Homeಮುಖಪುಟಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ - ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ಪ್ರಾಚೀನ ಸಿಂಧೂ ಕಣಿವೆಯ ಲಿಪಿಯು ಶತಮಾನಕ್ಕೂ ಹೆಚ್ಚು ಕಾಲ ಬಿಡಿಸಲಾಗದ ಒಗಟಾಗಿ ಉಳಿದಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಚೆನ್ನೈನಲ್ಲಿ ಹೇಳಿದ್ದು, ಲಿಪಿಗಳನ್ನು ಅರ್ಥೈಸುವಲ್ಲಿ ಯಶಸ್ವಿಯಾಗುವ ತಜ್ಞರು ಅಥವಾ ಸಂಸ್ಥೆಗಳಿಗೆ 1 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡುವುದಾಗಿ ಅವರು ಘೋಷಿಸಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ನಾಗರಿಕತೆಯ ಆವಿಷ್ಕಾರದ ಶತಮಾನೋತ್ಸವದ ಅಂಗವಾಗಿ 3 ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಟಾಲಿನ್, “ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬಂದ ಸಿಂಧೂ ಕಣಿವೆಯ ನಾಗರಿಕತೆಯ ಲಿಪಿ 100 ವರ್ಷಗಳ ನಂತರವೂ ನಿಗೂಢವಾಗಿಯೇ ಉಳಿದಿದೆ. ಪುರಾತತ್ವಶಾಸ್ತ್ರಜ್ಞರು, ತಮಿಳು ಕಂಪ್ಯೂಟರ್ ಸಾಫ್ಟ್‌ವೇರ್ ತಜ್ಞರು ಮತ್ತು ಪ್ರಪಂಚದಾದ್ಯಂತದ ಕಂಪ್ಯೂಟರ್ ತಜ್ಞರು ಲಿಪಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಶೋಧನೆಗೆ ಉತ್ತೇಜನ ನೀಡಲು ಸರ್ಕಾರ ಒಂದು ಮಿಲಿಯನ್ ಡಾಲರ್ ನೀಡಲಿದೆ’’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮಿಳು ಸಂಸ್ಕೃತಿಯ ಪ್ರಾಚೀನತೆಯನ್ನು ಎತ್ತಿ ಹಿಡಿಯಲು ಶ್ರಮಿಸುತ್ತಿರುವ ನಾಣ್ಯಶಾಸ್ತ್ರಜ್ಞರು ಮತ್ತು ಶಾಸನಶಾಸ್ತ್ರಜ್ಞರನ್ನು ಗೌರವಿಸಲು ಮತ್ತು ಪ್ರೋತ್ಸಾಹಿಸಲು ಸರ್ಕಾರ ಎರಡು ಪ್ರಶಸ್ತಿಗಳನ್ನು ಸ್ಥಾಪಿಸುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ಕಣಿವೆ ನಾಗರೀಕತೆಯಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ಮುದ್ರೆಗಳಲ್ಲಿನ ಚಿಹ್ನೆಗಳು ತಮಿಳುನಾಡಿನ ಪುರಾತತ್ತ್ವ ಶಾಸ್ತ್ರದ ಉತ್ಖನನದ ಸಮಯದಲ್ಲಿ ಕಂಡುಬಂದ ಚಿಹ್ನೆಗಳೊಂದಿಗೆ 60 ಪ್ರತಿಶತದಷ್ಟು ಹೋಲಿಕೆಯನ್ನು ಹೊಂದಿವೆ ಎಂದು ಸೂಚಿಸಿದ ಸ್ಟಾಲಿನ್, ಸಿಂಧೂ ಕಣಿವೆಯ ನಾಗರಿಕತೆಯ ಕುಂಡಗಳಲ್ಲಿ ಇರುವ ಚಿಹ್ನೆಗಳು, ತಮಿಳುನಾಡಿನ ಮಣ್ಣಿನ ಪಾತ್ರೆಗಳಲ್ಲಿ ಕಂಡುಬರುವ ಚಿಹ್ನೆಗಳಿಗೆ 90% ಸಾಮ್ಯತೆಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.

“ಆರ್ಯನ್ ಮತ್ತು ಸಂಸ್ಕೃತ ಭಾರತದ ಮೂಲ ಸಂಸ್ಕೃತಿ ಎಂದು ಹಲವರು ವಾದಿಸುತ್ತಿದ್ದರು. ಆದರೆ, ಜಾನ್ ಮಾರ್ಷಲ್ ಅವರ ಆವಿಷ್ಕಾರವು ಈ ಗ್ರಹಿಕೆಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸಿಂಧೂ ಕಣಿವೆ ನಾಗರೀಕತೆಯು ಆರ್ಯರ ನಾಗರಿಕತೆಗಿಂತ ಹಿಂದಿನದು ಮತ್ತು ಸಿಂಧೂ ಕಣಿವೆಯಲ್ಲಿ ಮಾತನಾಡುವ ಭಾಷೆ ದ್ರಾವಿಡವಾಗಿರಬಹುದು ಎಂಬ ಅವರ ವಾದವು ಮತ್ತಷ್ಟು ಬಲಗೊಂಡಿದೆ,” ಎಂದು ಸ್ಟಾಲಿನ್ ಹೇಳಿದ್ದಾರೆ.

ಸಿಂಧೂ ಕಣಿವೆಯಲ್ಲಿ ದ್ರಾವಿಡ ಸಂಕೇತವಾಗಿರುವ ಗೂಳಿಗಳಿವೆ ಎಂದು ಸ್ಟಾಲಿನ್ ಹೇಳಿದ್ದಾರೆ. “ಎತ್ತುಗಳು ಸಿಂಧೂ ಕಣಿವೆಯಿಂದ ತಮಿಳುನಾಡಿನ ಅಲಂಗನಲ್ಲೂರ್ (ಜಲ್ಲಿಕಟ್ಟು ನಡೆಯುವ ಸ್ಥಳ) ವರೆಗೆ ಹರಡಿವೆ. ಪುರಾತನ ತಮಿಳು ಸಾಹಿತ್ಯವು ಗೂಳಿಗಳನ್ನು ಪಳಗಿಸುವ ಬಗ್ಗೆ ಮಾತನಾಡುತ್ತದೆ ಮತ್ತು ಇದನ್ನು ಕೊಲ್ಲೆರು ತಝುವುತಲ್ ಎಂದು ಕರೆಯಲಾಗುತ್ತದೆ. ಸಿಂಧೂ ಕಣಿವೆಯ ಚಿಹ್ನೆಗಳಲ್ಲಿಯೂ ಸಹ ಅದನ್ನು ಪಳಗಿಸಲು ಪ್ರಯತ್ನಿಸಿದ ಯುವಕರನ್ನು ಎತ್ತುವ ಗೂಳಿಗಳ ಚಿತ್ರಗಳಿವೆ” ಎಂದು ಅವರು ಹೇಳಿದ್ದಾರೆ.

ಈ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಹಣಕಾಸು ಮತ್ತು ಪುರಾತತ್ವ ಸಚಿವ ತಂಗಂ ತೆನ್ನರಸು ಮತ್ತು ಹಣಕಾಸು ಕಾರ್ಯದರ್ಶಿ ಟಿ.ಉದಯಚಂದ್ರನ್ ಅವರು ರಾಜ್ಯದಲ್ಲಿ ಇರುವುದು ತಮಿಳುನಾಡಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಿಂಧೂ ನಾಗರೀಕತೆ, ಅತ್ಯಂತ ಪ್ರಾಚೀನವಾದ ನಾಗರೀಕತೆಯಾಗಿದ್ದು, ಅದು ಅದರ ನಗರ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಈ ನಾಗರೀಕತೆಯ ಲಿಪಿಯನ್ನು ಇನ್ನೂ ಓದಲು ಸಾಧ್ಯವಾಗಿಲ್ಲ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...