Homeಮುಖಪುಟಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ - ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ಪ್ರಾಚೀನ ಸಿಂಧೂ ಕಣಿವೆಯ ಲಿಪಿಯು ಶತಮಾನಕ್ಕೂ ಹೆಚ್ಚು ಕಾಲ ಬಿಡಿಸಲಾಗದ ಒಗಟಾಗಿ ಉಳಿದಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಚೆನ್ನೈನಲ್ಲಿ ಹೇಳಿದ್ದು, ಲಿಪಿಗಳನ್ನು ಅರ್ಥೈಸುವಲ್ಲಿ ಯಶಸ್ವಿಯಾಗುವ ತಜ್ಞರು ಅಥವಾ ಸಂಸ್ಥೆಗಳಿಗೆ 1 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡುವುದಾಗಿ ಅವರು ಘೋಷಿಸಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ನಾಗರಿಕತೆಯ ಆವಿಷ್ಕಾರದ ಶತಮಾನೋತ್ಸವದ ಅಂಗವಾಗಿ 3 ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಟಾಲಿನ್, “ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬಂದ ಸಿಂಧೂ ಕಣಿವೆಯ ನಾಗರಿಕತೆಯ ಲಿಪಿ 100 ವರ್ಷಗಳ ನಂತರವೂ ನಿಗೂಢವಾಗಿಯೇ ಉಳಿದಿದೆ. ಪುರಾತತ್ವಶಾಸ್ತ್ರಜ್ಞರು, ತಮಿಳು ಕಂಪ್ಯೂಟರ್ ಸಾಫ್ಟ್‌ವೇರ್ ತಜ್ಞರು ಮತ್ತು ಪ್ರಪಂಚದಾದ್ಯಂತದ ಕಂಪ್ಯೂಟರ್ ತಜ್ಞರು ಲಿಪಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಶೋಧನೆಗೆ ಉತ್ತೇಜನ ನೀಡಲು ಸರ್ಕಾರ ಒಂದು ಮಿಲಿಯನ್ ಡಾಲರ್ ನೀಡಲಿದೆ’’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮಿಳು ಸಂಸ್ಕೃತಿಯ ಪ್ರಾಚೀನತೆಯನ್ನು ಎತ್ತಿ ಹಿಡಿಯಲು ಶ್ರಮಿಸುತ್ತಿರುವ ನಾಣ್ಯಶಾಸ್ತ್ರಜ್ಞರು ಮತ್ತು ಶಾಸನಶಾಸ್ತ್ರಜ್ಞರನ್ನು ಗೌರವಿಸಲು ಮತ್ತು ಪ್ರೋತ್ಸಾಹಿಸಲು ಸರ್ಕಾರ ಎರಡು ಪ್ರಶಸ್ತಿಗಳನ್ನು ಸ್ಥಾಪಿಸುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ಕಣಿವೆ ನಾಗರೀಕತೆಯಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ಮುದ್ರೆಗಳಲ್ಲಿನ ಚಿಹ್ನೆಗಳು ತಮಿಳುನಾಡಿನ ಪುರಾತತ್ತ್ವ ಶಾಸ್ತ್ರದ ಉತ್ಖನನದ ಸಮಯದಲ್ಲಿ ಕಂಡುಬಂದ ಚಿಹ್ನೆಗಳೊಂದಿಗೆ 60 ಪ್ರತಿಶತದಷ್ಟು ಹೋಲಿಕೆಯನ್ನು ಹೊಂದಿವೆ ಎಂದು ಸೂಚಿಸಿದ ಸ್ಟಾಲಿನ್, ಸಿಂಧೂ ಕಣಿವೆಯ ನಾಗರಿಕತೆಯ ಕುಂಡಗಳಲ್ಲಿ ಇರುವ ಚಿಹ್ನೆಗಳು, ತಮಿಳುನಾಡಿನ ಮಣ್ಣಿನ ಪಾತ್ರೆಗಳಲ್ಲಿ ಕಂಡುಬರುವ ಚಿಹ್ನೆಗಳಿಗೆ 90% ಸಾಮ್ಯತೆಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.

“ಆರ್ಯನ್ ಮತ್ತು ಸಂಸ್ಕೃತ ಭಾರತದ ಮೂಲ ಸಂಸ್ಕೃತಿ ಎಂದು ಹಲವರು ವಾದಿಸುತ್ತಿದ್ದರು. ಆದರೆ, ಜಾನ್ ಮಾರ್ಷಲ್ ಅವರ ಆವಿಷ್ಕಾರವು ಈ ಗ್ರಹಿಕೆಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸಿಂಧೂ ಕಣಿವೆ ನಾಗರೀಕತೆಯು ಆರ್ಯರ ನಾಗರಿಕತೆಗಿಂತ ಹಿಂದಿನದು ಮತ್ತು ಸಿಂಧೂ ಕಣಿವೆಯಲ್ಲಿ ಮಾತನಾಡುವ ಭಾಷೆ ದ್ರಾವಿಡವಾಗಿರಬಹುದು ಎಂಬ ಅವರ ವಾದವು ಮತ್ತಷ್ಟು ಬಲಗೊಂಡಿದೆ,” ಎಂದು ಸ್ಟಾಲಿನ್ ಹೇಳಿದ್ದಾರೆ.

ಸಿಂಧೂ ಕಣಿವೆಯಲ್ಲಿ ದ್ರಾವಿಡ ಸಂಕೇತವಾಗಿರುವ ಗೂಳಿಗಳಿವೆ ಎಂದು ಸ್ಟಾಲಿನ್ ಹೇಳಿದ್ದಾರೆ. “ಎತ್ತುಗಳು ಸಿಂಧೂ ಕಣಿವೆಯಿಂದ ತಮಿಳುನಾಡಿನ ಅಲಂಗನಲ್ಲೂರ್ (ಜಲ್ಲಿಕಟ್ಟು ನಡೆಯುವ ಸ್ಥಳ) ವರೆಗೆ ಹರಡಿವೆ. ಪುರಾತನ ತಮಿಳು ಸಾಹಿತ್ಯವು ಗೂಳಿಗಳನ್ನು ಪಳಗಿಸುವ ಬಗ್ಗೆ ಮಾತನಾಡುತ್ತದೆ ಮತ್ತು ಇದನ್ನು ಕೊಲ್ಲೆರು ತಝುವುತಲ್ ಎಂದು ಕರೆಯಲಾಗುತ್ತದೆ. ಸಿಂಧೂ ಕಣಿವೆಯ ಚಿಹ್ನೆಗಳಲ್ಲಿಯೂ ಸಹ ಅದನ್ನು ಪಳಗಿಸಲು ಪ್ರಯತ್ನಿಸಿದ ಯುವಕರನ್ನು ಎತ್ತುವ ಗೂಳಿಗಳ ಚಿತ್ರಗಳಿವೆ” ಎಂದು ಅವರು ಹೇಳಿದ್ದಾರೆ.

ಈ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಹಣಕಾಸು ಮತ್ತು ಪುರಾತತ್ವ ಸಚಿವ ತಂಗಂ ತೆನ್ನರಸು ಮತ್ತು ಹಣಕಾಸು ಕಾರ್ಯದರ್ಶಿ ಟಿ.ಉದಯಚಂದ್ರನ್ ಅವರು ರಾಜ್ಯದಲ್ಲಿ ಇರುವುದು ತಮಿಳುನಾಡಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಿಂಧೂ ನಾಗರೀಕತೆ, ಅತ್ಯಂತ ಪ್ರಾಚೀನವಾದ ನಾಗರೀಕತೆಯಾಗಿದ್ದು, ಅದು ಅದರ ನಗರ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಈ ನಾಗರೀಕತೆಯ ಲಿಪಿಯನ್ನು ಇನ್ನೂ ಓದಲು ಸಾಧ್ಯವಾಗಿಲ್ಲ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...