Homeಮುಖಪುಟಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ - ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ಪ್ರಾಚೀನ ಸಿಂಧೂ ಕಣಿವೆಯ ಲಿಪಿಯು ಶತಮಾನಕ್ಕೂ ಹೆಚ್ಚು ಕಾಲ ಬಿಡಿಸಲಾಗದ ಒಗಟಾಗಿ ಉಳಿದಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಚೆನ್ನೈನಲ್ಲಿ ಹೇಳಿದ್ದು, ಲಿಪಿಗಳನ್ನು ಅರ್ಥೈಸುವಲ್ಲಿ ಯಶಸ್ವಿಯಾಗುವ ತಜ್ಞರು ಅಥವಾ ಸಂಸ್ಥೆಗಳಿಗೆ 1 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡುವುದಾಗಿ ಅವರು ಘೋಷಿಸಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ನಾಗರಿಕತೆಯ ಆವಿಷ್ಕಾರದ ಶತಮಾನೋತ್ಸವದ ಅಂಗವಾಗಿ 3 ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಟಾಲಿನ್, “ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬಂದ ಸಿಂಧೂ ಕಣಿವೆಯ ನಾಗರಿಕತೆಯ ಲಿಪಿ 100 ವರ್ಷಗಳ ನಂತರವೂ ನಿಗೂಢವಾಗಿಯೇ ಉಳಿದಿದೆ. ಪುರಾತತ್ವಶಾಸ್ತ್ರಜ್ಞರು, ತಮಿಳು ಕಂಪ್ಯೂಟರ್ ಸಾಫ್ಟ್‌ವೇರ್ ತಜ್ಞರು ಮತ್ತು ಪ್ರಪಂಚದಾದ್ಯಂತದ ಕಂಪ್ಯೂಟರ್ ತಜ್ಞರು ಲಿಪಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಶೋಧನೆಗೆ ಉತ್ತೇಜನ ನೀಡಲು ಸರ್ಕಾರ ಒಂದು ಮಿಲಿಯನ್ ಡಾಲರ್ ನೀಡಲಿದೆ’’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮಿಳು ಸಂಸ್ಕೃತಿಯ ಪ್ರಾಚೀನತೆಯನ್ನು ಎತ್ತಿ ಹಿಡಿಯಲು ಶ್ರಮಿಸುತ್ತಿರುವ ನಾಣ್ಯಶಾಸ್ತ್ರಜ್ಞರು ಮತ್ತು ಶಾಸನಶಾಸ್ತ್ರಜ್ಞರನ್ನು ಗೌರವಿಸಲು ಮತ್ತು ಪ್ರೋತ್ಸಾಹಿಸಲು ಸರ್ಕಾರ ಎರಡು ಪ್ರಶಸ್ತಿಗಳನ್ನು ಸ್ಥಾಪಿಸುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ಕಣಿವೆ ನಾಗರೀಕತೆಯಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ಮುದ್ರೆಗಳಲ್ಲಿನ ಚಿಹ್ನೆಗಳು ತಮಿಳುನಾಡಿನ ಪುರಾತತ್ತ್ವ ಶಾಸ್ತ್ರದ ಉತ್ಖನನದ ಸಮಯದಲ್ಲಿ ಕಂಡುಬಂದ ಚಿಹ್ನೆಗಳೊಂದಿಗೆ 60 ಪ್ರತಿಶತದಷ್ಟು ಹೋಲಿಕೆಯನ್ನು ಹೊಂದಿವೆ ಎಂದು ಸೂಚಿಸಿದ ಸ್ಟಾಲಿನ್, ಸಿಂಧೂ ಕಣಿವೆಯ ನಾಗರಿಕತೆಯ ಕುಂಡಗಳಲ್ಲಿ ಇರುವ ಚಿಹ್ನೆಗಳು, ತಮಿಳುನಾಡಿನ ಮಣ್ಣಿನ ಪಾತ್ರೆಗಳಲ್ಲಿ ಕಂಡುಬರುವ ಚಿಹ್ನೆಗಳಿಗೆ 90% ಸಾಮ್ಯತೆಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.

“ಆರ್ಯನ್ ಮತ್ತು ಸಂಸ್ಕೃತ ಭಾರತದ ಮೂಲ ಸಂಸ್ಕೃತಿ ಎಂದು ಹಲವರು ವಾದಿಸುತ್ತಿದ್ದರು. ಆದರೆ, ಜಾನ್ ಮಾರ್ಷಲ್ ಅವರ ಆವಿಷ್ಕಾರವು ಈ ಗ್ರಹಿಕೆಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸಿಂಧೂ ಕಣಿವೆ ನಾಗರೀಕತೆಯು ಆರ್ಯರ ನಾಗರಿಕತೆಗಿಂತ ಹಿಂದಿನದು ಮತ್ತು ಸಿಂಧೂ ಕಣಿವೆಯಲ್ಲಿ ಮಾತನಾಡುವ ಭಾಷೆ ದ್ರಾವಿಡವಾಗಿರಬಹುದು ಎಂಬ ಅವರ ವಾದವು ಮತ್ತಷ್ಟು ಬಲಗೊಂಡಿದೆ,” ಎಂದು ಸ್ಟಾಲಿನ್ ಹೇಳಿದ್ದಾರೆ.

ಸಿಂಧೂ ಕಣಿವೆಯಲ್ಲಿ ದ್ರಾವಿಡ ಸಂಕೇತವಾಗಿರುವ ಗೂಳಿಗಳಿವೆ ಎಂದು ಸ್ಟಾಲಿನ್ ಹೇಳಿದ್ದಾರೆ. “ಎತ್ತುಗಳು ಸಿಂಧೂ ಕಣಿವೆಯಿಂದ ತಮಿಳುನಾಡಿನ ಅಲಂಗನಲ್ಲೂರ್ (ಜಲ್ಲಿಕಟ್ಟು ನಡೆಯುವ ಸ್ಥಳ) ವರೆಗೆ ಹರಡಿವೆ. ಪುರಾತನ ತಮಿಳು ಸಾಹಿತ್ಯವು ಗೂಳಿಗಳನ್ನು ಪಳಗಿಸುವ ಬಗ್ಗೆ ಮಾತನಾಡುತ್ತದೆ ಮತ್ತು ಇದನ್ನು ಕೊಲ್ಲೆರು ತಝುವುತಲ್ ಎಂದು ಕರೆಯಲಾಗುತ್ತದೆ. ಸಿಂಧೂ ಕಣಿವೆಯ ಚಿಹ್ನೆಗಳಲ್ಲಿಯೂ ಸಹ ಅದನ್ನು ಪಳಗಿಸಲು ಪ್ರಯತ್ನಿಸಿದ ಯುವಕರನ್ನು ಎತ್ತುವ ಗೂಳಿಗಳ ಚಿತ್ರಗಳಿವೆ” ಎಂದು ಅವರು ಹೇಳಿದ್ದಾರೆ.

ಈ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಹಣಕಾಸು ಮತ್ತು ಪುರಾತತ್ವ ಸಚಿವ ತಂಗಂ ತೆನ್ನರಸು ಮತ್ತು ಹಣಕಾಸು ಕಾರ್ಯದರ್ಶಿ ಟಿ.ಉದಯಚಂದ್ರನ್ ಅವರು ರಾಜ್ಯದಲ್ಲಿ ಇರುವುದು ತಮಿಳುನಾಡಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಿಂಧೂ ನಾಗರೀಕತೆ, ಅತ್ಯಂತ ಪ್ರಾಚೀನವಾದ ನಾಗರೀಕತೆಯಾಗಿದ್ದು, ಅದು ಅದರ ನಗರ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಈ ನಾಗರೀಕತೆಯ ಲಿಪಿಯನ್ನು ಇನ್ನೂ ಓದಲು ಸಾಧ್ಯವಾಗಿಲ್ಲ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...