Homeಮುಖಪುಟಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

- Advertisement -
- Advertisement -

ಇಂದೋರ್‌ನ ಅನಾಥಾಶ್ರಮವೊಂದರಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದ ಘಟನೆ ಬಯಲಾಗಿದ್ದು, ಅಧಿಕಾರಿಗಳು ಅನಾಥಾಶ್ರಮಕ್ಕೆ ಭೇಟಿ ನೀಡಿದ ವೇಳೆ ಮಕ್ಕಳು ದೌರ್ಜನ್ಯದ ಬಗ್ಗೆ ದೂರು ನೀಡಿದ್ದಾರೆ.

ಇಂದೋರ್‌ನ ಅನಾಥಾಶ್ರಮಕ್ಕೆ ಜನವರಿ 12ರಂದು ಸಿಡಬ್ಲ್ಯುಸಿ ಅಧಿಕಾರಿಗಳ ತಂಡ ಹಠಾತ್ ಭೇಟಿ ನೀಡಿ ತಪಾಸಣೆ ನಡೆಸಿದೆ. ಈ ವೇಳೆ ಅನಾಥಾಶ್ರಮದಲ್ಲಿ 4-14 ವರ್ಷದೊಳಗಿನ ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದು ಬಯಲಾಗಿದೆ.  ನಮ್ಮನ್ನು ತಲೆ ಕೆಳಗಾಗಿ ನೇತು ಹಾಕುತ್ತಿದ್ದಾರೆ, ಕಾಯಿಸಿದ ಕಬ್ಬಿಣದಿಂದ ಬರೆ ಹಾಕುತ್ತಾರೆ ಮತ್ತು ತಮ್ಮನ್ನು ಬೆತ್ತಲೆಗೊಳಿಸಿ ಬಳಿಕ ಚಿತ್ರಗಳನ್ನು ತೆಗೆಯುತ್ತಾರೆ, ಬೆಂಕಿಯಲ್ಲಿ ಉರಿಯುತ್ತಿರುವ ಕೆಂಪು ಮೆಣಸಿನಕಾಯಿಯ ಹೊಗೆಯನ್ನು ಉಸಿರಾಡುವಂತೆಯೂ ಮಾಡಲಾಗುತ್ತಿತ್ತು ಎಂದು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಅಧಿಕಾರಿಗಳ ಬಳಿ ಮಕ್ಕಳು ಭಯದಿಂದಲೇ ಹೇಳಿಕೊಂಡಿದ್ದಾರೆ.

ಸಿಡಬ್ಲ್ಯುಸಿ ಅಧಿಕಾರಿಗಳ ದೂರಿನ ಮೇರೆಗೆ ಅನಾಥಾಶ್ರಮದ ಐವರು ಸಿಬ್ಬಂದಿಗಳ ವಿರುದ್ಧ ಜುವೆನೈಲ್ ಜಸ್ಟೀಸ್ ಆಕ್ಟ್ (ಜೆಜೆ ಆಕ್ಟ್) ಮತ್ತು ಐಪಿಸಿಯ ಸೆಕ್ಸನ್‌ಗಳಡಿಯಲ್ಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಪೋಕ್ಸೊ ಕಾಯ್ದೆ ಮತ್ತು ಮಾನವ ಕಳ್ಳಸಾಗಣೆ ಆರೋಪಗಳನ್ನು ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸಲಾಗಿಲ್ಲ. ಅಧಿಕಾರಿಗಳ ತಂಡಕ್ಕೆ ದೂರು ನೀಡಿದ ಮಕ್ಕಳ ಆರೋಪಗಳ ಬಗ್ಗೆ ಪರಿಶೀಲಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಇಂದೋರ್‌ನ ಜಿಲ್ಲಾಧಿಕಾರಿ ಆಶೀಶ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ತಂಡವು ಜುವೆನೈಲ್ ಜಸ್ಟೀಸ್ ಆಕ್ಟ್‌ನ ಉಲ್ಲಂಘನೆಯನ್ನು ಪತ್ತೆಹಚ್ಚಿದೆ. ನಾವು ಹಾಸ್ಟೆಲ್‌ನ್ನು ಸೀಲ್ ಮಾಡಿದ್ದೇವೆ ಮತ್ತು ಮಕ್ಕಳನ್ನು ಸರ್ಕಾರಿ ವಸತಿ ನಿಲಯಕ್ಕೆ ಸ್ಥಳಾಂತರ ಮಾಡಿದ್ದೇವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

4 ವರ್ಷದ ಬಾಲಕ ತನ್ನ ಪ್ಯಾಂಟ್‌ನಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಗಂಟೆಗಳ ಕಾಲ ಸ್ನಾನಗೃಹದಲ್ಲಿ ಆತನಿಗೆ ದಿಗ್ಭಂಧನ ವಿಧಿಸಲಾಗಿತ್ತು. ಅವನಿಗೆ 2-3 ದಿನಗಳವರೆಗೆ ಆಹಾರವನ್ನು ನೀಡಲಾಗಿಲ್ಲ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಮಕ್ಕಳಿಗಾದ ಗಾಯಗಳ ಕುರಿತು ಚಿತ್ರಗಳಿವೆ. ಅವುಗಳು ಬಿಸಿ ಕಬ್ಬಿಣ ಇಟ್ಟುರುವುದರಿಂದ ಉಂಟಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್ ನಗರ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಭಾನ್ ಸಿಂಗ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಪ್ರಕರಣದ ತನಿಖಾಧಿಕಾರಿಯಾದ ಸಬ್ ಇನ್ಸ್‌ಪೆಕ್ಟರ್ ಕೀರ್ತಿ ತೋಮರ್ ಅವರು ಮಕ್ಕಳ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದಂತೆ ಅವರು ತಲೆಕೆಳಗಾಗಿ ನೇಣು ಹಾಕಿರುವ ಬಗ್ಗೆ ಈ ವೇಳೆ ಹೇಳಲಿಲ್ಲ. ಆದರೆ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಮತ್ತು ಥಳಿಸಲಾಗಿದೆ ಎಂದು ಹೇಳಿರುವ ಬಗ್ಗೆ ಹೇಳಿದ್ದಾರೆ.

ಇಂದೋರ್‌ನ ಅನಾಥಾಶ್ರಮದಲ್ಲಿದ್ದ ಮಕ್ಕಳು ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಒಡಿಶಾ ಮತ್ತು ಮಧ್ಯಪ್ರದೇಶದ ಮಕ್ಕಳಾಗಿದ್ದಾರೆ. ಅವರು ಅಲ್ಲಿಗೆ ಹೇಗೆ ಬಂದಿದ್ದಾರೆ ಎಂಬ ಬಗ್ಗೆ  ಸ್ಪಷ್ಟತೆ ಇಲ್ಲ. ಅನಾಥಾಶ್ರಮದ ಕೇಂದ್ರವು ಇಂದೋರ್, ಜೋಧಪುರ, ಸೂರತ್, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಇದೆ.

ಇದನ್ನು ಓದಿ: ಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...