Homeಕರ್ನಾಟಕಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

- Advertisement -
- Advertisement -

ಬಿಜೆಪಿಯಿಂದ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್- ಬಿಜೆಪಿ ಮೈತ್ರಿಗೆ ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್​ ಸಹ ಜೆಡಿಎಸ್​ ಹಾಗೂ ಬಿಜೆಪಿ ನಾಯಕರಿಗೆ ಆಪರೇಷನ್ ಹಸ್ತ ನಡೆಸುತ್ತಿದೆ. ಈಗಾಗಲೇ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಗದೀಶ್ ಶೆಟ್ಟರ್​ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಲವು ತಿಂಗಳಿನಿಂದ ಹಲವು ಮಾಜಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಿನ್ನೆ ರಾಮಣ್ಣ ಲಮಾಣಿ ಮತ್ತು ಎಂ.ಪಿ‌. ಕುಮಾರಸ್ವಾಮಿ ಮತ್ತೆ ಸಂಪರ್ಕ ಮಾಡಿದಾಗ ಡಿಕೆ ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

”ಬಿಜೆಪಿಯಲ್ಲಿ ಬೇಜಾರಾದವರು ಬಹಳಷ್ಟು ಜನ ಇದ್ದಾರೆ. ಲೀಡರ್ ಲೆಸ್ ಪಾರ್ಟಿ ಹೇಗಿರುತ್ತದೆ ಎಂಬುದಕ್ಕೆ ಈಗ ಬಿಜೆಪಿ ಉದಾಹರಣೆ.. ಮಾಜಿ ಶಾಸಕರು, ಜಿಲ್ಲಾ, ತಾಲೂಕು ಮುಖಂಡರು ಸಂಪರ್ಕ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ದೊಡ್ಡ ಟೀಮ್ ನಮ್ಮನ್ನು ಸಂಪರ್ಕ ಮಾಡುತ್ತಿದೆ. ಇನ್ನೂ ಹಲವು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ” ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

”ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ, ಶೂನ್ಯ ಪರಿಸ್ಥಿತಿ ಉಳಿದಿದೆ. ಬಿಜೆಪಿಯಲ್ಲಿ ನಾನು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನಾಗಿ ಎಷ್ಟೋ ಜನರನ್ನು ಬೆಳೆಸಿದ್ದರಿಂದ ನೇರವಾಗಿ ಅವರು ನನ್ನ ಸಂಪರ್ಕಕ್ಕೆ ಬರುತ್ತಿದ್ದಾರೆ. ನನ್ನ ನಾಯಕತ್ವದಲ್ಲಿ ಇರುತ್ತೇವೆ ಎಂದು ಸ್ವ ಇಚ್ಛೆಯಿಂದ ಬರುತ್ತಿದ್ದಾರೆ. ಬಿಟ್ಟು ಬನ್ನಿ ಎಂದು ನಾನು ಯಾರಿಗೂ ಒತ್ತಾಯಿಸಲು ಹೋಗಿಲ್ಲ. ಅವರಾಗಿಯೇ. ಬರುತ್ತಿರುವವರನ್ನು ಮಾತ್ರ ಸೇರ್ಪಡೆ ಮಾಡಿಸುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದರು.

”ಕಾಂಗ್ರೆಸ್ ಕಾರ್ಯಕರ್ತ, ನಾಯಕನಾಗಿ ಪಕ್ಷ ಬಲವರ್ಧನೆಯ ಪ್ರಯತ್ನ ಮಾಡುತ್ತಿದ್ದೇನೆ. ಬಿಜೆಪಿಯಲ್ಲಿ ಇದ್ದಾಗ ಅನಂತಕುಮಾರ್, ಯಡಿಯೂರಪ್ಪ ನನಗೇ ಜವಾಬ್ದಾರಿ ಕೊಡುತ್ತಿದ್ದರು. ಬಿಜೆಪಿಯಲ್ಲಿ ನಾನೇ ಡಾಮಿನೇಟ್ ಮಾಡಲು ಹೋಗಲಿಲ್ಲ. ಯಾರ್ಯಾರು ನಾಯಕರು ಇದ್ದರೋ ಅವರನ್ನು ಒಪ್ಪಿಕೊಂಡು ಬಂದಿದ್ದೇನೆ. ಕಾಂಗ್ರೆಸ್‌ನಲ್ಲಿ ಸಂಪರ್ಕ ಮಾಡಿದವರನ್ನು ಸೇರಿಸುವ ಪ್ರಯತ್ನ ಆಗಿದೆಯೇ ಹೊರತು ನನ್ನ ಸ್ವ ಹಿತಾಸಕ್ತಿ ಇಲ್ಲ. ಕಾಂಗ್ರೆಸ್ ನಲ್ಲಿ ಸೇರ್ಪಡೆ ಮಾಡಿಸಿ ಎಂದು ಯಾವುದೇ ಜವಾಬ್ದಾರಿ ಕೊಟ್ಟಿಲ್ಲ ನನ್ನ ಸಂಪರ್ಕ ಮಾಡಿದವರನ್ನು ಪಕ್ಷದ ಅಧ್ಯಕ್ಷರ, ಹೈಕಮಾಂಡ್ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿದ ಶೆಟ್ಟರ್, ”ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಪ್ಲಸ್ ಮೈನಸ್ ಏನೂ ಇಲ್ಲ. ಮೈತ್ರಿಯಿಂದ ಜೆಡಿಎಸ್‌ಗೆ ಲಾಭವೇ ಹೊರತು ಬಿಜೆಪಿಗೆ ಲಾಭ ಸಾಧ್ಯವೇ ಇಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ದುರ್ಬಲವಾಗಿದೆ. ಮೈತ್ರಿಯಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಡಾಮಿನೇಟ್ ಮಾಡುತ್ತದೆ. ಮೈತ್ರಿಯಿಂದ ಬಿಜೆಪಿ ಮತ್ತಷ್ಟು ದುರ್ಬಲ ಆಗುತ್ತದೆ. ರಾಜ್ಯ ಬಿಜೆಪಿ ನಾಯಕರನ್ನು ಎಷ್ಟು ಸೈಡ್ ಲೈನ್ ಮಾಡಿದ್ದಾರೆ ಎಂಬುದಕ್ಕೆ ಮೊನ್ನೆಯ ದೆಹಲಿಯ ಸಭೆಯೇ ಸಾಕ್ಷಿ . ಜೆಡಿಎಸ್ ಎ ಟೀಮ್ ಆಗಿದೆ. ಬಿಜೆಪಿ ಜೆಡಿಎಸ್ ನ ಬಿ ಟೀಮ್ ಆಗಿದೆ. ಪ್ರತಾಪ್ ಸಿಂಹ ದೇವೇಗೌಡರ ಕಾಲಿಗೆ ಬಿದ್ದಿದ್ದು ಬಿಜೆಪಿಯ ಈಗಿನ ಪರಿಸ್ಥಿತಿ ತೋರಿಸುತ್ತದೆ” ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ದಲಿತರು ಸುರಕ್ಷಿತವಾಗಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...