Homeಮುಖಪುಟನಾಮಪತ್ರ ವಾಪಸ್ ಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ : ಪಕ್ಷಕ್ಕೆ ಸ್ವಾಗತ ಎಂದ ಬಿಜೆಪಿ ನಾಯಕ

ನಾಮಪತ್ರ ವಾಪಸ್ ಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ : ಪಕ್ಷಕ್ಕೆ ಸ್ವಾಗತ ಎಂದ ಬಿಜೆಪಿ ನಾಯಕ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಮಧ್ಯ ಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಲಾಗ್ತಿದೆ.

ಬಾಮ್ ಅವರು ಬಿಜೆಪಿ ಹಾಲಿ ಶಾಸಕ ರಮೇಶ್ ಮೆಂಡೋಲಾ ಅವರೊಂದಿಗೆ ನಾಮಪತ್ರ ಹಿಂಪಡೆಯಲು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು ಎಂದು ವರದಿಗಳು ಹೇಳಿವೆ.

ಅಕ್ಷಯ್ ಕಾಂತಿ ಬಾಮ್ ಅವರು ಕಾಂಗ್ರೆಸ್ ತೊರೆದಿರುವುದನ್ನು ದೃಢೀಕರಿಸಿರುವ ಮಧ್ಯಪ್ರದೇಶ ಸರ್ಕಾರದ ಸಂಪುಟ ಸಚಿವ ಕೈಲಾಶ್ ವಿಜಯವರ್ಗಿಯ, ಬಾಮ್ ಅವರನ್ನು ಬಿಜೆಪಿಗೆ ಸ್ವಾಗತಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಜ್ಯಾಧ್ಯಕ್ಷ ವಿಡಿ ಶರ್ಮಾ ನೇತೃತ್ವದ ಬಿಜೆಪಿಗೆ ಸೇರ್ಪಡೆಯಾಗಿರುವ ಇಂದೋರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರನ್ನು ನಾವು ಪಕ್ಷಕ್ಕೆ ಸ್ವಾಗತಿಸುತ್ತೇವೆ” ಎಂದು ವಿಜಯವರ್ಗಿಯಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಅಕ್ಷಯ್ ಕಾಂತಿ ಬಾಮ್ ಅವರು ನಾಮಪತ್ರ ಸಲ್ಲಿಸುವಾಗ ಅವರ ವಿರುದ್ದ 17 ವರ್ಷಗಳ ಹಿಂದೆ ಐಪಿಸಿ ಸೆಕ್ಷನ್ 307ರ ಅಡಿ ದಾಖಲಾಗಿರುವ ಪ್ರಕರಣದ ಕುರಿತು ಉಲ್ಲೇಖಿಸಿಲ್ಲ ಎಂದು ಬಿಜೆಪಿ ಕಾನೂನು ಘಟಕದವರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಜಿಲ್ಲಾಧಿಕಾರಿ ಆಕ್ಷೇಪಣೆಯನ್ನು ತಿರಸ್ಕರಿಸಿ ನಾಮಪತ್ರ ಸ್ವೀಕರಿಸಿದ್ದರು ಮತ್ತು ನಾಮಪತ್ರ ಸಲ್ಲಿಸುವಾಗ ಆ ಪ್ರಕರಣದ ಕುರಿತು ಸೇರಿಸಿದ್ದರು. ಆದರೆ, ಕಾಂಗ್ರೆಸ್‌ನ ಮೂವರು ಬದಲಿ ಅಭ್ಯರ್ಥಿಗಳ ನಾಮಪತ್ರಗಳನ್ನು ಜಿಲ್ಲಾಧಿಕಾರಿ ತಿರಸ್ಕರಿಸಿದ್ದಾರೆ.

ಇಂದೋರ್‌ನಲ್ಲಿ ಮತದಾನಕ್ಕೆ ಮೂರು ದಿನಗಳ ಮೊದಲು, ಅಂದರೆ, ಮೇ 10 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ಇಂದೋರ್ ಲೋಕಸಭಾ ಕ್ಷೇತ್ರದ ಮತದಾನ ನಾಲ್ಕನೇ ಹಂತದಲ್ಲಿ ಮೇ 13 ರಂದು ನಡೆಯಲಿದೆ.

ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರ್ಪಡೆಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ವಕ್ತಾರ ಅಮೀನ್ ಉಲ್ ಖಾನ್ ಸೂರಿ, ” ಕಾಂಗ್ರೆಸ್ ರಾಜ್ಯಾಧ್ಯಕ್ಷರನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಬೇಕು. ಬಾಮ್ ಇಂದೋರ್‌ನಲ್ಲಿ ಯಾವುದೇ ರಾಜಕೀಯ ಪ್ರಭಾವ ಹೊಂದಿರಲಿಲ್ಲ. ಆದರೂ, ಕಾಂಗ್ರೆಸ್ ಪಕ್ಷ ಅವರನ್ನು ಇಂದೋರ್ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು. ಇದನ್ನು ಲಘುವಾಗಿ ಪರಿಗಣಿಸಬಾರದು. ಏಕೆಂದರೆ, ಇದು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೋ ಬಗ್ಗೆ ಮೊದಲೇ ಗೊತ್ತಿದ್ದೂ ಸುಮ್ಮನಿದ್ರಾ ಮೈತ್ರಿ ನಾಯಕರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...