Homeಮುಖಪುಟಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ - ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ಪ್ರಾಚೀನ ಸಿಂಧೂ ಕಣಿವೆಯ ಲಿಪಿಯು ಶತಮಾನಕ್ಕೂ ಹೆಚ್ಚು ಕಾಲ ಬಿಡಿಸಲಾಗದ ಒಗಟಾಗಿ ಉಳಿದಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಚೆನ್ನೈನಲ್ಲಿ ಹೇಳಿದ್ದು, ಲಿಪಿಗಳನ್ನು ಅರ್ಥೈಸುವಲ್ಲಿ ಯಶಸ್ವಿಯಾಗುವ ತಜ್ಞರು ಅಥವಾ ಸಂಸ್ಥೆಗಳಿಗೆ 1 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡುವುದಾಗಿ ಅವರು ಘೋಷಿಸಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ನಾಗರಿಕತೆಯ ಆವಿಷ್ಕಾರದ ಶತಮಾನೋತ್ಸವದ ಅಂಗವಾಗಿ 3 ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಟಾಲಿನ್, “ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬಂದ ಸಿಂಧೂ ಕಣಿವೆಯ ನಾಗರಿಕತೆಯ ಲಿಪಿ 100 ವರ್ಷಗಳ ನಂತರವೂ ನಿಗೂಢವಾಗಿಯೇ ಉಳಿದಿದೆ. ಪುರಾತತ್ವಶಾಸ್ತ್ರಜ್ಞರು, ತಮಿಳು ಕಂಪ್ಯೂಟರ್ ಸಾಫ್ಟ್‌ವೇರ್ ತಜ್ಞರು ಮತ್ತು ಪ್ರಪಂಚದಾದ್ಯಂತದ ಕಂಪ್ಯೂಟರ್ ತಜ್ಞರು ಲಿಪಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಶೋಧನೆಗೆ ಉತ್ತೇಜನ ನೀಡಲು ಸರ್ಕಾರ ಒಂದು ಮಿಲಿಯನ್ ಡಾಲರ್ ನೀಡಲಿದೆ’’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮಿಳು ಸಂಸ್ಕೃತಿಯ ಪ್ರಾಚೀನತೆಯನ್ನು ಎತ್ತಿ ಹಿಡಿಯಲು ಶ್ರಮಿಸುತ್ತಿರುವ ನಾಣ್ಯಶಾಸ್ತ್ರಜ್ಞರು ಮತ್ತು ಶಾಸನಶಾಸ್ತ್ರಜ್ಞರನ್ನು ಗೌರವಿಸಲು ಮತ್ತು ಪ್ರೋತ್ಸಾಹಿಸಲು ಸರ್ಕಾರ ಎರಡು ಪ್ರಶಸ್ತಿಗಳನ್ನು ಸ್ಥಾಪಿಸುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ಕಣಿವೆ ನಾಗರೀಕತೆಯಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ಮುದ್ರೆಗಳಲ್ಲಿನ ಚಿಹ್ನೆಗಳು ತಮಿಳುನಾಡಿನ ಪುರಾತತ್ತ್ವ ಶಾಸ್ತ್ರದ ಉತ್ಖನನದ ಸಮಯದಲ್ಲಿ ಕಂಡುಬಂದ ಚಿಹ್ನೆಗಳೊಂದಿಗೆ 60 ಪ್ರತಿಶತದಷ್ಟು ಹೋಲಿಕೆಯನ್ನು ಹೊಂದಿವೆ ಎಂದು ಸೂಚಿಸಿದ ಸ್ಟಾಲಿನ್, ಸಿಂಧೂ ಕಣಿವೆಯ ನಾಗರಿಕತೆಯ ಕುಂಡಗಳಲ್ಲಿ ಇರುವ ಚಿಹ್ನೆಗಳು, ತಮಿಳುನಾಡಿನ ಮಣ್ಣಿನ ಪಾತ್ರೆಗಳಲ್ಲಿ ಕಂಡುಬರುವ ಚಿಹ್ನೆಗಳಿಗೆ 90% ಸಾಮ್ಯತೆಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.

“ಆರ್ಯನ್ ಮತ್ತು ಸಂಸ್ಕೃತ ಭಾರತದ ಮೂಲ ಸಂಸ್ಕೃತಿ ಎಂದು ಹಲವರು ವಾದಿಸುತ್ತಿದ್ದರು. ಆದರೆ, ಜಾನ್ ಮಾರ್ಷಲ್ ಅವರ ಆವಿಷ್ಕಾರವು ಈ ಗ್ರಹಿಕೆಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸಿಂಧೂ ಕಣಿವೆ ನಾಗರೀಕತೆಯು ಆರ್ಯರ ನಾಗರಿಕತೆಗಿಂತ ಹಿಂದಿನದು ಮತ್ತು ಸಿಂಧೂ ಕಣಿವೆಯಲ್ಲಿ ಮಾತನಾಡುವ ಭಾಷೆ ದ್ರಾವಿಡವಾಗಿರಬಹುದು ಎಂಬ ಅವರ ವಾದವು ಮತ್ತಷ್ಟು ಬಲಗೊಂಡಿದೆ,” ಎಂದು ಸ್ಟಾಲಿನ್ ಹೇಳಿದ್ದಾರೆ.

ಸಿಂಧೂ ಕಣಿವೆಯಲ್ಲಿ ದ್ರಾವಿಡ ಸಂಕೇತವಾಗಿರುವ ಗೂಳಿಗಳಿವೆ ಎಂದು ಸ್ಟಾಲಿನ್ ಹೇಳಿದ್ದಾರೆ. “ಎತ್ತುಗಳು ಸಿಂಧೂ ಕಣಿವೆಯಿಂದ ತಮಿಳುನಾಡಿನ ಅಲಂಗನಲ್ಲೂರ್ (ಜಲ್ಲಿಕಟ್ಟು ನಡೆಯುವ ಸ್ಥಳ) ವರೆಗೆ ಹರಡಿವೆ. ಪುರಾತನ ತಮಿಳು ಸಾಹಿತ್ಯವು ಗೂಳಿಗಳನ್ನು ಪಳಗಿಸುವ ಬಗ್ಗೆ ಮಾತನಾಡುತ್ತದೆ ಮತ್ತು ಇದನ್ನು ಕೊಲ್ಲೆರು ತಝುವುತಲ್ ಎಂದು ಕರೆಯಲಾಗುತ್ತದೆ. ಸಿಂಧೂ ಕಣಿವೆಯ ಚಿಹ್ನೆಗಳಲ್ಲಿಯೂ ಸಹ ಅದನ್ನು ಪಳಗಿಸಲು ಪ್ರಯತ್ನಿಸಿದ ಯುವಕರನ್ನು ಎತ್ತುವ ಗೂಳಿಗಳ ಚಿತ್ರಗಳಿವೆ” ಎಂದು ಅವರು ಹೇಳಿದ್ದಾರೆ.

ಈ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಹಣಕಾಸು ಮತ್ತು ಪುರಾತತ್ವ ಸಚಿವ ತಂಗಂ ತೆನ್ನರಸು ಮತ್ತು ಹಣಕಾಸು ಕಾರ್ಯದರ್ಶಿ ಟಿ.ಉದಯಚಂದ್ರನ್ ಅವರು ರಾಜ್ಯದಲ್ಲಿ ಇರುವುದು ತಮಿಳುನಾಡಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಿಂಧೂ ನಾಗರೀಕತೆ, ಅತ್ಯಂತ ಪ್ರಾಚೀನವಾದ ನಾಗರೀಕತೆಯಾಗಿದ್ದು, ಅದು ಅದರ ನಗರ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಈ ನಾಗರೀಕತೆಯ ಲಿಪಿಯನ್ನು ಇನ್ನೂ ಓದಲು ಸಾಧ್ಯವಾಗಿಲ್ಲ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...