Homeಕರ್ನಾಟಕಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

- Advertisement -
- Advertisement -

ಬಿಜೆಪಿಯಿಂದ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್- ಬಿಜೆಪಿ ಮೈತ್ರಿಗೆ ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್​ ಸಹ ಜೆಡಿಎಸ್​ ಹಾಗೂ ಬಿಜೆಪಿ ನಾಯಕರಿಗೆ ಆಪರೇಷನ್ ಹಸ್ತ ನಡೆಸುತ್ತಿದೆ. ಈಗಾಗಲೇ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಗದೀಶ್ ಶೆಟ್ಟರ್​ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಲವು ತಿಂಗಳಿನಿಂದ ಹಲವು ಮಾಜಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಿನ್ನೆ ರಾಮಣ್ಣ ಲಮಾಣಿ ಮತ್ತು ಎಂ.ಪಿ‌. ಕುಮಾರಸ್ವಾಮಿ ಮತ್ತೆ ಸಂಪರ್ಕ ಮಾಡಿದಾಗ ಡಿಕೆ ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

”ಬಿಜೆಪಿಯಲ್ಲಿ ಬೇಜಾರಾದವರು ಬಹಳಷ್ಟು ಜನ ಇದ್ದಾರೆ. ಲೀಡರ್ ಲೆಸ್ ಪಾರ್ಟಿ ಹೇಗಿರುತ್ತದೆ ಎಂಬುದಕ್ಕೆ ಈಗ ಬಿಜೆಪಿ ಉದಾಹರಣೆ.. ಮಾಜಿ ಶಾಸಕರು, ಜಿಲ್ಲಾ, ತಾಲೂಕು ಮುಖಂಡರು ಸಂಪರ್ಕ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ದೊಡ್ಡ ಟೀಮ್ ನಮ್ಮನ್ನು ಸಂಪರ್ಕ ಮಾಡುತ್ತಿದೆ. ಇನ್ನೂ ಹಲವು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ” ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

”ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ, ಶೂನ್ಯ ಪರಿಸ್ಥಿತಿ ಉಳಿದಿದೆ. ಬಿಜೆಪಿಯಲ್ಲಿ ನಾನು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನಾಗಿ ಎಷ್ಟೋ ಜನರನ್ನು ಬೆಳೆಸಿದ್ದರಿಂದ ನೇರವಾಗಿ ಅವರು ನನ್ನ ಸಂಪರ್ಕಕ್ಕೆ ಬರುತ್ತಿದ್ದಾರೆ. ನನ್ನ ನಾಯಕತ್ವದಲ್ಲಿ ಇರುತ್ತೇವೆ ಎಂದು ಸ್ವ ಇಚ್ಛೆಯಿಂದ ಬರುತ್ತಿದ್ದಾರೆ. ಬಿಟ್ಟು ಬನ್ನಿ ಎಂದು ನಾನು ಯಾರಿಗೂ ಒತ್ತಾಯಿಸಲು ಹೋಗಿಲ್ಲ. ಅವರಾಗಿಯೇ. ಬರುತ್ತಿರುವವರನ್ನು ಮಾತ್ರ ಸೇರ್ಪಡೆ ಮಾಡಿಸುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದರು.

”ಕಾಂಗ್ರೆಸ್ ಕಾರ್ಯಕರ್ತ, ನಾಯಕನಾಗಿ ಪಕ್ಷ ಬಲವರ್ಧನೆಯ ಪ್ರಯತ್ನ ಮಾಡುತ್ತಿದ್ದೇನೆ. ಬಿಜೆಪಿಯಲ್ಲಿ ಇದ್ದಾಗ ಅನಂತಕುಮಾರ್, ಯಡಿಯೂರಪ್ಪ ನನಗೇ ಜವಾಬ್ದಾರಿ ಕೊಡುತ್ತಿದ್ದರು. ಬಿಜೆಪಿಯಲ್ಲಿ ನಾನೇ ಡಾಮಿನೇಟ್ ಮಾಡಲು ಹೋಗಲಿಲ್ಲ. ಯಾರ್ಯಾರು ನಾಯಕರು ಇದ್ದರೋ ಅವರನ್ನು ಒಪ್ಪಿಕೊಂಡು ಬಂದಿದ್ದೇನೆ. ಕಾಂಗ್ರೆಸ್‌ನಲ್ಲಿ ಸಂಪರ್ಕ ಮಾಡಿದವರನ್ನು ಸೇರಿಸುವ ಪ್ರಯತ್ನ ಆಗಿದೆಯೇ ಹೊರತು ನನ್ನ ಸ್ವ ಹಿತಾಸಕ್ತಿ ಇಲ್ಲ. ಕಾಂಗ್ರೆಸ್ ನಲ್ಲಿ ಸೇರ್ಪಡೆ ಮಾಡಿಸಿ ಎಂದು ಯಾವುದೇ ಜವಾಬ್ದಾರಿ ಕೊಟ್ಟಿಲ್ಲ ನನ್ನ ಸಂಪರ್ಕ ಮಾಡಿದವರನ್ನು ಪಕ್ಷದ ಅಧ್ಯಕ್ಷರ, ಹೈಕಮಾಂಡ್ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿದ ಶೆಟ್ಟರ್, ”ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಪ್ಲಸ್ ಮೈನಸ್ ಏನೂ ಇಲ್ಲ. ಮೈತ್ರಿಯಿಂದ ಜೆಡಿಎಸ್‌ಗೆ ಲಾಭವೇ ಹೊರತು ಬಿಜೆಪಿಗೆ ಲಾಭ ಸಾಧ್ಯವೇ ಇಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ದುರ್ಬಲವಾಗಿದೆ. ಮೈತ್ರಿಯಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಡಾಮಿನೇಟ್ ಮಾಡುತ್ತದೆ. ಮೈತ್ರಿಯಿಂದ ಬಿಜೆಪಿ ಮತ್ತಷ್ಟು ದುರ್ಬಲ ಆಗುತ್ತದೆ. ರಾಜ್ಯ ಬಿಜೆಪಿ ನಾಯಕರನ್ನು ಎಷ್ಟು ಸೈಡ್ ಲೈನ್ ಮಾಡಿದ್ದಾರೆ ಎಂಬುದಕ್ಕೆ ಮೊನ್ನೆಯ ದೆಹಲಿಯ ಸಭೆಯೇ ಸಾಕ್ಷಿ . ಜೆಡಿಎಸ್ ಎ ಟೀಮ್ ಆಗಿದೆ. ಬಿಜೆಪಿ ಜೆಡಿಎಸ್ ನ ಬಿ ಟೀಮ್ ಆಗಿದೆ. ಪ್ರತಾಪ್ ಸಿಂಹ ದೇವೇಗೌಡರ ಕಾಲಿಗೆ ಬಿದ್ದಿದ್ದು ಬಿಜೆಪಿಯ ಈಗಿನ ಪರಿಸ್ಥಿತಿ ತೋರಿಸುತ್ತದೆ” ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ದಲಿತರು ಸುರಕ್ಷಿತವಾಗಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...