Homeಮುಖಪುಟಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

- Advertisement -
- Advertisement -

ಇಂದೋರ್‌ನ ಅನಾಥಾಶ್ರಮವೊಂದರಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದ ಘಟನೆ ಬಯಲಾಗಿದ್ದು, ಅಧಿಕಾರಿಗಳು ಅನಾಥಾಶ್ರಮಕ್ಕೆ ಭೇಟಿ ನೀಡಿದ ವೇಳೆ ಮಕ್ಕಳು ದೌರ್ಜನ್ಯದ ಬಗ್ಗೆ ದೂರು ನೀಡಿದ್ದಾರೆ.

ಇಂದೋರ್‌ನ ಅನಾಥಾಶ್ರಮಕ್ಕೆ ಜನವರಿ 12ರಂದು ಸಿಡಬ್ಲ್ಯುಸಿ ಅಧಿಕಾರಿಗಳ ತಂಡ ಹಠಾತ್ ಭೇಟಿ ನೀಡಿ ತಪಾಸಣೆ ನಡೆಸಿದೆ. ಈ ವೇಳೆ ಅನಾಥಾಶ್ರಮದಲ್ಲಿ 4-14 ವರ್ಷದೊಳಗಿನ ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದು ಬಯಲಾಗಿದೆ.  ನಮ್ಮನ್ನು ತಲೆ ಕೆಳಗಾಗಿ ನೇತು ಹಾಕುತ್ತಿದ್ದಾರೆ, ಕಾಯಿಸಿದ ಕಬ್ಬಿಣದಿಂದ ಬರೆ ಹಾಕುತ್ತಾರೆ ಮತ್ತು ತಮ್ಮನ್ನು ಬೆತ್ತಲೆಗೊಳಿಸಿ ಬಳಿಕ ಚಿತ್ರಗಳನ್ನು ತೆಗೆಯುತ್ತಾರೆ, ಬೆಂಕಿಯಲ್ಲಿ ಉರಿಯುತ್ತಿರುವ ಕೆಂಪು ಮೆಣಸಿನಕಾಯಿಯ ಹೊಗೆಯನ್ನು ಉಸಿರಾಡುವಂತೆಯೂ ಮಾಡಲಾಗುತ್ತಿತ್ತು ಎಂದು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಅಧಿಕಾರಿಗಳ ಬಳಿ ಮಕ್ಕಳು ಭಯದಿಂದಲೇ ಹೇಳಿಕೊಂಡಿದ್ದಾರೆ.

ಸಿಡಬ್ಲ್ಯುಸಿ ಅಧಿಕಾರಿಗಳ ದೂರಿನ ಮೇರೆಗೆ ಅನಾಥಾಶ್ರಮದ ಐವರು ಸಿಬ್ಬಂದಿಗಳ ವಿರುದ್ಧ ಜುವೆನೈಲ್ ಜಸ್ಟೀಸ್ ಆಕ್ಟ್ (ಜೆಜೆ ಆಕ್ಟ್) ಮತ್ತು ಐಪಿಸಿಯ ಸೆಕ್ಸನ್‌ಗಳಡಿಯಲ್ಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಪೋಕ್ಸೊ ಕಾಯ್ದೆ ಮತ್ತು ಮಾನವ ಕಳ್ಳಸಾಗಣೆ ಆರೋಪಗಳನ್ನು ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸಲಾಗಿಲ್ಲ. ಅಧಿಕಾರಿಗಳ ತಂಡಕ್ಕೆ ದೂರು ನೀಡಿದ ಮಕ್ಕಳ ಆರೋಪಗಳ ಬಗ್ಗೆ ಪರಿಶೀಲಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಇಂದೋರ್‌ನ ಜಿಲ್ಲಾಧಿಕಾರಿ ಆಶೀಶ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ತಂಡವು ಜುವೆನೈಲ್ ಜಸ್ಟೀಸ್ ಆಕ್ಟ್‌ನ ಉಲ್ಲಂಘನೆಯನ್ನು ಪತ್ತೆಹಚ್ಚಿದೆ. ನಾವು ಹಾಸ್ಟೆಲ್‌ನ್ನು ಸೀಲ್ ಮಾಡಿದ್ದೇವೆ ಮತ್ತು ಮಕ್ಕಳನ್ನು ಸರ್ಕಾರಿ ವಸತಿ ನಿಲಯಕ್ಕೆ ಸ್ಥಳಾಂತರ ಮಾಡಿದ್ದೇವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

4 ವರ್ಷದ ಬಾಲಕ ತನ್ನ ಪ್ಯಾಂಟ್‌ನಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಗಂಟೆಗಳ ಕಾಲ ಸ್ನಾನಗೃಹದಲ್ಲಿ ಆತನಿಗೆ ದಿಗ್ಭಂಧನ ವಿಧಿಸಲಾಗಿತ್ತು. ಅವನಿಗೆ 2-3 ದಿನಗಳವರೆಗೆ ಆಹಾರವನ್ನು ನೀಡಲಾಗಿಲ್ಲ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಮಕ್ಕಳಿಗಾದ ಗಾಯಗಳ ಕುರಿತು ಚಿತ್ರಗಳಿವೆ. ಅವುಗಳು ಬಿಸಿ ಕಬ್ಬಿಣ ಇಟ್ಟುರುವುದರಿಂದ ಉಂಟಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್ ನಗರ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಭಾನ್ ಸಿಂಗ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಪ್ರಕರಣದ ತನಿಖಾಧಿಕಾರಿಯಾದ ಸಬ್ ಇನ್ಸ್‌ಪೆಕ್ಟರ್ ಕೀರ್ತಿ ತೋಮರ್ ಅವರು ಮಕ್ಕಳ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದಂತೆ ಅವರು ತಲೆಕೆಳಗಾಗಿ ನೇಣು ಹಾಕಿರುವ ಬಗ್ಗೆ ಈ ವೇಳೆ ಹೇಳಲಿಲ್ಲ. ಆದರೆ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಮತ್ತು ಥಳಿಸಲಾಗಿದೆ ಎಂದು ಹೇಳಿರುವ ಬಗ್ಗೆ ಹೇಳಿದ್ದಾರೆ.

ಇಂದೋರ್‌ನ ಅನಾಥಾಶ್ರಮದಲ್ಲಿದ್ದ ಮಕ್ಕಳು ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಒಡಿಶಾ ಮತ್ತು ಮಧ್ಯಪ್ರದೇಶದ ಮಕ್ಕಳಾಗಿದ್ದಾರೆ. ಅವರು ಅಲ್ಲಿಗೆ ಹೇಗೆ ಬಂದಿದ್ದಾರೆ ಎಂಬ ಬಗ್ಗೆ  ಸ್ಪಷ್ಟತೆ ಇಲ್ಲ. ಅನಾಥಾಶ್ರಮದ ಕೇಂದ್ರವು ಇಂದೋರ್, ಜೋಧಪುರ, ಸೂರತ್, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಇದೆ.

ಇದನ್ನು ಓದಿ: ಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...