್ಕಾರದ ನಿರ್ಧಾರ ಸೇರಿದಂತೆ, ಸರ್ಕಾರದ ಖರ್ಚು ವೆಚ್ಚಗಳ ಆದ್ಯತೆಗಳನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ನಾಗರಿಕರು ದೇಶದಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದರು.

ರಾಜಧಾನಿ ಜಕಾರ್ತಾದಲ್ಲಿ ಪೊಲೀಸ್ ವಾಹನವೊಂದು ಡಿಕ್ಕಿ ಹೊಡೆದು ಅಫಾನ್ ಕುರ್ನಿಯಾವನ್ ಎಂಬ ಬೈಕ್ ಟ್ಯಾಕ್ಸಿ ಚಾಲಕ ಮೃತಪಟ್ಟ ನಂತರ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು. ಇದು ಸೆಪ್ಟೆಂಬರ್ ತಿಂಗಳವರೆಗೂ ಮುಂದುವರಿದು, ಒಟ್ಟು 10 ಜನರು ಸಾವಿಗೀಡಾಗಿದ್ದರು.

ಮಾನವ ಹಕ್ಕುಗಳ ಗುಂಪುಗಳು ಸ್ಥಾಪಿಸಿದ ಸ್ವತಂತ್ರ ಸತ್ಯಶೋಧನಾ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಪ್ರಕಾರ, 2026ರ ಫೆಬ್ರವರಿ ವೇಳೆಗೆ ಸುಮಾರು 7,000 ಜನರನ್ನು ಪ್ರತಿಭಟನೆ ಸಂಬಂಧ ಬಂಧಿಸಲಾಗಿದೆ. ಇವರಲ್ಲಿ 500 ಜನರಿಗೆ ಶಿಕ್ಷೆ ವಿಧಿಸಲಾಗಿದ್ದು, 125 ಜನರು ಇನ್ನೂ ಬಂಧನದಲ್ಲಿಯೇ ಮುಂದುವರಿದಿದ್ದಾರೆ.

ಪ್ರತಿಭಟನಾಕಾರರಿಗೆ ಕಾನೂನು ನೆರವು ನೀಡುವ ‘ಲೋಕತಾರು ಫೌಂಡೇಶನ್’ ಎಂಬ ಸರ್ಕಾರೇತರ ಸಂಸ್ಥೆಯಲ್ಲಿ ಕೆಲಸ ಮಾಡುವ ಡೆಲ್ಪೆಡ್ರೊ ಮರ್ಹಾನ್ ಅವರನ್ನು ಕೇಂದ್ರ ಜಕಾರ್ತಾದ ನ್ಯಾಯಾಲಯವು ಶುಕ್ರವಾರ ಖುಲಾಸೆಗೊಳಿಸಿದೆ. ಸೆಪ್ಟೆಂಬರ್‌ನಲ್ಲಿ ಅವರ ಬಂಧನವಾದ ನಂತರ, ಡೆಲ್ಪೆಡ್ರೊ ಅವರನ್ನು ಈ ಪ್ರತಿಭಟನೆಯ ಪ್ರಮುಖ ಮುಖ ಎಂದು ದೊಡ್ಡಮಟ್ಟದಲ್ಲಿ ಗುರುತಿಸಲಾಗಿತ್ತು.

ಡೆಲ್ಪೆಡ್ರೊ ಅವರ ಸಹೋದ್ಯೋಗಿ, ಲೋಕತಾರು ಫೌಂಡೇಶನ್‌ನ ಸಿಬ್ಬಂದಿ ಮುಜಾಫರ್ ಸಲೀಂ, ‘ಗೆಜಯನ್ ಮೆಮ್ಮಂಗಿಲ್’ ಎಂಬ ವಿದ್ಯಾರ್ಥಿ ಚಳುವಳಿಯ ಆನ್‌ಲೈನ್ ಕಾರ್ಯಕರ್ತ ಸ್ಯಹದನ್ ಹುಸೇನ್ ಮತ್ತು ರಿಯಾವು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹೋರಾಟಗಾರ ಖಾರಿಕ್ ಅನ್ಹರ್ ಖುಲಾಸೆಗೊಂಡವರು.

ಆಗಸ್ಟ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಂತೆ ಜನರನ್ನು ಪ್ರಚೋದಿಸಿದ ಆರೋಪದಿಂದ ಈ ಎಲ್ಲರನ್ನೂ ನಿರ್ದೋಷಿಗಳೆಂದು ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣಗಳನ್ನು ಹರಡಿ ಗಲಭೆಗಳಿಗೆ ಕಾರಣರಾದ ಆರೋಪಗಳಿಂದಲೂ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

“ಈ ತೀರ್ಪು ಕೇವಲ ನಮಗೆ ಸೇರಿದ್ದಲ್ಲ, ಇದು ಎಲ್ಲಾ ರಾಜಕೀಯ ಕೈದಿಗಳಿಗೆ ಸೇರಿದ್ದು.. ಊಹಿಸಿ, ನಮ್ಮನ್ನು ಆರು ತಿಂಗಳ ಕಾಲ ಬಂಧನದಲ್ಲಿಡಲಾಗಿತ್ತ. ಆದರೆ, ಈಗ ನಾವು ನಿರ್ದೋಷಿಗಳು ಎಂದು ಸಾಬೀತಾಗಿದೆ” ಎಂಬುವುದಾಗಿ ವಿಚಾರಣೆಯ ನಂತರ ಡೆಲ್ಪೆಡ್ರೊ ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ಇರಾನಿನ ಧ್ವಜ ಹೊದ್ದುಕೊಂಡಿದ್ದರು ಎಂದು ರಾಯಿಟರ್ಸ್ ವರದಿ ಮಾಡಿದೆ.

ಇಂಡೋನೇಷಿಯನ್ ಲೀಗಲ್ ಏಡ್ ಫೌಂಡೇಶನ್ ಎಂಬ ಮತ್ತೊಂದು ಸಂಸ್ಥೆಯು ಈ ತೀರ್ಪನ್ನು ನಾಗರಿಕ ಸ್ವಾತಂತ್ರ್ಯಕ್ಕೆ ಸಂದ ಒಂದು ಸಣ್ಣ ಜಯ ಎಂದು ಬಣ್ಣಿಸಿದೆ. ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಸರ್ಕಾರವು ಇನ್ನು ಮುಂದೆ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅದು ಹೇಳಿದೆ.

‘ಕಣ್ಮರೆಯಾದವರು ಮತ್ತು ಹಿಂಸಾಚಾರದ ಸಂತ್ರಸ್ತರ ಆಯೋಗ’ (KontraS) ಎಂದು ಕರೆಯಲ್ಪಡುವ ಮಾನವ ಹಕ್ಕುಗಳ ಗುಂಪು, ಈ ತೀರ್ಪನ್ನು “ಇಂಡೋನೇಷ್ಯಾದ ಪ್ರಜಾಪ್ರಭುತ್ವದ ಹಿನ್ನಡೆಯ ನಡುವೆ ಕಂಡ ಒಂದು ಓಯಸಿಸ್ (ಮರಳುಗಾಡಿನ ಓಯಸಿಸ್)” ಎಂದು ಬಣ್ಣಿಸಿದೆ.

ವಿಶ್ಲೇಷಕರ ಪ್ರಕಾರ, 2024ರ ಭರ್ಜರಿ ಚುನಾವಣಾ ಗೆಲುವಿನ ನಂತರ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರಿಗೆ ಎದುರಾದ ಮೊದಲ ದೊಡ್ಡ ಸವಾಲು ಈ ಪ್ರತಿಭಟನೆಗಳಾಗಿದ್ದವು. ಈ ಅಶಾಂತಿಯು 1998ರ ನಂತರ ನಡೆದ ಅತ್ಯಂತ ಭೀಕರ ಘಟನೆ ಎಂದು ಬಣ್ಣಿಸಲಾಗಿದೆ. ಅಂದು ವಿದ್ಯಾರ್ಥಿ ಪ್ರತಿಭಟನೆಗಳು ಮಾಜಿ ಅಧ್ಯಕ್ಷ ಸುಹಾರ್ಟೋ ಅವರ ಮೂರು ದಶಕಗಳ ಸರ್ವಾಧಿಕಾರಿ ಆಡಳಿತದ ಪತನಕ್ಕೆ ಕಾರಣವಾಗಿದ್ದವು.

ಹೋರಾಟಗಾರರ ಖುಲಾಸೆ ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಮೂಡಿಸಿದೆಆಮ್ನೆಸ್ಟಿ

ನಾಲ್ವರು ಹೋರಾಟಗಾರರನ್ನು ಖುಲಾಸೆಗೊಳಿಸಿದ ಇಂಡೋನೇಷ್ಯಾ ನ್ಯಾಯಾಲಯದ ತೀರ್ಪನ್ನು ಮಾನವ ಹಕ್ಕುಗಳ ಸಂಘಟನೆ ಆಮ್ನೆಸ್ಟಿ ಇಂಟರ್ನ್ಯಾಷನಲ್ ಸ್ವಾಗತಿಸಿದೆ. ಈ ಕುರಿತು ಸಂಘಟನೆಯ ಇಂಡೋನೇಷ್ಯಾದ ಕಾರ್ಯನಿರ್ವಾಹಕ ನಿರ್ದೇಶಕ ಉಸ್ಮಾನ್ ಹಮೀದ್ ಈ ಕೆಳಗಿನಂತೆ ಹೇಳಿದ್ದಾರೆ:

“ಇಂಡೋನೇಷ್ಯಾದಲ್ಲಿ ದಿನೇ ದಿನೇ ನಾಗರಿಕ ಸ್ವಾತಂತ್ರ್ಯ ಕುಸಿಯುತ್ತಿರುವ ನಡುವೆ ನ್ಯಾಯಾಲಯದ ತೀರ್ಪು ಹೊಸ ಭರವಸೆಯನ್ನು ಮೂಡಿಸಿದೆ. ಮಾನವ ಹಕ್ಕು ಹೋರಾಟಗಾರರನ್ನು ಮತ್ತು ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಚಲಾಯಿಸುವ ಯಾರನ್ನೇ ಆಗಲಿ ಅಪರಾಧಿಗಳೆಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂಬ ಸ್ಪಷ್ಟ ಸಂದೇಶವನ್ನು ಈ ತೀರ್ಪು ಕಾನೂನು ಜಾರಿ ಅಧಿಕಾರಿಗಳಿಗೆ ನೀಡಿದೆ. ಇದು ಇಂಡೋನೇಷ್ಯಾದ ನ್ಯಾಯ ಮತ್ತು ಮಾನವ ಹಕ್ಕುಗಳ ಹೋರಾಟಕ್ಕೆ ಸಂದ ಪ್ರಮುಖ ಗೆಲುವಾಗಿದೆ”

“2025ರ ಆಗಸ್ಟ್ ತಿಂಗಳ ಪ್ರತಿಭಟನೆಗಳ ಸಮಯದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಕೇವಲ ಜನರನ್ನು ಸೇರುವಂತೆ ಕರೆ ನೀಡಿದ್ದಕ್ಕಾಗಿ ಈ ಹೋರಾಟಗಾರರ ಮೇಲೆ ಮೊಕದ್ದಮೆ ಹೂಡಬಾರದಾಗಿತ್ತು. ಇವರು ಪ್ರತಿಭಟನೆಗೆ ಕರೆ ನೀಡಿದ್ದಕ್ಕೂ ಮತ್ತು ಜಕಾರ್ತದಲ್ಲಿ ಆಗಸ್ಟ್ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಿದ್ದಾರೆ”

“ನ್ಯಾಯಾಲಯದ ತೀರ್ಪು ಪ್ರತಿಭಟನೆಗಳ ಸಮಯದಲ್ಲಿ ಸರ್ಕಾರದ ನೀತಿಗಳನ್ನು ವಿರೋಧಿಸಿದ್ದಕ್ಕಾಗಿ ಅಥವಾ ಟೀಕಿಸಿದ್ದಕ್ಕಾಗಿ ಮಾತ್ರ ಬಂಧಿಸಲ್ಪಟ್ಟವರ ಬಿಡುಗಡೆಗೆ ಪ್ರೇರಣೆಯಾಗಬೇಕು. ಟೀಕಾಕಾರರ ಧ್ವನಿಯನ್ನು ಅಡಗಿಸಬಾರದು. ಯಾರೊಬ್ಬರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ಜೈಲಿಗೆ ಹೋಗಬಾರದು. ಇಂಡೋನೇಷ್ಯಾದಲ್ಲಿ ಪ್ರತಿಭಟನೆಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನಿರಂತರ ದಮನಕಾರಿ ಕ್ರಮಗಳು ಕೊನೆಗೊಳ್ಳಬೇಕು. ಈ ಪ್ರತಿಭಟನೆಗಳ ಸಂದರ್ಭದಲ್ಲಿ ನಡೆದ ಪೋಲೀಸ್ ದಮನದ ಬಗ್ಗೆ ಸ್ವತಂತ್ರ ತನಿಖೆ ನಡೆಯುವುದು ಮಾತ್ರ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಇರುವ ಏಕೈಕ ವಿಶ್ವಾಸಾರ್ಹ ಮಾರ್ಗವಾಗಿದೆ”

“ನ್ಯಾಯಾಧೀಶರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿರುವುದನ್ನು ಟೀಕಿಸಿದ್ದಾರೆ, ಇದನ್ನು ಆಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯು ಈಗಾಗಲೇ ದಾಖಲಿಸಿದೆ”

“ಇದಕ್ಕೂ ಮೊದಲು, ಪ್ರಾಸಿಕ್ಯೂಟರ್‌ಗಳು ಪ್ರತಿ ಹೋರಾಟಗಾರರಿಗೂ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಬೇಕೆಂದು ಕೋರಿದ್ದರು. 2025ರ ಆಗಸ್ಟ್ ಅಂತ್ಯದಲ್ಲಿ ನಡೆದ ಪ್ರತಿಭಟನೆಗಳಿಗೆ ಜನರನ್ನು ‘ಪ್ರಚೋದಿಸುವ’ ಸಲುವಾಗಿ ಸೋಶಿಯಲ್ ಮೀಡಿಯಾದಲ್ಲಿ ‘ಉದ್ರೇಕಕಾರಿ ಮತ್ತು ಸಂಘರ್ಷಾತ್ಮಕ’ ಪೋಸ್ಟ್‌ಗಳನ್ನು ಹಾಕಿದ್ದಾರೆ ಎಂದು ಇವರ ಮೇಲೆ ಆರೋಪ ಹೊರಿಸಲಾಗಿತ್ತು. ಅಲ್ಲದೆ ಈ ಪೋಸ್ಟ್‌ಗಳು ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಗೆ ಮತ್ತು ಪೊಲೀಸ್ ಅಧಿಕಾರಿಗಳ ಗಾಯಕ್ಕೆ ಕಾರಣವಾಗಿವೆ ಎಂದು ವಾದಿಸಲಾಗಿತ್ತು”

ಅಧ್ಯಕ್ಷರ ಅಮೆರಿಕ ಸಖ್ಯದ ವಿರುದ್ದ ಮತ್ತೆ ಭುಗಿಲೆದ್ದ ಪ್ರತಿಭಟನೆ

ಇತ್ತೀಚೆಗೆ ಇರಾನ್ ಮೇಲೆ ನಡೆದ ದಾಳಿಯ ಹಿನ್ನೆಲೆಯಲ್ಲಿ, ಇಂಡೋನೇಷ್ಯಾದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಅಮೆರಿಕದೊಂದಿಗೆ ಹೊಂದಿರುವ ನಿಕಟ ಸಂಬಂಧವನ್ನು ಪ್ರತಿಭಟನಾಕಾರರು ಪ್ರಶ್ನಿಸುತ್ತಿದ್ದಾರೆ. ಅಮೆರಿಕದ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರ ನಿಲುವು ತಳೆಯುವಂತೆ ಅವರು ಒತ್ತಾಯಿಸುತ್ತಿದ್ದಾರೆ.

ಇಂಡೋನೇಷ್ಯಾ ಅಮೆರಿಕ ನೇತೃತ್ವದ ‘ಬೋರ್ಡ್ ಆಫ್ ಪೀಸ್’ ಮಂಡಳಿಯಲ್ಲಿ ಭಾಗವಹಿಸುತ್ತಿರುವುದನ್ನು ವಿದ್ಯಾರ್ಥಿ ಸಂಘಟನೆಗಳು (BEM SI) ವಿರೋಧಿಸಿವೆ.

ಈ ಮಂಡಳಿಯಿಂದ ಇಂಡೋನೇಷ್ಯಾ ಹೊರಬರಬೇಕು ಮತ್ತು ಪ್ಯಾಲೆಸ್ತೀನ್‌ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ಆಗ್ರಹಿಸಿ ಶನಿವಾರ (ಮಾ.7) ಜಕಾರ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಯೋಜಿಸಲಾಗಿದೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...