Homeಕರ್ನಾಟಕನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ:...

ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್

"ದೇವನಹಳ್ಳಿಯ ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ, ಸಚಿವರು ದಿಲ್ಲಿಗೆ ಹೋಗಿದ್ದು ಏಕೆ? ಡಿಫೆನ್ಸ್ ಕಾರಿಡಾರ್, ಏರೋ ಸ್ಪೇಸ್‌ಗೆ ಮನವಿ ಮಾಡಿದ್ದು ಏಕೆ? "

- Advertisement -
- Advertisement -

ದೇವನಹಳ್ಳಿ ರೈತರ ಭೂಸ್ವಾಧೀನ ಸಂಬಂಧ ನಾಳೆ ಮುಖ್ಯಮಂತ್ರಿ ಕರೆದಿರುವ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ಮಾತ್ರ ಚರ್ಚೆ ನಡೆಯಬೇಕೇ ಹೊರತು, ಭೂಮಿ ಕೊಟ್ಟರೆ ಪರಿಹಾರ ಕೊಡುತ್ತೇವೆ ಎಂಬುವುದು ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಎದ್ದೇಳು ಕರ್ನಾಟಕ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ಹೋಗಿದ್ದಾರೆ. ಅಲ್ಲಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಡಿಫೆನ್ಸ್ ಕಾರಿಡಾರ್ ಮತ್ತು ಏರೋ ಸ್ಪೇಸ್‌ಗೆ ಮನವಿ ಮಾಡಿದ್ದಾರೆ. ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಡಲು ಕಾನೂನು ತೊಡಕಿದೆ ಎಂದು ನಮಗೆ ಹೇಳಿ, ನೀವು ದೆಹಲಿಗೆ ಹೋಗಿದ್ದು ಏಕೆ? ಎಂದು ಪ್ರಶ್ನಿಸಿದರು.

ದೇವನಹಳ್ಳಿಯ ರೈತರು ನಾವು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆ ಬಗ್ಗೆ ಗಮನ ಹರಿಸಲು ಸರ್ಕಾರಕ್ಕೆ ಇಷ್ಟು ಸಮಯ ಬೇಕಾಯಿತು. ಈಗ ಕಾನೂನಿನ ತೊಡಕಿದೆ ಎಂದು 15ನೇ ತಾರೀಖಿನವರೆಗೆ ಸಮಯ ಕೇಳಿದ್ದಾರೆ. ಈ ನಡುವೆ ನಾವು ಭೂಮಿ ಕೊಡುತ್ತೀವಿ ಎಂದು ದೀಢೀರ್ ಕಾಣಿಸಿಕೊಂಡ ಗುಂಪಿಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭೂಮಿ ಕೊಡುತ್ತೇವೆ ಎಂದು ದಿಢೀರ್ ಕಾಣಿಸಿಕೊಂಡ ಗುಂಪು ಎಕರೆಗೆ 3.5 ಕೋಟಿ ಕೇಳಿದೆ. ಸುತ್ತಮುತ್ತಲ ಉಳಿದ ಪ್ರದೇಶವನ್ನು ಹಳದಿ ವಲಯ ಮಾಡುವಂತೆ ಕೋರಿದೆ. ರೈತರು ಮೂರುವರೆ ಕೋಟಿ ಕೇಳಿದ್ದಾರೆ ಎಂದು ಎಂ.ಬಿ ಪಾಟೀಲರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಪಾಟೀಲರೇ ನೀವು ಮಾತನಾಡುತ್ತಿರುವುದು ನ್ಯಾಯನಾ? ಎಕರೆಗೆ ಮೂರುವರೆ ಕೋಟಿ ಕೊಡಲು ನೀವು ಯಾರು? ಅಷ್ಟೊಂದು ಹಣ ಎಲ್ಲಿಂದ ಕೊಡುತ್ತೀರಿ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಎಂ.ಬಿ ಪಾಟೀಲರೇ ನಿಮ್ಮ ಸುಸ್ಥಿರ ಅಭಿವೃದ್ಧಿ ಏನು? ಪಕ್ಕದ ರಾಜ್ಯದಲ್ಲಿ 95 ಪೈಸೆಗೆ ಕಂಪನಿಗಳಿಗೆ ಜಮೀನು ಕೊಟ್ಟರು ಅಂತ ನೀವು ರೈತರಿಂದ ಮೂರುವರೆ ಕೋಟಿಗೆ ಜಮೀನು ತಗೊಂಡು ಅದನ್ನು ಕಂಪನಿಗಳಿಗೆ 75 ಪೈಸೆಗೆ ಕೊಡುತ್ತೀರಾ? ಮೂರುವರೆ ಕೋಟಿ ಯಾರಪ್ಪನ ದುಡ್ಡು? ನಿಮ್ಮ ಮನೆಯಿಂದ ತಂದಿದ್ದೀರಾ? ಅದು ನಮ್ಮಂತ ನಾಗರಿಕರ ತೆರಿಗೆ ಹಣ. ನೀವು ಗ್ಯಾರಂಟಿಗಳನ್ನು ಕೊಟ್ಟು ಅದಕ್ಕೆ ದುಡ್ಡಿಲ್ಲ ಎನ್ನುತ್ತೀರಿ, ಇಲ್ಲಿ ಸಾವಿರಾರು ಎಕರೆಗೆ ತಲಾ ಮೂರುವರೆ ಕೋಟಿ ಕೊಡುತ್ತೀವಿ ಎನ್ನುತ್ತೀರಿ. ಎಲ್ಲಿಂದ ದುಡ್ಡು ತರುತ್ತೀರಿ? ಎಂದು ಕೇಳಿದರು.

ರೈತರ ನಡುವೆ ನಾವು ಒಡಕು ಹುಟ್ಟಿಸಿಲ್ಲ ಎಂದು ಎಂ.ಬಿ ಪಾಟೀಲ್ ಹೇಳುತ್ತಿದ್ದಾರೆ. ಹಾಗಾದರೆ ಒಡಕು ಹುಟ್ಟಿಸಿದವರು ಯಾರು? ನೀವು ಒಡಕು ಮೂಡಿಸಲು 10 ದಿನಗಳ ಕಾಲವಕಾಶ ತೆಗೆದುಕೊಂಡಿದ್ದಾ? ಸಿಎಂ 10 ದಿನಗಳ ಸಮಯ ಕೇಳಿದ ಮೇಲೆ ಸಚಿವರೊಂದಿಗೆ ದೆಹಲಿಗೆ ಭೇಟಿ ನೀಡಿದ್ದಾರೆ. ದಲ್ಲಾಲಿಗಳ ಭೇಟಿಗೆ ಅವಕಾಶ ಕೊಟ್ಟಿದ್ದಾರೆ. ಎಂ.ಬಿ ಪಾಟೀಲ್ ಕುಹದ ಮಾತುಗಳನ್ನು ಆಡುತ್ತಿದ್ದಾರೆ. ಹೋರಾಟಗಾರರ ಹಿಂದೆ ಯಾರಿದ್ದಾರೆ ಎಂಬುವುದು ನಮಗೆ ಗೊತ್ತಿದೆ ಎಂದಿದ್ದಾರೆ. ನಮ್ಮ ಹಿಂದೆ ಇರುವವರ ಪಟ್ಟಿಯನ್ನು ನಾವು ಕೊಡುತ್ತೇವೆ ಎಂದರು.

ದೇವನಹಳ್ಳಿ ರೈತರ ಹೋರಾಟಕ್ಕೆ ದೇಶದ ವಿವಿಧ ಭಾಗಗಳ 50 ರಷ್ಟು ಜನಪರ ಸಂಘಟನೆಗಳು, ಪ್ರಖ್ಯಾತ ಚಿಂತಕರು ಹಾಗೂ ಹೋರಾಟಗಾರರು ಬೆಂಬಲ ನೀಡಿದ್ದಾರೆ. ನಮ್ಮ ಹಿಂದೆ ಯಾರಿದ್ದಾರೆ ಎಂದು ನಾವು ಹೇಳಿದ್ದೇವೆ. ನಿಮ್ಮ ಹಿಂದೆ ಯಾರಿದ್ದಾರೆ ಅಂತ ನೀವು ಹೇಳಿ ಎಂದು ಹೇಳಿದರು.

ಎಂ.ಬಿ ಪಾಟೀಲರೆ ನೀವು ಕಥೆಗಳನ್ನು ಹೇಳುವುದನ್ನು ನಿಲ್ಲಿಸಿ. ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಭೂ ಸ್ವಾಧೀನ ಕೈ ಬಿಡಲು ಇರುವ ಕಾನೂನು ತೊಡಕುಗಳು ಏನು? ಅದಕ್ಕೆ ಪರಿಹಾರಗಳೇನು ಎಂದು ಹೇಳಬೇಕು. ಅದನ್ನು ಹೊರತು ಎಕರೆಗೆ ಇಷ್ಟು ಪರಿಹಾರ ಕೊಡುತ್ತೇವೆ ಎಂಬ ಮಾತುಗಳು ನಮಗೆ ಬೇಡ. ಮಣ್ಣು ಮಾರಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ ಎಂದರು.

ನಮಗೆ ಗೊತ್ತಿರುವ ಕಾನೂನಿನ ಪ್ರಕಾರ, ನಮ್ಮ ಸಂವಿಧಾನದ ಪ್ರಕಾರ ಭೂ ಸ್ವಾಧೀನ ಸಂಬಂಧ ಹೊರಡಿಸಿರುವ ಸರ್ಕಾರದ ಮೊದಲ ಅಧಿಸೂಚನೆಯೇ ತಪ್ಪು. ಹಸಿರು ವಲಯವನ್ನು ಕೈಗಾರಿಕಾ ಪ್ರದೇಶ ಮಾಡಲು ಕೈಗಾರಿಕಾ ನೀತಿಯಲ್ಲಿ ಅವಕಾಶ ಇಲ್ಲ. ಸಂವಿಧಾನದ ಪ್ರಕಾರ ಭೂಮಿಯನ್ನು ಕೈಗಾರಿಕಾ ಪ್ರದೇಶ ಎಂದು ಗುರುತಿಸದೆ ನೀವು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ನಿಮ್ಮ ಅಧಿಸೂಚನೆಯೇ ಸರಿ ಇಲ್ಲ. ಅದನ್ನು ಮೊದಲು ಸರಿಪಡಿಸಿಕೊಳ್ಳಿ ಎಂದು ತಿಳಿಸಿದರು.

ಸಂವಿಧಾನದ ಪ್ರಕಾರ ಒಂದು ಪ್ರದೇಶವನ್ನು ಹಳದಿ ವಲಯ ಎಂದು ಘೋಷಿಸಬೇಕಾದರೆ ಸ್ಥಳೀಯ ಸಂಸ್ಥೆಯ ನಾಲ್ಕನೇ ಒಂದು ಭಾಗದಷ್ಟು ಜನರು ನಮ್ಮ ಪ್ರದೇಶದಲ್ಲಿ ಕೃಷಿ ಮಾಡಲು ಸಾಧ್ಯವಿಲ್ಲ ಎಂದು ಹೇಳಬೇಕು. ಆ ಬಳಿಕ ಪರಿಸರ ಸಮೀಕ್ಷೆ ಮಾಡಬೇಕು. ಆ ಬಳಿಕ ನಿರ್ಧರಿಸಬೇಕು. ದೇವನಹಳ್ಳಿಯಲ್ಲಿ ಇದೆಲ್ಲಾ ಆಗಿದೆಯಾ? ನೀವು ಕಾನೂನಿನ ಕಥೆಗಳನ್ನು ಹೇಳುತ್ತಿರುವುದು ಯಾರಿಗೆ? ಹಸಿರು ವಲಯವನ್ನು ತೆಗೆದು ಹಾಕುತ್ತೀವಿ ಎನ್ನುತ್ತೀರಿ. ನೀವೇನು ರೈತರನ್ನು ಹೆದರಿಸುತ್ತಿದ್ದೀರಾ? ಎಂದು ಕಿಡಿಕಾರಿದರು.

ಎಂ.ಬಿ ಪಾಟೀಲರು ನಾವು ಬಿಜಾಪುರವನ್ನು ಸಂಪತ್ಬರಿತ ನಾಡು ಮಾಡಿದ್ದೇನೆ ಎನ್ನುತ್ತಿದ್ದಾರೆ. ಬಿಜಾಪುರದಲ್ಲೂ ರೈತರ ಹೋರಾಟ ನಡೆಯುತ್ತಿದೆ. ಹಾಗಾಗಿ, ಯಾವುದೋ ಊರಿನ ಕಥೆ ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಕುತಂತ್ರಗಳನ್ನು ನಿಲ್ಲಿಸಿ. ನೀವು ನಿಮ್ಮ ಸರ್ಕಾರ ಹೋರಾಟಗಾರರಿಗೆ ಕಾನೂನು ತೊಡಕಿದೆ ಎಂದು ಹೇಳಿದ್ದೀರಿ. ನಾಳೆ ಅದರ ಮಾತುಕತೆ ಮಾತ್ರ ನಡೆಯಬೇಕು, ಹೊರತು ಪರಿಹಾರದ ಮಾತುಕಥೆಯಲ್ಲ ಎಂದರು.

ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಈ ಕ್ಷಣವೇ ಭೂ ಸ್ವಾಧೀನ ಕೈ ಬಿಡಬಹುದು. ಆದರೆ, ಸಿದ್ದರಾಮಯ್ಯ ಸರ್ಕಾರಕ್ಕೆ ರೈತ ಹಿತ ಕಾಯುವ ಇಚ್ಚಾಶಕ್ತಿ ಇದೆಯಾ? ಅಥವಾ ಕಾರ್ಪೋರೇಟ್ ಹಿತಾಸಕ್ತಿ ಇದೆಯಾ? ಇದು ಗೊತ್ತಾಗಬೇಕಿದೆ. ರೈತ ಹಿತ ಕಾಯುವ ಇಚ್ಚಾಶಕ್ತಿ ಇದ್ದರೆ ಕಾನೂನಿನಡಿ ಸರ್ಕಾರಕ್ಕೆ ಎಲ್ಲಾ ಅಧಿಕಾರವೂ ಇದೆ. ಹಾಗಾಗಿ, ಸರ್ಕಾರದ ನಿಲುವು ನಾಳೆ ಗೊತ್ತಾಗಲಿದೆ ಎಂದರು.

ಕಳೆದ ಮೂರು ವರ್ಷಗಳಿಂದ ರೈತರು ಹೋರಾಟ ಮಾಡುತ್ತಿದ್ದರೂ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳ ಒಬ್ಬನೇ ಒಬ್ಬ ಜನಪ್ರತಿನಿಧಿ ರೈತರನ್ನು ಬೆಂಬಲಿಸಿಲ್ಲ. ಇದು ಈ ರಾಜ್ಯದ ದೌರ್ಭಾಗ್ಯ. ನಮ್ಮ ಹೋರಾಟ ನಿಲ್ಲಲ್ಲ, ಕಾನೂನು ಹೋರಾಟವೂ ನಡೆಯಲಿದೆ. ರೈತರ ಭೂ ಕಬಳಿಸುವ ಸರ್ಕಾರಗಳ ಕ್ರಮ ದೇವನಹಳ್ಳಿಯಲ್ಲೇ ಕೊನೆಯಾಗಬೇಕು ಎಂದು ಪ್ರಕಾಶ್ ರಾಜ್ ಹೇಳಿದರು.

ಎದ್ದೇಳು ಕರ್ನಾಟಕದ ಕೆ.ಎಲ್‌ ಅಶೋಕ್ ಅವರು ಮಾತನಾಡಿ, ” ದೇವನಹಳ್ಳಿಯ ರೈತರು ಕಳೆದ ಮೂರುವರೆ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ನಾಳೆಯ ಮುಖ್ಯಮಂತ್ರಿಗಳ ನಿರ್ಣಾಯಕ ಸಭೆಯಲ್ಲಿ ರೈತಪರ ನಿಲುವು ಪ್ರಕಟಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ದೇವನಹಳ್ಳಿಯ ಹೋರಾಟ ಇಡೀ ದೇಶದ ರೈತ ಹೋರಾಟಕ್ಕೆ ಹೊಸತೊಂದು ದಿಕ್ಕನ್ನು ತೋರಿಸಿದೆ ಎಂದರು.

ಮಾನವ ಹಕ್ಕುಗಳ ಕಾರ್ಯಕರ್ತೆ ಹಾಗೂ ಎದ್ದೇಳು ಕರ್ನಾಟಕದ ಪ್ರಮುಖರಾದ ತಾರಾರಾವ್, ಬೋರಯ್ಯ ಚಿತ್ರದುರ್ಗ, ರೈತ ನಾಯಕ ವೀರಸಂಗಯ್ಯ, ದಲಿತ ಮುಖಂಡರಾದ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ದೇವನಹಳ್ಳಿ: “ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ, ಗುರುತು!” – ರೈತ ಹೋರಾಟಕ್ಕೆ ದೇಶದ 30 ಸಂಘಟನೆಗಳ ಬೆಂಬಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...