Homeಮುಖಪುಟಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ - ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ಪ್ರಾಚೀನ ಸಿಂಧೂ ಕಣಿವೆಯ ಲಿಪಿಯು ಶತಮಾನಕ್ಕೂ ಹೆಚ್ಚು ಕಾಲ ಬಿಡಿಸಲಾಗದ ಒಗಟಾಗಿ ಉಳಿದಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಚೆನ್ನೈನಲ್ಲಿ ಹೇಳಿದ್ದು, ಲಿಪಿಗಳನ್ನು ಅರ್ಥೈಸುವಲ್ಲಿ ಯಶಸ್ವಿಯಾಗುವ ತಜ್ಞರು ಅಥವಾ ಸಂಸ್ಥೆಗಳಿಗೆ 1 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡುವುದಾಗಿ ಅವರು ಘೋಷಿಸಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ನಾಗರಿಕತೆಯ ಆವಿಷ್ಕಾರದ ಶತಮಾನೋತ್ಸವದ ಅಂಗವಾಗಿ 3 ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಟಾಲಿನ್, “ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬಂದ ಸಿಂಧೂ ಕಣಿವೆಯ ನಾಗರಿಕತೆಯ ಲಿಪಿ 100 ವರ್ಷಗಳ ನಂತರವೂ ನಿಗೂಢವಾಗಿಯೇ ಉಳಿದಿದೆ. ಪುರಾತತ್ವಶಾಸ್ತ್ರಜ್ಞರು, ತಮಿಳು ಕಂಪ್ಯೂಟರ್ ಸಾಫ್ಟ್‌ವೇರ್ ತಜ್ಞರು ಮತ್ತು ಪ್ರಪಂಚದಾದ್ಯಂತದ ಕಂಪ್ಯೂಟರ್ ತಜ್ಞರು ಲಿಪಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಶೋಧನೆಗೆ ಉತ್ತೇಜನ ನೀಡಲು ಸರ್ಕಾರ ಒಂದು ಮಿಲಿಯನ್ ಡಾಲರ್ ನೀಡಲಿದೆ’’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮಿಳು ಸಂಸ್ಕೃತಿಯ ಪ್ರಾಚೀನತೆಯನ್ನು ಎತ್ತಿ ಹಿಡಿಯಲು ಶ್ರಮಿಸುತ್ತಿರುವ ನಾಣ್ಯಶಾಸ್ತ್ರಜ್ಞರು ಮತ್ತು ಶಾಸನಶಾಸ್ತ್ರಜ್ಞರನ್ನು ಗೌರವಿಸಲು ಮತ್ತು ಪ್ರೋತ್ಸಾಹಿಸಲು ಸರ್ಕಾರ ಎರಡು ಪ್ರಶಸ್ತಿಗಳನ್ನು ಸ್ಥಾಪಿಸುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ಕಣಿವೆ ನಾಗರೀಕತೆಯಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ಮುದ್ರೆಗಳಲ್ಲಿನ ಚಿಹ್ನೆಗಳು ತಮಿಳುನಾಡಿನ ಪುರಾತತ್ತ್ವ ಶಾಸ್ತ್ರದ ಉತ್ಖನನದ ಸಮಯದಲ್ಲಿ ಕಂಡುಬಂದ ಚಿಹ್ನೆಗಳೊಂದಿಗೆ 60 ಪ್ರತಿಶತದಷ್ಟು ಹೋಲಿಕೆಯನ್ನು ಹೊಂದಿವೆ ಎಂದು ಸೂಚಿಸಿದ ಸ್ಟಾಲಿನ್, ಸಿಂಧೂ ಕಣಿವೆಯ ನಾಗರಿಕತೆಯ ಕುಂಡಗಳಲ್ಲಿ ಇರುವ ಚಿಹ್ನೆಗಳು, ತಮಿಳುನಾಡಿನ ಮಣ್ಣಿನ ಪಾತ್ರೆಗಳಲ್ಲಿ ಕಂಡುಬರುವ ಚಿಹ್ನೆಗಳಿಗೆ 90% ಸಾಮ್ಯತೆಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.

“ಆರ್ಯನ್ ಮತ್ತು ಸಂಸ್ಕೃತ ಭಾರತದ ಮೂಲ ಸಂಸ್ಕೃತಿ ಎಂದು ಹಲವರು ವಾದಿಸುತ್ತಿದ್ದರು. ಆದರೆ, ಜಾನ್ ಮಾರ್ಷಲ್ ಅವರ ಆವಿಷ್ಕಾರವು ಈ ಗ್ರಹಿಕೆಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸಿಂಧೂ ಕಣಿವೆ ನಾಗರೀಕತೆಯು ಆರ್ಯರ ನಾಗರಿಕತೆಗಿಂತ ಹಿಂದಿನದು ಮತ್ತು ಸಿಂಧೂ ಕಣಿವೆಯಲ್ಲಿ ಮಾತನಾಡುವ ಭಾಷೆ ದ್ರಾವಿಡವಾಗಿರಬಹುದು ಎಂಬ ಅವರ ವಾದವು ಮತ್ತಷ್ಟು ಬಲಗೊಂಡಿದೆ,” ಎಂದು ಸ್ಟಾಲಿನ್ ಹೇಳಿದ್ದಾರೆ.

ಸಿಂಧೂ ಕಣಿವೆಯಲ್ಲಿ ದ್ರಾವಿಡ ಸಂಕೇತವಾಗಿರುವ ಗೂಳಿಗಳಿವೆ ಎಂದು ಸ್ಟಾಲಿನ್ ಹೇಳಿದ್ದಾರೆ. “ಎತ್ತುಗಳು ಸಿಂಧೂ ಕಣಿವೆಯಿಂದ ತಮಿಳುನಾಡಿನ ಅಲಂಗನಲ್ಲೂರ್ (ಜಲ್ಲಿಕಟ್ಟು ನಡೆಯುವ ಸ್ಥಳ) ವರೆಗೆ ಹರಡಿವೆ. ಪುರಾತನ ತಮಿಳು ಸಾಹಿತ್ಯವು ಗೂಳಿಗಳನ್ನು ಪಳಗಿಸುವ ಬಗ್ಗೆ ಮಾತನಾಡುತ್ತದೆ ಮತ್ತು ಇದನ್ನು ಕೊಲ್ಲೆರು ತಝುವುತಲ್ ಎಂದು ಕರೆಯಲಾಗುತ್ತದೆ. ಸಿಂಧೂ ಕಣಿವೆಯ ಚಿಹ್ನೆಗಳಲ್ಲಿಯೂ ಸಹ ಅದನ್ನು ಪಳಗಿಸಲು ಪ್ರಯತ್ನಿಸಿದ ಯುವಕರನ್ನು ಎತ್ತುವ ಗೂಳಿಗಳ ಚಿತ್ರಗಳಿವೆ” ಎಂದು ಅವರು ಹೇಳಿದ್ದಾರೆ.

ಈ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಹಣಕಾಸು ಮತ್ತು ಪುರಾತತ್ವ ಸಚಿವ ತಂಗಂ ತೆನ್ನರಸು ಮತ್ತು ಹಣಕಾಸು ಕಾರ್ಯದರ್ಶಿ ಟಿ.ಉದಯಚಂದ್ರನ್ ಅವರು ರಾಜ್ಯದಲ್ಲಿ ಇರುವುದು ತಮಿಳುನಾಡಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಿಂಧೂ ನಾಗರೀಕತೆ, ಅತ್ಯಂತ ಪ್ರಾಚೀನವಾದ ನಾಗರೀಕತೆಯಾಗಿದ್ದು, ಅದು ಅದರ ನಗರ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಈ ನಾಗರೀಕತೆಯ ಲಿಪಿಯನ್ನು ಇನ್ನೂ ಓದಲು ಸಾಧ್ಯವಾಗಿಲ್ಲ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...