Homeಮುಖಪುಟಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು.

ಕಲುಷಿತ ನೀರು ಕುಡಿದು ವಾಂತಿ ಮತ್ತು ಅತಿಸಾರದಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿಯಾದ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ್ದು, ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಇನ್ನು ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ವರದಿಗಳ ಪ್ರಕಾರ, ಮೊದಲು ಇಂದೋರ್‌ ನಗರದ ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ರೋಗಿಗಳನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದು, ಅವರ ಆರೋಗ್ಯ ವಿಚಾರಿಸಿದ್ದಾರೆ. ಅವರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ದುರಂತ ಸಂಭವಿಸಿದ ಭಾಗೀರಥಿಪುರಕ್ಕೆ ತೆರಳಿದ ರಾಹುಲ್ ಗಾಂಧಿ ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಭಾಗೀರಥಿಪುರದಲ್ಲಿ ಕಲುಷಿತ ನೀರು ಕುಡಿದು ತೊಂದರೆಗೊಳಗಾದವರನ್ನು ನಾನು ಭೇಟಿಯಾದೆ. ಅನೇಕರ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ದೇಶಕ್ಕೆ ‘ಸ್ಮಾರ್ಟ್ ಸಿಟಿ’ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಇದು ಸ್ಮಾರ್ಟ್ ಸಿಟಿಯ ಹೊಸ ಮಾದರಿಯಾಗಿದೆ. ಇಲ್ಲಿ ಕುಡಿಯುಲು ನೀರಿಲ್ಲ, ಜನರನ್ನು ಬೆದರಿಸಲಾಗುತ್ತಿದೆ. ಇಂದೋರ್‌ನಲ್ಲಿ ಶುದ್ಧ ನೀರು ಲಭ್ಯವಿಲ್ಲ. ಕಲುಷಿತ ನೀರು ಕುಡಿದು ಜನರು ಸಾವನ್ನಪ್ಪಿದ್ದಾರೆ. ಇದು ಸರ್ಕಾರದ ‘ನಗರ ಮಾದರಿ” ಎಂದಿದ್ದಾರೆ.

“ಇದು ಇಂದೋರ್‌ಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಇತರ ನಗರಗಳಲ್ಲಿಯೂ ನಡೆಯುತ್ತಿದೆ. ಸರ್ಕಾರ ಇದಕ್ಕೆ ಹೊಣೆ ಹೊರಬೇಕು ಮತ್ತು ಸಂತ್ರಸ್ತರಿಗೆ ಸರಿಯಾದ ಪರಿಹಾರ ಸಿಗಬೇಕು. ಇಂದಿಗೂ ಇಲ್ಲಿ ಶುದ್ಧ ನೀರು ಲಭ್ಯವಿಲ್ಲ. ವಿರೋಧ ಪಕ್ಷದ ನಾಯಕನಾಗಿ, ನಾನು ಅವರ ಪರ ಧ್ವನಿ ಎತ್ತಲು ಬಂದಿದ್ದೇನೆ; ಇದು ನನ್ನ ಜವಾಬ್ದಾರಿ – ನಾನು ಸಂತ್ರಸ್ತ ಕುಟುಂಬಗಳೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಮತ್ತು ಗಂಧ್ವಾನಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘಾರ್ ಅವರು ರಾಹುಲ್ ಗಾಂಧಿಯವರ ಜೊತೆಗಿದ್ದರು. ಭೇಟಿಗೂ ಮುನ್ನ ಭಾಗೀರಥಪುರದಲ್ಲಿ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದರು, ಅನೇಕ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ಭಾಗೀರಥಪುರದ ನಿವಾಸಿಗಳು ಕಲುಷಿತ ನೀರಿನಿಂದ 24 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಆದಾಗ್ಯೂ, ಮಧ್ಯಪ್ರದೇಶ ಹೈಕೋರ್ಟ್‌ಗೆ ಸಲ್ಲಿಸಿದ ತನ್ನ ಸ್ಥಿತಿಗತಿ ವರದಿಯಲ್ಲಿ, ರಾಜ್ಯ ಸರ್ಕಾರವು ಐದು ತಿಂಗಳ ಶಿಶು ಸೇರಿದಂತೆ ಏಳು ಜನರು ಬಲಿಯಾಗಿರುವುದಾಗಿ ಹೇಳಿದೆ. ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜಿನ ಸಮಿತಿಯು 15 ಸಾವುಗಳು ಯಾವುದೋ ರೀತಿಯಲ್ಲಿ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿರಬಹುದು ಎಂದಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಈ ಹಿಂದೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಎಲ್ಲಾ ಸಂತ್ರಸ್ತ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದ್ದರು. ಕೆಲವು ಸಾವುಗಳು ಇತರ ಕಾರಣಗಳಿಂದ ಸಂಭವಿಸಿದ್ದರೂ, ಮಾನವೀಯ ಆಧಾರದ ಮೇಲೆ ಎಲ್ಲಾ ದುಖಿಃತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...