Homeಕರ್ನಾಟಕನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ:...

ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್

"ದೇವನಹಳ್ಳಿಯ ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ, ಸಚಿವರು ದಿಲ್ಲಿಗೆ ಹೋಗಿದ್ದು ಏಕೆ? ಡಿಫೆನ್ಸ್ ಕಾರಿಡಾರ್, ಏರೋ ಸ್ಪೇಸ್‌ಗೆ ಮನವಿ ಮಾಡಿದ್ದು ಏಕೆ? "

- Advertisement -
- Advertisement -

ದೇವನಹಳ್ಳಿ ರೈತರ ಭೂಸ್ವಾಧೀನ ಸಂಬಂಧ ನಾಳೆ ಮುಖ್ಯಮಂತ್ರಿ ಕರೆದಿರುವ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ಮಾತ್ರ ಚರ್ಚೆ ನಡೆಯಬೇಕೇ ಹೊರತು, ಭೂಮಿ ಕೊಟ್ಟರೆ ಪರಿಹಾರ ಕೊಡುತ್ತೇವೆ ಎಂಬುವುದು ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಎದ್ದೇಳು ಕರ್ನಾಟಕ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ಹೋಗಿದ್ದಾರೆ. ಅಲ್ಲಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಡಿಫೆನ್ಸ್ ಕಾರಿಡಾರ್ ಮತ್ತು ಏರೋ ಸ್ಪೇಸ್‌ಗೆ ಮನವಿ ಮಾಡಿದ್ದಾರೆ. ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಡಲು ಕಾನೂನು ತೊಡಕಿದೆ ಎಂದು ನಮಗೆ ಹೇಳಿ, ನೀವು ದೆಹಲಿಗೆ ಹೋಗಿದ್ದು ಏಕೆ? ಎಂದು ಪ್ರಶ್ನಿಸಿದರು.

ದೇವನಹಳ್ಳಿಯ ರೈತರು ನಾವು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆ ಬಗ್ಗೆ ಗಮನ ಹರಿಸಲು ಸರ್ಕಾರಕ್ಕೆ ಇಷ್ಟು ಸಮಯ ಬೇಕಾಯಿತು. ಈಗ ಕಾನೂನಿನ ತೊಡಕಿದೆ ಎಂದು 15ನೇ ತಾರೀಖಿನವರೆಗೆ ಸಮಯ ಕೇಳಿದ್ದಾರೆ. ಈ ನಡುವೆ ನಾವು ಭೂಮಿ ಕೊಡುತ್ತೀವಿ ಎಂದು ದೀಢೀರ್ ಕಾಣಿಸಿಕೊಂಡ ಗುಂಪಿಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭೂಮಿ ಕೊಡುತ್ತೇವೆ ಎಂದು ದಿಢೀರ್ ಕಾಣಿಸಿಕೊಂಡ ಗುಂಪು ಎಕರೆಗೆ 3.5 ಕೋಟಿ ಕೇಳಿದೆ. ಸುತ್ತಮುತ್ತಲ ಉಳಿದ ಪ್ರದೇಶವನ್ನು ಹಳದಿ ವಲಯ ಮಾಡುವಂತೆ ಕೋರಿದೆ. ರೈತರು ಮೂರುವರೆ ಕೋಟಿ ಕೇಳಿದ್ದಾರೆ ಎಂದು ಎಂ.ಬಿ ಪಾಟೀಲರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಪಾಟೀಲರೇ ನೀವು ಮಾತನಾಡುತ್ತಿರುವುದು ನ್ಯಾಯನಾ? ಎಕರೆಗೆ ಮೂರುವರೆ ಕೋಟಿ ಕೊಡಲು ನೀವು ಯಾರು? ಅಷ್ಟೊಂದು ಹಣ ಎಲ್ಲಿಂದ ಕೊಡುತ್ತೀರಿ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಎಂ.ಬಿ ಪಾಟೀಲರೇ ನಿಮ್ಮ ಸುಸ್ಥಿರ ಅಭಿವೃದ್ಧಿ ಏನು? ಪಕ್ಕದ ರಾಜ್ಯದಲ್ಲಿ 95 ಪೈಸೆಗೆ ಕಂಪನಿಗಳಿಗೆ ಜಮೀನು ಕೊಟ್ಟರು ಅಂತ ನೀವು ರೈತರಿಂದ ಮೂರುವರೆ ಕೋಟಿಗೆ ಜಮೀನು ತಗೊಂಡು ಅದನ್ನು ಕಂಪನಿಗಳಿಗೆ 75 ಪೈಸೆಗೆ ಕೊಡುತ್ತೀರಾ? ಮೂರುವರೆ ಕೋಟಿ ಯಾರಪ್ಪನ ದುಡ್ಡು? ನಿಮ್ಮ ಮನೆಯಿಂದ ತಂದಿದ್ದೀರಾ? ಅದು ನಮ್ಮಂತ ನಾಗರಿಕರ ತೆರಿಗೆ ಹಣ. ನೀವು ಗ್ಯಾರಂಟಿಗಳನ್ನು ಕೊಟ್ಟು ಅದಕ್ಕೆ ದುಡ್ಡಿಲ್ಲ ಎನ್ನುತ್ತೀರಿ, ಇಲ್ಲಿ ಸಾವಿರಾರು ಎಕರೆಗೆ ತಲಾ ಮೂರುವರೆ ಕೋಟಿ ಕೊಡುತ್ತೀವಿ ಎನ್ನುತ್ತೀರಿ. ಎಲ್ಲಿಂದ ದುಡ್ಡು ತರುತ್ತೀರಿ? ಎಂದು ಕೇಳಿದರು.

ರೈತರ ನಡುವೆ ನಾವು ಒಡಕು ಹುಟ್ಟಿಸಿಲ್ಲ ಎಂದು ಎಂ.ಬಿ ಪಾಟೀಲ್ ಹೇಳುತ್ತಿದ್ದಾರೆ. ಹಾಗಾದರೆ ಒಡಕು ಹುಟ್ಟಿಸಿದವರು ಯಾರು? ನೀವು ಒಡಕು ಮೂಡಿಸಲು 10 ದಿನಗಳ ಕಾಲವಕಾಶ ತೆಗೆದುಕೊಂಡಿದ್ದಾ? ಸಿಎಂ 10 ದಿನಗಳ ಸಮಯ ಕೇಳಿದ ಮೇಲೆ ಸಚಿವರೊಂದಿಗೆ ದೆಹಲಿಗೆ ಭೇಟಿ ನೀಡಿದ್ದಾರೆ. ದಲ್ಲಾಲಿಗಳ ಭೇಟಿಗೆ ಅವಕಾಶ ಕೊಟ್ಟಿದ್ದಾರೆ. ಎಂ.ಬಿ ಪಾಟೀಲ್ ಕುಹದ ಮಾತುಗಳನ್ನು ಆಡುತ್ತಿದ್ದಾರೆ. ಹೋರಾಟಗಾರರ ಹಿಂದೆ ಯಾರಿದ್ದಾರೆ ಎಂಬುವುದು ನಮಗೆ ಗೊತ್ತಿದೆ ಎಂದಿದ್ದಾರೆ. ನಮ್ಮ ಹಿಂದೆ ಇರುವವರ ಪಟ್ಟಿಯನ್ನು ನಾವು ಕೊಡುತ್ತೇವೆ ಎಂದರು.

ದೇವನಹಳ್ಳಿ ರೈತರ ಹೋರಾಟಕ್ಕೆ ದೇಶದ ವಿವಿಧ ಭಾಗಗಳ 50 ರಷ್ಟು ಜನಪರ ಸಂಘಟನೆಗಳು, ಪ್ರಖ್ಯಾತ ಚಿಂತಕರು ಹಾಗೂ ಹೋರಾಟಗಾರರು ಬೆಂಬಲ ನೀಡಿದ್ದಾರೆ. ನಮ್ಮ ಹಿಂದೆ ಯಾರಿದ್ದಾರೆ ಎಂದು ನಾವು ಹೇಳಿದ್ದೇವೆ. ನಿಮ್ಮ ಹಿಂದೆ ಯಾರಿದ್ದಾರೆ ಅಂತ ನೀವು ಹೇಳಿ ಎಂದು ಹೇಳಿದರು.

ಎಂ.ಬಿ ಪಾಟೀಲರೆ ನೀವು ಕಥೆಗಳನ್ನು ಹೇಳುವುದನ್ನು ನಿಲ್ಲಿಸಿ. ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಭೂ ಸ್ವಾಧೀನ ಕೈ ಬಿಡಲು ಇರುವ ಕಾನೂನು ತೊಡಕುಗಳು ಏನು? ಅದಕ್ಕೆ ಪರಿಹಾರಗಳೇನು ಎಂದು ಹೇಳಬೇಕು. ಅದನ್ನು ಹೊರತು ಎಕರೆಗೆ ಇಷ್ಟು ಪರಿಹಾರ ಕೊಡುತ್ತೇವೆ ಎಂಬ ಮಾತುಗಳು ನಮಗೆ ಬೇಡ. ಮಣ್ಣು ಮಾರಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ ಎಂದರು.

ನಮಗೆ ಗೊತ್ತಿರುವ ಕಾನೂನಿನ ಪ್ರಕಾರ, ನಮ್ಮ ಸಂವಿಧಾನದ ಪ್ರಕಾರ ಭೂ ಸ್ವಾಧೀನ ಸಂಬಂಧ ಹೊರಡಿಸಿರುವ ಸರ್ಕಾರದ ಮೊದಲ ಅಧಿಸೂಚನೆಯೇ ತಪ್ಪು. ಹಸಿರು ವಲಯವನ್ನು ಕೈಗಾರಿಕಾ ಪ್ರದೇಶ ಮಾಡಲು ಕೈಗಾರಿಕಾ ನೀತಿಯಲ್ಲಿ ಅವಕಾಶ ಇಲ್ಲ. ಸಂವಿಧಾನದ ಪ್ರಕಾರ ಭೂಮಿಯನ್ನು ಕೈಗಾರಿಕಾ ಪ್ರದೇಶ ಎಂದು ಗುರುತಿಸದೆ ನೀವು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ನಿಮ್ಮ ಅಧಿಸೂಚನೆಯೇ ಸರಿ ಇಲ್ಲ. ಅದನ್ನು ಮೊದಲು ಸರಿಪಡಿಸಿಕೊಳ್ಳಿ ಎಂದು ತಿಳಿಸಿದರು.

ಸಂವಿಧಾನದ ಪ್ರಕಾರ ಒಂದು ಪ್ರದೇಶವನ್ನು ಹಳದಿ ವಲಯ ಎಂದು ಘೋಷಿಸಬೇಕಾದರೆ ಸ್ಥಳೀಯ ಸಂಸ್ಥೆಯ ನಾಲ್ಕನೇ ಒಂದು ಭಾಗದಷ್ಟು ಜನರು ನಮ್ಮ ಪ್ರದೇಶದಲ್ಲಿ ಕೃಷಿ ಮಾಡಲು ಸಾಧ್ಯವಿಲ್ಲ ಎಂದು ಹೇಳಬೇಕು. ಆ ಬಳಿಕ ಪರಿಸರ ಸಮೀಕ್ಷೆ ಮಾಡಬೇಕು. ಆ ಬಳಿಕ ನಿರ್ಧರಿಸಬೇಕು. ದೇವನಹಳ್ಳಿಯಲ್ಲಿ ಇದೆಲ್ಲಾ ಆಗಿದೆಯಾ? ನೀವು ಕಾನೂನಿನ ಕಥೆಗಳನ್ನು ಹೇಳುತ್ತಿರುವುದು ಯಾರಿಗೆ? ಹಸಿರು ವಲಯವನ್ನು ತೆಗೆದು ಹಾಕುತ್ತೀವಿ ಎನ್ನುತ್ತೀರಿ. ನೀವೇನು ರೈತರನ್ನು ಹೆದರಿಸುತ್ತಿದ್ದೀರಾ? ಎಂದು ಕಿಡಿಕಾರಿದರು.

ಎಂ.ಬಿ ಪಾಟೀಲರು ನಾವು ಬಿಜಾಪುರವನ್ನು ಸಂಪತ್ಬರಿತ ನಾಡು ಮಾಡಿದ್ದೇನೆ ಎನ್ನುತ್ತಿದ್ದಾರೆ. ಬಿಜಾಪುರದಲ್ಲೂ ರೈತರ ಹೋರಾಟ ನಡೆಯುತ್ತಿದೆ. ಹಾಗಾಗಿ, ಯಾವುದೋ ಊರಿನ ಕಥೆ ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಕುತಂತ್ರಗಳನ್ನು ನಿಲ್ಲಿಸಿ. ನೀವು ನಿಮ್ಮ ಸರ್ಕಾರ ಹೋರಾಟಗಾರರಿಗೆ ಕಾನೂನು ತೊಡಕಿದೆ ಎಂದು ಹೇಳಿದ್ದೀರಿ. ನಾಳೆ ಅದರ ಮಾತುಕತೆ ಮಾತ್ರ ನಡೆಯಬೇಕು, ಹೊರತು ಪರಿಹಾರದ ಮಾತುಕಥೆಯಲ್ಲ ಎಂದರು.

ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಈ ಕ್ಷಣವೇ ಭೂ ಸ್ವಾಧೀನ ಕೈ ಬಿಡಬಹುದು. ಆದರೆ, ಸಿದ್ದರಾಮಯ್ಯ ಸರ್ಕಾರಕ್ಕೆ ರೈತ ಹಿತ ಕಾಯುವ ಇಚ್ಚಾಶಕ್ತಿ ಇದೆಯಾ? ಅಥವಾ ಕಾರ್ಪೋರೇಟ್ ಹಿತಾಸಕ್ತಿ ಇದೆಯಾ? ಇದು ಗೊತ್ತಾಗಬೇಕಿದೆ. ರೈತ ಹಿತ ಕಾಯುವ ಇಚ್ಚಾಶಕ್ತಿ ಇದ್ದರೆ ಕಾನೂನಿನಡಿ ಸರ್ಕಾರಕ್ಕೆ ಎಲ್ಲಾ ಅಧಿಕಾರವೂ ಇದೆ. ಹಾಗಾಗಿ, ಸರ್ಕಾರದ ನಿಲುವು ನಾಳೆ ಗೊತ್ತಾಗಲಿದೆ ಎಂದರು.

ಕಳೆದ ಮೂರು ವರ್ಷಗಳಿಂದ ರೈತರು ಹೋರಾಟ ಮಾಡುತ್ತಿದ್ದರೂ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳ ಒಬ್ಬನೇ ಒಬ್ಬ ಜನಪ್ರತಿನಿಧಿ ರೈತರನ್ನು ಬೆಂಬಲಿಸಿಲ್ಲ. ಇದು ಈ ರಾಜ್ಯದ ದೌರ್ಭಾಗ್ಯ. ನಮ್ಮ ಹೋರಾಟ ನಿಲ್ಲಲ್ಲ, ಕಾನೂನು ಹೋರಾಟವೂ ನಡೆಯಲಿದೆ. ರೈತರ ಭೂ ಕಬಳಿಸುವ ಸರ್ಕಾರಗಳ ಕ್ರಮ ದೇವನಹಳ್ಳಿಯಲ್ಲೇ ಕೊನೆಯಾಗಬೇಕು ಎಂದು ಪ್ರಕಾಶ್ ರಾಜ್ ಹೇಳಿದರು.

ಎದ್ದೇಳು ಕರ್ನಾಟಕದ ಕೆ.ಎಲ್‌ ಅಶೋಕ್ ಅವರು ಮಾತನಾಡಿ, ” ದೇವನಹಳ್ಳಿಯ ರೈತರು ಕಳೆದ ಮೂರುವರೆ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ನಾಳೆಯ ಮುಖ್ಯಮಂತ್ರಿಗಳ ನಿರ್ಣಾಯಕ ಸಭೆಯಲ್ಲಿ ರೈತಪರ ನಿಲುವು ಪ್ರಕಟಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ದೇವನಹಳ್ಳಿಯ ಹೋರಾಟ ಇಡೀ ದೇಶದ ರೈತ ಹೋರಾಟಕ್ಕೆ ಹೊಸತೊಂದು ದಿಕ್ಕನ್ನು ತೋರಿಸಿದೆ ಎಂದರು.

ಮಾನವ ಹಕ್ಕುಗಳ ಕಾರ್ಯಕರ್ತೆ ಹಾಗೂ ಎದ್ದೇಳು ಕರ್ನಾಟಕದ ಪ್ರಮುಖರಾದ ತಾರಾರಾವ್, ಬೋರಯ್ಯ ಚಿತ್ರದುರ್ಗ, ರೈತ ನಾಯಕ ವೀರಸಂಗಯ್ಯ, ದಲಿತ ಮುಖಂಡರಾದ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ದೇವನಹಳ್ಳಿ: “ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ, ಗುರುತು!” – ರೈತ ಹೋರಾಟಕ್ಕೆ ದೇಶದ 30 ಸಂಘಟನೆಗಳ ಬೆಂಬಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...