Homeಮುಖಪುಟಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು.

ಕಲುಷಿತ ನೀರು ಕುಡಿದು ವಾಂತಿ ಮತ್ತು ಅತಿಸಾರದಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿಯಾದ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ್ದು, ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಇನ್ನು ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ವರದಿಗಳ ಪ್ರಕಾರ, ಮೊದಲು ಇಂದೋರ್‌ ನಗರದ ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ರೋಗಿಗಳನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದು, ಅವರ ಆರೋಗ್ಯ ವಿಚಾರಿಸಿದ್ದಾರೆ. ಅವರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ದುರಂತ ಸಂಭವಿಸಿದ ಭಾಗೀರಥಿಪುರಕ್ಕೆ ತೆರಳಿದ ರಾಹುಲ್ ಗಾಂಧಿ ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಭಾಗೀರಥಿಪುರದಲ್ಲಿ ಕಲುಷಿತ ನೀರು ಕುಡಿದು ತೊಂದರೆಗೊಳಗಾದವರನ್ನು ನಾನು ಭೇಟಿಯಾದೆ. ಅನೇಕರ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ದೇಶಕ್ಕೆ ‘ಸ್ಮಾರ್ಟ್ ಸಿಟಿ’ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಇದು ಸ್ಮಾರ್ಟ್ ಸಿಟಿಯ ಹೊಸ ಮಾದರಿಯಾಗಿದೆ. ಇಲ್ಲಿ ಕುಡಿಯುಲು ನೀರಿಲ್ಲ, ಜನರನ್ನು ಬೆದರಿಸಲಾಗುತ್ತಿದೆ. ಇಂದೋರ್‌ನಲ್ಲಿ ಶುದ್ಧ ನೀರು ಲಭ್ಯವಿಲ್ಲ. ಕಲುಷಿತ ನೀರು ಕುಡಿದು ಜನರು ಸಾವನ್ನಪ್ಪಿದ್ದಾರೆ. ಇದು ಸರ್ಕಾರದ ‘ನಗರ ಮಾದರಿ” ಎಂದಿದ್ದಾರೆ.

“ಇದು ಇಂದೋರ್‌ಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಇತರ ನಗರಗಳಲ್ಲಿಯೂ ನಡೆಯುತ್ತಿದೆ. ಸರ್ಕಾರ ಇದಕ್ಕೆ ಹೊಣೆ ಹೊರಬೇಕು ಮತ್ತು ಸಂತ್ರಸ್ತರಿಗೆ ಸರಿಯಾದ ಪರಿಹಾರ ಸಿಗಬೇಕು. ಇಂದಿಗೂ ಇಲ್ಲಿ ಶುದ್ಧ ನೀರು ಲಭ್ಯವಿಲ್ಲ. ವಿರೋಧ ಪಕ್ಷದ ನಾಯಕನಾಗಿ, ನಾನು ಅವರ ಪರ ಧ್ವನಿ ಎತ್ತಲು ಬಂದಿದ್ದೇನೆ; ಇದು ನನ್ನ ಜವಾಬ್ದಾರಿ – ನಾನು ಸಂತ್ರಸ್ತ ಕುಟುಂಬಗಳೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಮತ್ತು ಗಂಧ್ವಾನಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘಾರ್ ಅವರು ರಾಹುಲ್ ಗಾಂಧಿಯವರ ಜೊತೆಗಿದ್ದರು. ಭೇಟಿಗೂ ಮುನ್ನ ಭಾಗೀರಥಪುರದಲ್ಲಿ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದರು, ಅನೇಕ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ಭಾಗೀರಥಪುರದ ನಿವಾಸಿಗಳು ಕಲುಷಿತ ನೀರಿನಿಂದ 24 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಆದಾಗ್ಯೂ, ಮಧ್ಯಪ್ರದೇಶ ಹೈಕೋರ್ಟ್‌ಗೆ ಸಲ್ಲಿಸಿದ ತನ್ನ ಸ್ಥಿತಿಗತಿ ವರದಿಯಲ್ಲಿ, ರಾಜ್ಯ ಸರ್ಕಾರವು ಐದು ತಿಂಗಳ ಶಿಶು ಸೇರಿದಂತೆ ಏಳು ಜನರು ಬಲಿಯಾಗಿರುವುದಾಗಿ ಹೇಳಿದೆ. ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜಿನ ಸಮಿತಿಯು 15 ಸಾವುಗಳು ಯಾವುದೋ ರೀತಿಯಲ್ಲಿ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿರಬಹುದು ಎಂದಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಈ ಹಿಂದೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಎಲ್ಲಾ ಸಂತ್ರಸ್ತ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದ್ದರು. ಕೆಲವು ಸಾವುಗಳು ಇತರ ಕಾರಣಗಳಿಂದ ಸಂಭವಿಸಿದ್ದರೂ, ಮಾನವೀಯ ಆಧಾರದ ಮೇಲೆ ಎಲ್ಲಾ ದುಖಿಃತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...