Homeಕರ್ನಾಟಕನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ:...

ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್

"ದೇವನಹಳ್ಳಿಯ ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ, ಸಚಿವರು ದಿಲ್ಲಿಗೆ ಹೋಗಿದ್ದು ಏಕೆ? ಡಿಫೆನ್ಸ್ ಕಾರಿಡಾರ್, ಏರೋ ಸ್ಪೇಸ್‌ಗೆ ಮನವಿ ಮಾಡಿದ್ದು ಏಕೆ? "

- Advertisement -
- Advertisement -

ದೇವನಹಳ್ಳಿ ರೈತರ ಭೂಸ್ವಾಧೀನ ಸಂಬಂಧ ನಾಳೆ ಮುಖ್ಯಮಂತ್ರಿ ಕರೆದಿರುವ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ಮಾತ್ರ ಚರ್ಚೆ ನಡೆಯಬೇಕೇ ಹೊರತು, ಭೂಮಿ ಕೊಟ್ಟರೆ ಪರಿಹಾರ ಕೊಡುತ್ತೇವೆ ಎಂಬುವುದು ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಎದ್ದೇಳು ಕರ್ನಾಟಕ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ಹೋಗಿದ್ದಾರೆ. ಅಲ್ಲಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಡಿಫೆನ್ಸ್ ಕಾರಿಡಾರ್ ಮತ್ತು ಏರೋ ಸ್ಪೇಸ್‌ಗೆ ಮನವಿ ಮಾಡಿದ್ದಾರೆ. ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಡಲು ಕಾನೂನು ತೊಡಕಿದೆ ಎಂದು ನಮಗೆ ಹೇಳಿ, ನೀವು ದೆಹಲಿಗೆ ಹೋಗಿದ್ದು ಏಕೆ? ಎಂದು ಪ್ರಶ್ನಿಸಿದರು.

ದೇವನಹಳ್ಳಿಯ ರೈತರು ನಾವು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆ ಬಗ್ಗೆ ಗಮನ ಹರಿಸಲು ಸರ್ಕಾರಕ್ಕೆ ಇಷ್ಟು ಸಮಯ ಬೇಕಾಯಿತು. ಈಗ ಕಾನೂನಿನ ತೊಡಕಿದೆ ಎಂದು 15ನೇ ತಾರೀಖಿನವರೆಗೆ ಸಮಯ ಕೇಳಿದ್ದಾರೆ. ಈ ನಡುವೆ ನಾವು ಭೂಮಿ ಕೊಡುತ್ತೀವಿ ಎಂದು ದೀಢೀರ್ ಕಾಣಿಸಿಕೊಂಡ ಗುಂಪಿಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭೂಮಿ ಕೊಡುತ್ತೇವೆ ಎಂದು ದಿಢೀರ್ ಕಾಣಿಸಿಕೊಂಡ ಗುಂಪು ಎಕರೆಗೆ 3.5 ಕೋಟಿ ಕೇಳಿದೆ. ಸುತ್ತಮುತ್ತಲ ಉಳಿದ ಪ್ರದೇಶವನ್ನು ಹಳದಿ ವಲಯ ಮಾಡುವಂತೆ ಕೋರಿದೆ. ರೈತರು ಮೂರುವರೆ ಕೋಟಿ ಕೇಳಿದ್ದಾರೆ ಎಂದು ಎಂ.ಬಿ ಪಾಟೀಲರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಪಾಟೀಲರೇ ನೀವು ಮಾತನಾಡುತ್ತಿರುವುದು ನ್ಯಾಯನಾ? ಎಕರೆಗೆ ಮೂರುವರೆ ಕೋಟಿ ಕೊಡಲು ನೀವು ಯಾರು? ಅಷ್ಟೊಂದು ಹಣ ಎಲ್ಲಿಂದ ಕೊಡುತ್ತೀರಿ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಎಂ.ಬಿ ಪಾಟೀಲರೇ ನಿಮ್ಮ ಸುಸ್ಥಿರ ಅಭಿವೃದ್ಧಿ ಏನು? ಪಕ್ಕದ ರಾಜ್ಯದಲ್ಲಿ 95 ಪೈಸೆಗೆ ಕಂಪನಿಗಳಿಗೆ ಜಮೀನು ಕೊಟ್ಟರು ಅಂತ ನೀವು ರೈತರಿಂದ ಮೂರುವರೆ ಕೋಟಿಗೆ ಜಮೀನು ತಗೊಂಡು ಅದನ್ನು ಕಂಪನಿಗಳಿಗೆ 75 ಪೈಸೆಗೆ ಕೊಡುತ್ತೀರಾ? ಮೂರುವರೆ ಕೋಟಿ ಯಾರಪ್ಪನ ದುಡ್ಡು? ನಿಮ್ಮ ಮನೆಯಿಂದ ತಂದಿದ್ದೀರಾ? ಅದು ನಮ್ಮಂತ ನಾಗರಿಕರ ತೆರಿಗೆ ಹಣ. ನೀವು ಗ್ಯಾರಂಟಿಗಳನ್ನು ಕೊಟ್ಟು ಅದಕ್ಕೆ ದುಡ್ಡಿಲ್ಲ ಎನ್ನುತ್ತೀರಿ, ಇಲ್ಲಿ ಸಾವಿರಾರು ಎಕರೆಗೆ ತಲಾ ಮೂರುವರೆ ಕೋಟಿ ಕೊಡುತ್ತೀವಿ ಎನ್ನುತ್ತೀರಿ. ಎಲ್ಲಿಂದ ದುಡ್ಡು ತರುತ್ತೀರಿ? ಎಂದು ಕೇಳಿದರು.

ರೈತರ ನಡುವೆ ನಾವು ಒಡಕು ಹುಟ್ಟಿಸಿಲ್ಲ ಎಂದು ಎಂ.ಬಿ ಪಾಟೀಲ್ ಹೇಳುತ್ತಿದ್ದಾರೆ. ಹಾಗಾದರೆ ಒಡಕು ಹುಟ್ಟಿಸಿದವರು ಯಾರು? ನೀವು ಒಡಕು ಮೂಡಿಸಲು 10 ದಿನಗಳ ಕಾಲವಕಾಶ ತೆಗೆದುಕೊಂಡಿದ್ದಾ? ಸಿಎಂ 10 ದಿನಗಳ ಸಮಯ ಕೇಳಿದ ಮೇಲೆ ಸಚಿವರೊಂದಿಗೆ ದೆಹಲಿಗೆ ಭೇಟಿ ನೀಡಿದ್ದಾರೆ. ದಲ್ಲಾಲಿಗಳ ಭೇಟಿಗೆ ಅವಕಾಶ ಕೊಟ್ಟಿದ್ದಾರೆ. ಎಂ.ಬಿ ಪಾಟೀಲ್ ಕುಹದ ಮಾತುಗಳನ್ನು ಆಡುತ್ತಿದ್ದಾರೆ. ಹೋರಾಟಗಾರರ ಹಿಂದೆ ಯಾರಿದ್ದಾರೆ ಎಂಬುವುದು ನಮಗೆ ಗೊತ್ತಿದೆ ಎಂದಿದ್ದಾರೆ. ನಮ್ಮ ಹಿಂದೆ ಇರುವವರ ಪಟ್ಟಿಯನ್ನು ನಾವು ಕೊಡುತ್ತೇವೆ ಎಂದರು.

ದೇವನಹಳ್ಳಿ ರೈತರ ಹೋರಾಟಕ್ಕೆ ದೇಶದ ವಿವಿಧ ಭಾಗಗಳ 50 ರಷ್ಟು ಜನಪರ ಸಂಘಟನೆಗಳು, ಪ್ರಖ್ಯಾತ ಚಿಂತಕರು ಹಾಗೂ ಹೋರಾಟಗಾರರು ಬೆಂಬಲ ನೀಡಿದ್ದಾರೆ. ನಮ್ಮ ಹಿಂದೆ ಯಾರಿದ್ದಾರೆ ಎಂದು ನಾವು ಹೇಳಿದ್ದೇವೆ. ನಿಮ್ಮ ಹಿಂದೆ ಯಾರಿದ್ದಾರೆ ಅಂತ ನೀವು ಹೇಳಿ ಎಂದು ಹೇಳಿದರು.

ಎಂ.ಬಿ ಪಾಟೀಲರೆ ನೀವು ಕಥೆಗಳನ್ನು ಹೇಳುವುದನ್ನು ನಿಲ್ಲಿಸಿ. ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಭೂ ಸ್ವಾಧೀನ ಕೈ ಬಿಡಲು ಇರುವ ಕಾನೂನು ತೊಡಕುಗಳು ಏನು? ಅದಕ್ಕೆ ಪರಿಹಾರಗಳೇನು ಎಂದು ಹೇಳಬೇಕು. ಅದನ್ನು ಹೊರತು ಎಕರೆಗೆ ಇಷ್ಟು ಪರಿಹಾರ ಕೊಡುತ್ತೇವೆ ಎಂಬ ಮಾತುಗಳು ನಮಗೆ ಬೇಡ. ಮಣ್ಣು ಮಾರಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ ಎಂದರು.

ನಮಗೆ ಗೊತ್ತಿರುವ ಕಾನೂನಿನ ಪ್ರಕಾರ, ನಮ್ಮ ಸಂವಿಧಾನದ ಪ್ರಕಾರ ಭೂ ಸ್ವಾಧೀನ ಸಂಬಂಧ ಹೊರಡಿಸಿರುವ ಸರ್ಕಾರದ ಮೊದಲ ಅಧಿಸೂಚನೆಯೇ ತಪ್ಪು. ಹಸಿರು ವಲಯವನ್ನು ಕೈಗಾರಿಕಾ ಪ್ರದೇಶ ಮಾಡಲು ಕೈಗಾರಿಕಾ ನೀತಿಯಲ್ಲಿ ಅವಕಾಶ ಇಲ್ಲ. ಸಂವಿಧಾನದ ಪ್ರಕಾರ ಭೂಮಿಯನ್ನು ಕೈಗಾರಿಕಾ ಪ್ರದೇಶ ಎಂದು ಗುರುತಿಸದೆ ನೀವು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ನಿಮ್ಮ ಅಧಿಸೂಚನೆಯೇ ಸರಿ ಇಲ್ಲ. ಅದನ್ನು ಮೊದಲು ಸರಿಪಡಿಸಿಕೊಳ್ಳಿ ಎಂದು ತಿಳಿಸಿದರು.

ಸಂವಿಧಾನದ ಪ್ರಕಾರ ಒಂದು ಪ್ರದೇಶವನ್ನು ಹಳದಿ ವಲಯ ಎಂದು ಘೋಷಿಸಬೇಕಾದರೆ ಸ್ಥಳೀಯ ಸಂಸ್ಥೆಯ ನಾಲ್ಕನೇ ಒಂದು ಭಾಗದಷ್ಟು ಜನರು ನಮ್ಮ ಪ್ರದೇಶದಲ್ಲಿ ಕೃಷಿ ಮಾಡಲು ಸಾಧ್ಯವಿಲ್ಲ ಎಂದು ಹೇಳಬೇಕು. ಆ ಬಳಿಕ ಪರಿಸರ ಸಮೀಕ್ಷೆ ಮಾಡಬೇಕು. ಆ ಬಳಿಕ ನಿರ್ಧರಿಸಬೇಕು. ದೇವನಹಳ್ಳಿಯಲ್ಲಿ ಇದೆಲ್ಲಾ ಆಗಿದೆಯಾ? ನೀವು ಕಾನೂನಿನ ಕಥೆಗಳನ್ನು ಹೇಳುತ್ತಿರುವುದು ಯಾರಿಗೆ? ಹಸಿರು ವಲಯವನ್ನು ತೆಗೆದು ಹಾಕುತ್ತೀವಿ ಎನ್ನುತ್ತೀರಿ. ನೀವೇನು ರೈತರನ್ನು ಹೆದರಿಸುತ್ತಿದ್ದೀರಾ? ಎಂದು ಕಿಡಿಕಾರಿದರು.

ಎಂ.ಬಿ ಪಾಟೀಲರು ನಾವು ಬಿಜಾಪುರವನ್ನು ಸಂಪತ್ಬರಿತ ನಾಡು ಮಾಡಿದ್ದೇನೆ ಎನ್ನುತ್ತಿದ್ದಾರೆ. ಬಿಜಾಪುರದಲ್ಲೂ ರೈತರ ಹೋರಾಟ ನಡೆಯುತ್ತಿದೆ. ಹಾಗಾಗಿ, ಯಾವುದೋ ಊರಿನ ಕಥೆ ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಕುತಂತ್ರಗಳನ್ನು ನಿಲ್ಲಿಸಿ. ನೀವು ನಿಮ್ಮ ಸರ್ಕಾರ ಹೋರಾಟಗಾರರಿಗೆ ಕಾನೂನು ತೊಡಕಿದೆ ಎಂದು ಹೇಳಿದ್ದೀರಿ. ನಾಳೆ ಅದರ ಮಾತುಕತೆ ಮಾತ್ರ ನಡೆಯಬೇಕು, ಹೊರತು ಪರಿಹಾರದ ಮಾತುಕಥೆಯಲ್ಲ ಎಂದರು.

ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಈ ಕ್ಷಣವೇ ಭೂ ಸ್ವಾಧೀನ ಕೈ ಬಿಡಬಹುದು. ಆದರೆ, ಸಿದ್ದರಾಮಯ್ಯ ಸರ್ಕಾರಕ್ಕೆ ರೈತ ಹಿತ ಕಾಯುವ ಇಚ್ಚಾಶಕ್ತಿ ಇದೆಯಾ? ಅಥವಾ ಕಾರ್ಪೋರೇಟ್ ಹಿತಾಸಕ್ತಿ ಇದೆಯಾ? ಇದು ಗೊತ್ತಾಗಬೇಕಿದೆ. ರೈತ ಹಿತ ಕಾಯುವ ಇಚ್ಚಾಶಕ್ತಿ ಇದ್ದರೆ ಕಾನೂನಿನಡಿ ಸರ್ಕಾರಕ್ಕೆ ಎಲ್ಲಾ ಅಧಿಕಾರವೂ ಇದೆ. ಹಾಗಾಗಿ, ಸರ್ಕಾರದ ನಿಲುವು ನಾಳೆ ಗೊತ್ತಾಗಲಿದೆ ಎಂದರು.

ಕಳೆದ ಮೂರು ವರ್ಷಗಳಿಂದ ರೈತರು ಹೋರಾಟ ಮಾಡುತ್ತಿದ್ದರೂ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳ ಒಬ್ಬನೇ ಒಬ್ಬ ಜನಪ್ರತಿನಿಧಿ ರೈತರನ್ನು ಬೆಂಬಲಿಸಿಲ್ಲ. ಇದು ಈ ರಾಜ್ಯದ ದೌರ್ಭಾಗ್ಯ. ನಮ್ಮ ಹೋರಾಟ ನಿಲ್ಲಲ್ಲ, ಕಾನೂನು ಹೋರಾಟವೂ ನಡೆಯಲಿದೆ. ರೈತರ ಭೂ ಕಬಳಿಸುವ ಸರ್ಕಾರಗಳ ಕ್ರಮ ದೇವನಹಳ್ಳಿಯಲ್ಲೇ ಕೊನೆಯಾಗಬೇಕು ಎಂದು ಪ್ರಕಾಶ್ ರಾಜ್ ಹೇಳಿದರು.

ಎದ್ದೇಳು ಕರ್ನಾಟಕದ ಕೆ.ಎಲ್‌ ಅಶೋಕ್ ಅವರು ಮಾತನಾಡಿ, ” ದೇವನಹಳ್ಳಿಯ ರೈತರು ಕಳೆದ ಮೂರುವರೆ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ನಾಳೆಯ ಮುಖ್ಯಮಂತ್ರಿಗಳ ನಿರ್ಣಾಯಕ ಸಭೆಯಲ್ಲಿ ರೈತಪರ ನಿಲುವು ಪ್ರಕಟಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ದೇವನಹಳ್ಳಿಯ ಹೋರಾಟ ಇಡೀ ದೇಶದ ರೈತ ಹೋರಾಟಕ್ಕೆ ಹೊಸತೊಂದು ದಿಕ್ಕನ್ನು ತೋರಿಸಿದೆ ಎಂದರು.

ಮಾನವ ಹಕ್ಕುಗಳ ಕಾರ್ಯಕರ್ತೆ ಹಾಗೂ ಎದ್ದೇಳು ಕರ್ನಾಟಕದ ಪ್ರಮುಖರಾದ ತಾರಾರಾವ್, ಬೋರಯ್ಯ ಚಿತ್ರದುರ್ಗ, ರೈತ ನಾಯಕ ವೀರಸಂಗಯ್ಯ, ದಲಿತ ಮುಖಂಡರಾದ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ದೇವನಹಳ್ಳಿ: “ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ, ಗುರುತು!” – ರೈತ ಹೋರಾಟಕ್ಕೆ ದೇಶದ 30 ಸಂಘಟನೆಗಳ ಬೆಂಬಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...