Homeಕರ್ನಾಟಕಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

- Advertisement -
- Advertisement -

ಬಿಜೆಪಿಯಿಂದ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್- ಬಿಜೆಪಿ ಮೈತ್ರಿಗೆ ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್​ ಸಹ ಜೆಡಿಎಸ್​ ಹಾಗೂ ಬಿಜೆಪಿ ನಾಯಕರಿಗೆ ಆಪರೇಷನ್ ಹಸ್ತ ನಡೆಸುತ್ತಿದೆ. ಈಗಾಗಲೇ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಗದೀಶ್ ಶೆಟ್ಟರ್​ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಲವು ತಿಂಗಳಿನಿಂದ ಹಲವು ಮಾಜಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಿನ್ನೆ ರಾಮಣ್ಣ ಲಮಾಣಿ ಮತ್ತು ಎಂ.ಪಿ‌. ಕುಮಾರಸ್ವಾಮಿ ಮತ್ತೆ ಸಂಪರ್ಕ ಮಾಡಿದಾಗ ಡಿಕೆ ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

”ಬಿಜೆಪಿಯಲ್ಲಿ ಬೇಜಾರಾದವರು ಬಹಳಷ್ಟು ಜನ ಇದ್ದಾರೆ. ಲೀಡರ್ ಲೆಸ್ ಪಾರ್ಟಿ ಹೇಗಿರುತ್ತದೆ ಎಂಬುದಕ್ಕೆ ಈಗ ಬಿಜೆಪಿ ಉದಾಹರಣೆ.. ಮಾಜಿ ಶಾಸಕರು, ಜಿಲ್ಲಾ, ತಾಲೂಕು ಮುಖಂಡರು ಸಂಪರ್ಕ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ದೊಡ್ಡ ಟೀಮ್ ನಮ್ಮನ್ನು ಸಂಪರ್ಕ ಮಾಡುತ್ತಿದೆ. ಇನ್ನೂ ಹಲವು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ” ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

”ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ, ಶೂನ್ಯ ಪರಿಸ್ಥಿತಿ ಉಳಿದಿದೆ. ಬಿಜೆಪಿಯಲ್ಲಿ ನಾನು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನಾಗಿ ಎಷ್ಟೋ ಜನರನ್ನು ಬೆಳೆಸಿದ್ದರಿಂದ ನೇರವಾಗಿ ಅವರು ನನ್ನ ಸಂಪರ್ಕಕ್ಕೆ ಬರುತ್ತಿದ್ದಾರೆ. ನನ್ನ ನಾಯಕತ್ವದಲ್ಲಿ ಇರುತ್ತೇವೆ ಎಂದು ಸ್ವ ಇಚ್ಛೆಯಿಂದ ಬರುತ್ತಿದ್ದಾರೆ. ಬಿಟ್ಟು ಬನ್ನಿ ಎಂದು ನಾನು ಯಾರಿಗೂ ಒತ್ತಾಯಿಸಲು ಹೋಗಿಲ್ಲ. ಅವರಾಗಿಯೇ. ಬರುತ್ತಿರುವವರನ್ನು ಮಾತ್ರ ಸೇರ್ಪಡೆ ಮಾಡಿಸುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದರು.

”ಕಾಂಗ್ರೆಸ್ ಕಾರ್ಯಕರ್ತ, ನಾಯಕನಾಗಿ ಪಕ್ಷ ಬಲವರ್ಧನೆಯ ಪ್ರಯತ್ನ ಮಾಡುತ್ತಿದ್ದೇನೆ. ಬಿಜೆಪಿಯಲ್ಲಿ ಇದ್ದಾಗ ಅನಂತಕುಮಾರ್, ಯಡಿಯೂರಪ್ಪ ನನಗೇ ಜವಾಬ್ದಾರಿ ಕೊಡುತ್ತಿದ್ದರು. ಬಿಜೆಪಿಯಲ್ಲಿ ನಾನೇ ಡಾಮಿನೇಟ್ ಮಾಡಲು ಹೋಗಲಿಲ್ಲ. ಯಾರ್ಯಾರು ನಾಯಕರು ಇದ್ದರೋ ಅವರನ್ನು ಒಪ್ಪಿಕೊಂಡು ಬಂದಿದ್ದೇನೆ. ಕಾಂಗ್ರೆಸ್‌ನಲ್ಲಿ ಸಂಪರ್ಕ ಮಾಡಿದವರನ್ನು ಸೇರಿಸುವ ಪ್ರಯತ್ನ ಆಗಿದೆಯೇ ಹೊರತು ನನ್ನ ಸ್ವ ಹಿತಾಸಕ್ತಿ ಇಲ್ಲ. ಕಾಂಗ್ರೆಸ್ ನಲ್ಲಿ ಸೇರ್ಪಡೆ ಮಾಡಿಸಿ ಎಂದು ಯಾವುದೇ ಜವಾಬ್ದಾರಿ ಕೊಟ್ಟಿಲ್ಲ ನನ್ನ ಸಂಪರ್ಕ ಮಾಡಿದವರನ್ನು ಪಕ್ಷದ ಅಧ್ಯಕ್ಷರ, ಹೈಕಮಾಂಡ್ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿದ ಶೆಟ್ಟರ್, ”ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಪ್ಲಸ್ ಮೈನಸ್ ಏನೂ ಇಲ್ಲ. ಮೈತ್ರಿಯಿಂದ ಜೆಡಿಎಸ್‌ಗೆ ಲಾಭವೇ ಹೊರತು ಬಿಜೆಪಿಗೆ ಲಾಭ ಸಾಧ್ಯವೇ ಇಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ದುರ್ಬಲವಾಗಿದೆ. ಮೈತ್ರಿಯಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಡಾಮಿನೇಟ್ ಮಾಡುತ್ತದೆ. ಮೈತ್ರಿಯಿಂದ ಬಿಜೆಪಿ ಮತ್ತಷ್ಟು ದುರ್ಬಲ ಆಗುತ್ತದೆ. ರಾಜ್ಯ ಬಿಜೆಪಿ ನಾಯಕರನ್ನು ಎಷ್ಟು ಸೈಡ್ ಲೈನ್ ಮಾಡಿದ್ದಾರೆ ಎಂಬುದಕ್ಕೆ ಮೊನ್ನೆಯ ದೆಹಲಿಯ ಸಭೆಯೇ ಸಾಕ್ಷಿ . ಜೆಡಿಎಸ್ ಎ ಟೀಮ್ ಆಗಿದೆ. ಬಿಜೆಪಿ ಜೆಡಿಎಸ್ ನ ಬಿ ಟೀಮ್ ಆಗಿದೆ. ಪ್ರತಾಪ್ ಸಿಂಹ ದೇವೇಗೌಡರ ಕಾಲಿಗೆ ಬಿದ್ದಿದ್ದು ಬಿಜೆಪಿಯ ಈಗಿನ ಪರಿಸ್ಥಿತಿ ತೋರಿಸುತ್ತದೆ” ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ದಲಿತರು ಸುರಕ್ಷಿತವಾಗಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...