Homeಮುಖಪುಟಸಿಂಧೂ ಒಪ್ಪಂದ ರದ್ದತಿ ನಂತರ ಪಂಜಾಬ್, ಹಿಮಾಚಲದ ಪ್ರಮುಖ ಅಣೆಕಟ್ಟುಗಳಲ್ಲಿ ಭದ್ರತೆ ಹೆಚ್ಚಳ

ಸಿಂಧೂ ಒಪ್ಪಂದ ರದ್ದತಿ ನಂತರ ಪಂಜಾಬ್, ಹಿಮಾಚಲದ ಪ್ರಮುಖ ಅಣೆಕಟ್ಟುಗಳಲ್ಲಿ ಭದ್ರತೆ ಹೆಚ್ಚಳ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಸ್ಥಗಿತಗೊಳಿಸಿದ ನಂತರ ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಸಿಂಧೂ ಜಲಾನಯನ ಪ್ರದೇಶದಾದ್ಯಂತದ ಇರುವ ಪ್ರಮುಖ ಅಣೆಕಟ್ಟುಗಳು ಮತ್ತು ಪ್ರಧಾನ ಕಾಮಗಾರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಸಿಂಧೂ ಒಪ್ಪಂದ ರದ್ದತಿ

ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ (ಬಿಬಿಎಂಬಿ) ನಿರ್ವಹಿಸುವ ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳು ಮತ್ತು ಪಂಜಾಬ್ ನೀರಾವರಿ ಇಲಾಖೆಯಿಂದ ನಿರ್ವಹಿಸಲ್ಪಡುವ ರಂಜಿತ್ ಸಾಗರ್ ಅಣೆಕಟ್ಟು ಯೋಜನೆ (ಥೀನ್ ಅಣೆಕಟ್ಟು) ಮತ್ತು ಎರಡೂ ರಾಜ್ಯಗಳಲ್ಲಿನ ಹಲವಾರು ಪ್ರಧಾನ ಕಾಮಗಾರಿಗಳಿಗೆ ಭದ್ರತಾ ಬೆದರಿಕೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

“ಅಣೆಕಟ್ಟುಗಳು ಭಯೋತ್ಪಾದಕ ದಾಳಿಗಳಿಗೆ ನಿರೋಧಕವಾಗಿರಬಹುದು, ಆದರೆ ಬಾಹ್ಯ ರಚನೆಗಳು, ಪ್ರಸರಣ ಮಾರ್ಗಗಳು, ಇತರ ಸ್ಥಾಪನೆಗಳು ಮತ್ತು ಉದ್ಯೋಗಿಗಳನ್ನು ಗುರಿಯಾಗಿಸು ಸಾಧ್ಯತೆಯಿದೆ. ಭೌತಿಕ ಹಾನಿಗಿಂತ ಹೆಚ್ಚಾಗಿ, ಒಂದು ಸಣ್ಣ ಘಟನೆಯೂ ಸಹ ಭಯವನ್ನು ಉಂಟುಮಾಡಲಿದೆ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಪಂಜಾಬ್‌ನಲ್ಲಿ ಪೊಲೀಸ್ ಇಲಾಖೆಯ ಕಟ್ಟಡಗಳ ಮೇಲೆ ಗ್ರೆನೇಡ್‌ ದಾಳಿಯ ಘಟನೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಅಂತಹ 16 ಘಟನೆಗಳು ವರದಿಯಾಗಿವೆ ಮತ್ತು ರಾಜ್ಯ ಪೊಲೀಸರು ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ, ಇದರಿಂದಾಗಿ ಹೆಚ್ಚಿನ ಭದ್ರತಾ ಕ್ರಮಗಳು ಅಗತ್ಯವಾಗಿವೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಹಿಮಾಚಲ ಪ್ರದೇಶದ ಮಂಡಿಯಲ್ಲಿರುವ ಬಿಯಾಸ್ ಸಟ್ಲೆಜ್ ಲಿಂಕ್ ಯೋಜನೆಯ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ವಹಿಸಿಕೊಂಡಿತ್ತು. ಅಲ್ಲಿ ಅರೆಸೈನಿಕ ಪಡೆಯ 235 ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಲಕ್ಷಾಂತರ ಜನರಿಗೆ ಪ್ರಯೋಜನವಾಗುವ ನೀರಾವರಿ, ಪ್ರವಾಹ ನಿಯಂತ್ರಣ ಮತ್ತು ವಿದ್ಯುತ್ ಉತ್ಪಾದನೆಗೆ ಈ ಯೋಜನೆ ಅತ್ಯಗತ್ಯವಾಗಿದೆ. ಭಾಕ್ರಾ ಅಣೆಕಟ್ಟಿನಲ್ಲಿ ಕೂಡಾ ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಪೊಲೀಸರ ಬದಲಿಗೆ ಸಿಐಎಸ್‌ಎಫ್ ಅನ್ನು ನಿಯೋಜಿಸಲು ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಿಂಧೂ ಒಪ್ಪಂದ ರದ್ದತಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...