Homeಮುಖಪುಟಸಿಂಧೂ ಒಪ್ಪಂದ ರದ್ದತಿ ನಂತರ ಪಂಜಾಬ್, ಹಿಮಾಚಲದ ಪ್ರಮುಖ ಅಣೆಕಟ್ಟುಗಳಲ್ಲಿ ಭದ್ರತೆ ಹೆಚ್ಚಳ

ಸಿಂಧೂ ಒಪ್ಪಂದ ರದ್ದತಿ ನಂತರ ಪಂಜಾಬ್, ಹಿಮಾಚಲದ ಪ್ರಮುಖ ಅಣೆಕಟ್ಟುಗಳಲ್ಲಿ ಭದ್ರತೆ ಹೆಚ್ಚಳ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಸ್ಥಗಿತಗೊಳಿಸಿದ ನಂತರ ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಸಿಂಧೂ ಜಲಾನಯನ ಪ್ರದೇಶದಾದ್ಯಂತದ ಇರುವ ಪ್ರಮುಖ ಅಣೆಕಟ್ಟುಗಳು ಮತ್ತು ಪ್ರಧಾನ ಕಾಮಗಾರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಸಿಂಧೂ ಒಪ್ಪಂದ ರದ್ದತಿ

ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ (ಬಿಬಿಎಂಬಿ) ನಿರ್ವಹಿಸುವ ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳು ಮತ್ತು ಪಂಜಾಬ್ ನೀರಾವರಿ ಇಲಾಖೆಯಿಂದ ನಿರ್ವಹಿಸಲ್ಪಡುವ ರಂಜಿತ್ ಸಾಗರ್ ಅಣೆಕಟ್ಟು ಯೋಜನೆ (ಥೀನ್ ಅಣೆಕಟ್ಟು) ಮತ್ತು ಎರಡೂ ರಾಜ್ಯಗಳಲ್ಲಿನ ಹಲವಾರು ಪ್ರಧಾನ ಕಾಮಗಾರಿಗಳಿಗೆ ಭದ್ರತಾ ಬೆದರಿಕೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

“ಅಣೆಕಟ್ಟುಗಳು ಭಯೋತ್ಪಾದಕ ದಾಳಿಗಳಿಗೆ ನಿರೋಧಕವಾಗಿರಬಹುದು, ಆದರೆ ಬಾಹ್ಯ ರಚನೆಗಳು, ಪ್ರಸರಣ ಮಾರ್ಗಗಳು, ಇತರ ಸ್ಥಾಪನೆಗಳು ಮತ್ತು ಉದ್ಯೋಗಿಗಳನ್ನು ಗುರಿಯಾಗಿಸು ಸಾಧ್ಯತೆಯಿದೆ. ಭೌತಿಕ ಹಾನಿಗಿಂತ ಹೆಚ್ಚಾಗಿ, ಒಂದು ಸಣ್ಣ ಘಟನೆಯೂ ಸಹ ಭಯವನ್ನು ಉಂಟುಮಾಡಲಿದೆ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಪಂಜಾಬ್‌ನಲ್ಲಿ ಪೊಲೀಸ್ ಇಲಾಖೆಯ ಕಟ್ಟಡಗಳ ಮೇಲೆ ಗ್ರೆನೇಡ್‌ ದಾಳಿಯ ಘಟನೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಅಂತಹ 16 ಘಟನೆಗಳು ವರದಿಯಾಗಿವೆ ಮತ್ತು ರಾಜ್ಯ ಪೊಲೀಸರು ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ, ಇದರಿಂದಾಗಿ ಹೆಚ್ಚಿನ ಭದ್ರತಾ ಕ್ರಮಗಳು ಅಗತ್ಯವಾಗಿವೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಹಿಮಾಚಲ ಪ್ರದೇಶದ ಮಂಡಿಯಲ್ಲಿರುವ ಬಿಯಾಸ್ ಸಟ್ಲೆಜ್ ಲಿಂಕ್ ಯೋಜನೆಯ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ವಹಿಸಿಕೊಂಡಿತ್ತು. ಅಲ್ಲಿ ಅರೆಸೈನಿಕ ಪಡೆಯ 235 ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಲಕ್ಷಾಂತರ ಜನರಿಗೆ ಪ್ರಯೋಜನವಾಗುವ ನೀರಾವರಿ, ಪ್ರವಾಹ ನಿಯಂತ್ರಣ ಮತ್ತು ವಿದ್ಯುತ್ ಉತ್ಪಾದನೆಗೆ ಈ ಯೋಜನೆ ಅತ್ಯಗತ್ಯವಾಗಿದೆ. ಭಾಕ್ರಾ ಅಣೆಕಟ್ಟಿನಲ್ಲಿ ಕೂಡಾ ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಪೊಲೀಸರ ಬದಲಿಗೆ ಸಿಐಎಸ್‌ಎಫ್ ಅನ್ನು ನಿಯೋಜಿಸಲು ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಿಂಧೂ ಒಪ್ಪಂದ ರದ್ದತಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...