Homeಮುಖಪುಟಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

- Advertisement -
- Advertisement -

ಇಂದೋರ್‌ನ ಅನಾಥಾಶ್ರಮವೊಂದರಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದ ಘಟನೆ ಬಯಲಾಗಿದ್ದು, ಅಧಿಕಾರಿಗಳು ಅನಾಥಾಶ್ರಮಕ್ಕೆ ಭೇಟಿ ನೀಡಿದ ವೇಳೆ ಮಕ್ಕಳು ದೌರ್ಜನ್ಯದ ಬಗ್ಗೆ ದೂರು ನೀಡಿದ್ದಾರೆ.

ಇಂದೋರ್‌ನ ಅನಾಥಾಶ್ರಮಕ್ಕೆ ಜನವರಿ 12ರಂದು ಸಿಡಬ್ಲ್ಯುಸಿ ಅಧಿಕಾರಿಗಳ ತಂಡ ಹಠಾತ್ ಭೇಟಿ ನೀಡಿ ತಪಾಸಣೆ ನಡೆಸಿದೆ. ಈ ವೇಳೆ ಅನಾಥಾಶ್ರಮದಲ್ಲಿ 4-14 ವರ್ಷದೊಳಗಿನ ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದು ಬಯಲಾಗಿದೆ.  ನಮ್ಮನ್ನು ತಲೆ ಕೆಳಗಾಗಿ ನೇತು ಹಾಕುತ್ತಿದ್ದಾರೆ, ಕಾಯಿಸಿದ ಕಬ್ಬಿಣದಿಂದ ಬರೆ ಹಾಕುತ್ತಾರೆ ಮತ್ತು ತಮ್ಮನ್ನು ಬೆತ್ತಲೆಗೊಳಿಸಿ ಬಳಿಕ ಚಿತ್ರಗಳನ್ನು ತೆಗೆಯುತ್ತಾರೆ, ಬೆಂಕಿಯಲ್ಲಿ ಉರಿಯುತ್ತಿರುವ ಕೆಂಪು ಮೆಣಸಿನಕಾಯಿಯ ಹೊಗೆಯನ್ನು ಉಸಿರಾಡುವಂತೆಯೂ ಮಾಡಲಾಗುತ್ತಿತ್ತು ಎಂದು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಅಧಿಕಾರಿಗಳ ಬಳಿ ಮಕ್ಕಳು ಭಯದಿಂದಲೇ ಹೇಳಿಕೊಂಡಿದ್ದಾರೆ.

ಸಿಡಬ್ಲ್ಯುಸಿ ಅಧಿಕಾರಿಗಳ ದೂರಿನ ಮೇರೆಗೆ ಅನಾಥಾಶ್ರಮದ ಐವರು ಸಿಬ್ಬಂದಿಗಳ ವಿರುದ್ಧ ಜುವೆನೈಲ್ ಜಸ್ಟೀಸ್ ಆಕ್ಟ್ (ಜೆಜೆ ಆಕ್ಟ್) ಮತ್ತು ಐಪಿಸಿಯ ಸೆಕ್ಸನ್‌ಗಳಡಿಯಲ್ಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಪೋಕ್ಸೊ ಕಾಯ್ದೆ ಮತ್ತು ಮಾನವ ಕಳ್ಳಸಾಗಣೆ ಆರೋಪಗಳನ್ನು ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸಲಾಗಿಲ್ಲ. ಅಧಿಕಾರಿಗಳ ತಂಡಕ್ಕೆ ದೂರು ನೀಡಿದ ಮಕ್ಕಳ ಆರೋಪಗಳ ಬಗ್ಗೆ ಪರಿಶೀಲಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಇಂದೋರ್‌ನ ಜಿಲ್ಲಾಧಿಕಾರಿ ಆಶೀಶ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ತಂಡವು ಜುವೆನೈಲ್ ಜಸ್ಟೀಸ್ ಆಕ್ಟ್‌ನ ಉಲ್ಲಂಘನೆಯನ್ನು ಪತ್ತೆಹಚ್ಚಿದೆ. ನಾವು ಹಾಸ್ಟೆಲ್‌ನ್ನು ಸೀಲ್ ಮಾಡಿದ್ದೇವೆ ಮತ್ತು ಮಕ್ಕಳನ್ನು ಸರ್ಕಾರಿ ವಸತಿ ನಿಲಯಕ್ಕೆ ಸ್ಥಳಾಂತರ ಮಾಡಿದ್ದೇವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

4 ವರ್ಷದ ಬಾಲಕ ತನ್ನ ಪ್ಯಾಂಟ್‌ನಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಗಂಟೆಗಳ ಕಾಲ ಸ್ನಾನಗೃಹದಲ್ಲಿ ಆತನಿಗೆ ದಿಗ್ಭಂಧನ ವಿಧಿಸಲಾಗಿತ್ತು. ಅವನಿಗೆ 2-3 ದಿನಗಳವರೆಗೆ ಆಹಾರವನ್ನು ನೀಡಲಾಗಿಲ್ಲ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಮಕ್ಕಳಿಗಾದ ಗಾಯಗಳ ಕುರಿತು ಚಿತ್ರಗಳಿವೆ. ಅವುಗಳು ಬಿಸಿ ಕಬ್ಬಿಣ ಇಟ್ಟುರುವುದರಿಂದ ಉಂಟಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್ ನಗರ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಭಾನ್ ಸಿಂಗ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಪ್ರಕರಣದ ತನಿಖಾಧಿಕಾರಿಯಾದ ಸಬ್ ಇನ್ಸ್‌ಪೆಕ್ಟರ್ ಕೀರ್ತಿ ತೋಮರ್ ಅವರು ಮಕ್ಕಳ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದಂತೆ ಅವರು ತಲೆಕೆಳಗಾಗಿ ನೇಣು ಹಾಕಿರುವ ಬಗ್ಗೆ ಈ ವೇಳೆ ಹೇಳಲಿಲ್ಲ. ಆದರೆ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಮತ್ತು ಥಳಿಸಲಾಗಿದೆ ಎಂದು ಹೇಳಿರುವ ಬಗ್ಗೆ ಹೇಳಿದ್ದಾರೆ.

ಇಂದೋರ್‌ನ ಅನಾಥಾಶ್ರಮದಲ್ಲಿದ್ದ ಮಕ್ಕಳು ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಒಡಿಶಾ ಮತ್ತು ಮಧ್ಯಪ್ರದೇಶದ ಮಕ್ಕಳಾಗಿದ್ದಾರೆ. ಅವರು ಅಲ್ಲಿಗೆ ಹೇಗೆ ಬಂದಿದ್ದಾರೆ ಎಂಬ ಬಗ್ಗೆ  ಸ್ಪಷ್ಟತೆ ಇಲ್ಲ. ಅನಾಥಾಶ್ರಮದ ಕೇಂದ್ರವು ಇಂದೋರ್, ಜೋಧಪುರ, ಸೂರತ್, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಇದೆ.

ಇದನ್ನು ಓದಿ: ಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...