Homeಕರ್ನಾಟಕಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

- Advertisement -
- Advertisement -

ಬಿಜೆಪಿಯಿಂದ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್- ಬಿಜೆಪಿ ಮೈತ್ರಿಗೆ ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್​ ಸಹ ಜೆಡಿಎಸ್​ ಹಾಗೂ ಬಿಜೆಪಿ ನಾಯಕರಿಗೆ ಆಪರೇಷನ್ ಹಸ್ತ ನಡೆಸುತ್ತಿದೆ. ಈಗಾಗಲೇ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಗದೀಶ್ ಶೆಟ್ಟರ್​ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಲವು ತಿಂಗಳಿನಿಂದ ಹಲವು ಮಾಜಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಿನ್ನೆ ರಾಮಣ್ಣ ಲಮಾಣಿ ಮತ್ತು ಎಂ.ಪಿ‌. ಕುಮಾರಸ್ವಾಮಿ ಮತ್ತೆ ಸಂಪರ್ಕ ಮಾಡಿದಾಗ ಡಿಕೆ ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

”ಬಿಜೆಪಿಯಲ್ಲಿ ಬೇಜಾರಾದವರು ಬಹಳಷ್ಟು ಜನ ಇದ್ದಾರೆ. ಲೀಡರ್ ಲೆಸ್ ಪಾರ್ಟಿ ಹೇಗಿರುತ್ತದೆ ಎಂಬುದಕ್ಕೆ ಈಗ ಬಿಜೆಪಿ ಉದಾಹರಣೆ.. ಮಾಜಿ ಶಾಸಕರು, ಜಿಲ್ಲಾ, ತಾಲೂಕು ಮುಖಂಡರು ಸಂಪರ್ಕ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ದೊಡ್ಡ ಟೀಮ್ ನಮ್ಮನ್ನು ಸಂಪರ್ಕ ಮಾಡುತ್ತಿದೆ. ಇನ್ನೂ ಹಲವು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ” ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

”ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ, ಶೂನ್ಯ ಪರಿಸ್ಥಿತಿ ಉಳಿದಿದೆ. ಬಿಜೆಪಿಯಲ್ಲಿ ನಾನು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನಾಗಿ ಎಷ್ಟೋ ಜನರನ್ನು ಬೆಳೆಸಿದ್ದರಿಂದ ನೇರವಾಗಿ ಅವರು ನನ್ನ ಸಂಪರ್ಕಕ್ಕೆ ಬರುತ್ತಿದ್ದಾರೆ. ನನ್ನ ನಾಯಕತ್ವದಲ್ಲಿ ಇರುತ್ತೇವೆ ಎಂದು ಸ್ವ ಇಚ್ಛೆಯಿಂದ ಬರುತ್ತಿದ್ದಾರೆ. ಬಿಟ್ಟು ಬನ್ನಿ ಎಂದು ನಾನು ಯಾರಿಗೂ ಒತ್ತಾಯಿಸಲು ಹೋಗಿಲ್ಲ. ಅವರಾಗಿಯೇ. ಬರುತ್ತಿರುವವರನ್ನು ಮಾತ್ರ ಸೇರ್ಪಡೆ ಮಾಡಿಸುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದರು.

”ಕಾಂಗ್ರೆಸ್ ಕಾರ್ಯಕರ್ತ, ನಾಯಕನಾಗಿ ಪಕ್ಷ ಬಲವರ್ಧನೆಯ ಪ್ರಯತ್ನ ಮಾಡುತ್ತಿದ್ದೇನೆ. ಬಿಜೆಪಿಯಲ್ಲಿ ಇದ್ದಾಗ ಅನಂತಕುಮಾರ್, ಯಡಿಯೂರಪ್ಪ ನನಗೇ ಜವಾಬ್ದಾರಿ ಕೊಡುತ್ತಿದ್ದರು. ಬಿಜೆಪಿಯಲ್ಲಿ ನಾನೇ ಡಾಮಿನೇಟ್ ಮಾಡಲು ಹೋಗಲಿಲ್ಲ. ಯಾರ್ಯಾರು ನಾಯಕರು ಇದ್ದರೋ ಅವರನ್ನು ಒಪ್ಪಿಕೊಂಡು ಬಂದಿದ್ದೇನೆ. ಕಾಂಗ್ರೆಸ್‌ನಲ್ಲಿ ಸಂಪರ್ಕ ಮಾಡಿದವರನ್ನು ಸೇರಿಸುವ ಪ್ರಯತ್ನ ಆಗಿದೆಯೇ ಹೊರತು ನನ್ನ ಸ್ವ ಹಿತಾಸಕ್ತಿ ಇಲ್ಲ. ಕಾಂಗ್ರೆಸ್ ನಲ್ಲಿ ಸೇರ್ಪಡೆ ಮಾಡಿಸಿ ಎಂದು ಯಾವುದೇ ಜವಾಬ್ದಾರಿ ಕೊಟ್ಟಿಲ್ಲ ನನ್ನ ಸಂಪರ್ಕ ಮಾಡಿದವರನ್ನು ಪಕ್ಷದ ಅಧ್ಯಕ್ಷರ, ಹೈಕಮಾಂಡ್ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿದ ಶೆಟ್ಟರ್, ”ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಪ್ಲಸ್ ಮೈನಸ್ ಏನೂ ಇಲ್ಲ. ಮೈತ್ರಿಯಿಂದ ಜೆಡಿಎಸ್‌ಗೆ ಲಾಭವೇ ಹೊರತು ಬಿಜೆಪಿಗೆ ಲಾಭ ಸಾಧ್ಯವೇ ಇಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ದುರ್ಬಲವಾಗಿದೆ. ಮೈತ್ರಿಯಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಡಾಮಿನೇಟ್ ಮಾಡುತ್ತದೆ. ಮೈತ್ರಿಯಿಂದ ಬಿಜೆಪಿ ಮತ್ತಷ್ಟು ದುರ್ಬಲ ಆಗುತ್ತದೆ. ರಾಜ್ಯ ಬಿಜೆಪಿ ನಾಯಕರನ್ನು ಎಷ್ಟು ಸೈಡ್ ಲೈನ್ ಮಾಡಿದ್ದಾರೆ ಎಂಬುದಕ್ಕೆ ಮೊನ್ನೆಯ ದೆಹಲಿಯ ಸಭೆಯೇ ಸಾಕ್ಷಿ . ಜೆಡಿಎಸ್ ಎ ಟೀಮ್ ಆಗಿದೆ. ಬಿಜೆಪಿ ಜೆಡಿಎಸ್ ನ ಬಿ ಟೀಮ್ ಆಗಿದೆ. ಪ್ರತಾಪ್ ಸಿಂಹ ದೇವೇಗೌಡರ ಕಾಲಿಗೆ ಬಿದ್ದಿದ್ದು ಬಿಜೆಪಿಯ ಈಗಿನ ಪರಿಸ್ಥಿತಿ ತೋರಿಸುತ್ತದೆ” ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ದಲಿತರು ಸುರಕ್ಷಿತವಾಗಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...