Homeಮುಖಪುಟವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ - ಅಮಾನತು

ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾದ ಕ್ರಿಮಿನಲ್ ವಿಕಾಸ್ ದುಬೆಯ ಸಹಾಯಕ ದಯಾ ಶಂಕರ್ ಅಗ್ನಿಹೋತ್ರಿ ಭಾನುವಾರ ಬಂಧಿಸಲ್ಪಟ್ಟಿದ್ದು, ಆತ ನೀಡಿದ ವೀಡಿಯೊ ಹೇಳಿಕೆಯಲ್ಲಿ ಪೊಲೀಸರೇ ತಮ್ಮ ಮೇಲಿನ ದಾಳಿಯ ಸುಳಿವು ಕೊಟ್ಟಿದ್ದರು ಎಂದು ಹೇಳಿದ್ದಾನೆ.

ಕಳೆದ ವಾರ ಕಾನ್ಪುರದ ಡಿಕ್ರು ಗ್ರಾಮದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಗಳ ಹತ್ಯೆಯ ಹಿಂದಿನ ಪ್ರಮುಖ ಆರೋಪಿ ವಿಕಾಸ್ ದುಬೆ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಸೋಮವಾರ ಇನ್ನೂ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೆ.ಕೆ.ಶರ್ಮಾ ಮತ್ತು ಚೌಬೆಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ರಾಜೀವ್ ಸೇರಿದ್ದಾರೆ ಎಂದು ಕಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ವಿಶೇಷ ಪಡೆ ನಡೆಸಿದ ಆಂತರಿಕ ತನಿಖೆಯಲ್ಲಿ ಈ ಮೂವರು ಪೊಲೀಸರ ಕೈವಾಡ ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಕರೆಗಳ ದಾಖಲೆಗಳನ್ನು ಅಮಾನತುಗೊಳಿಸುವ ಮೊದಲು ಪರಿಶೀಲಿಸಲಾಗಿದೆ. ಅವರನ್ನು ಸೇವೆಯಿಂದ ಮುಕ್ತಾಯಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ದಾಳಿಯ ಬಗ್ಗೆ ಮಾಹಿತಿ ಸೋರಿಕೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರದ ಬಿಕ್ರು ಗ್ರಾಮದ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡಕ್ಕೆ ರಸ್ತೆ ತಡೆ ಮಾಡಿ ತಡೆಯೊಡ್ಡಿದ ಮತ್ತು ಪೊಲೀಸರ ಮೇಲೆ ದಾಳಿ ನಡೆಸಿದ ಗ್ಯಾಂಗ್‌ನ ಭಾಗ ಅಗ್ನಿಹೋತ್ರಿ ಎಂದು ಶಂಕಿಸಲಾಗಿದೆ.

ಆರೋಪಿಗೆ ದಾಳಿಯ ಮಾಹಿತಿ ಸೋರಿಕೆ ಸಂಶಯದಡಿಯಲ್ಲಿ ಚೌಬೆಪುರದ ಸ್ಟೇಷನ್ ಆಫೀಸರ್ (ಎಸ್‌ಒ) ವಿನಯ್ ತಿವಾರಿ ಅವರನ್ನು ಕಳೆದ ಶನಿವಾರ ಅಮಾನತುಗೊಳಿಸಿ ಲಖನೌಗೆ ಸ್ಥಳಾಂತರಿಸಲಾಯಿತು. ಸತತ ಒಂಭತ್ತು ಗಂಟೆಗಳ ಕಾಲ ಮಾಹಿತಿ ಸೋರಿಕೆಯ ಕುರಿತು ಆತನನ್ನು ವಿಚಾರಣೆ ನಡೆಸಲಾಗಿದೆ. ಆತನ ವಿರುದ್ಧದ ಆರೋಪಗಳ ಸ್ವರೂಪವನ್ನು ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ.

1993 ರ ಹಿಂದಿನ ಅಪರಾಧ ದಾಖಲೆಗಳ ಪ್ರಕಾರ ದುಬೆ ಒಬ್ಬ ಪ್ರಭಾವೀ ಗ್ಯಾಂಗ್ ಸ್ಟರ್ ಆಗಿದ್ದು, ಪೊಲೀಸ್ ಪಡೆಯೊಳಗೇ ಬೆಂಬಲವನ್ನು ಹೊಂದಿದ್ದಾನೆ.  ಕೊಲೆ, ಕೊಲೆ ಯತ್ನ ಮತ್ತು ಅಪಹರಣ ಪ್ರಕರಣಗಳ ಹೊರತಾಗಿಯೂ ಅವರನು ಮತ್ತು ಅವನ ಗ್ಯಾಂಗ್ ಮುಕ್ತವಾಗಿ ಓಡಾಡಲು ಪೊಲೀಸರೇ ಸಹಾಯ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು “ಈ ಹಿಂದೆ ಕನಿಷ್ಠ ಮೂವರು ಪೊಲೀಸರು ದುಬೆ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ ಮತ್ತು ಅವರ ವಿರುದ್ಧ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

“ದುಬೆಯೊಂದಿಗೆ ಲಿಂಕ್ ಹೊಂದಿರುವ ಪೊಲೀಸ್ ಸಿಬ್ಬಂದಿಗಳ ಸೇವೆಗಳನ್ನು ಕೊನೆಗೊಳಿಸಲಾಗುತ್ತದೆ ಮತ್ತು ಅವರು ಕ್ರಿಮಿನಲ್ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ” ಎಂದು ಅಗರ್ವಾಲ್ ಹೇಳಿದ್ದಾರೆ.

ಈ ನಡುವೆ ದುಬೆ ಬಂಧನಕ್ಕಾಗಿ 25 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ದುಬೆ ಬಗ್ಗೆ ಸುಳಿವು ನೀಡಿದವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಪೊಲಿಸರು ಘೋಷಿಸಿದ್ದಾರೆ.

ದುಬೆಗಾಗಿ ಪೊಲೀಸರು ಭಾರಿ ಪ್ರಮಾಣದ ಹುಡುಕಾಟ ಪ್ರಾರಂಭಿಸಿದ್ದಾರೆ. ದುಬೆ ಬಂಧನಕ್ಕಾಗಿ ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದ್ದು, ದರೋಡೆಕೋರರ ಹುಡುಕಾಟ ತೀವ್ರಗೊಂಡಿದೆ.


ಇದನ್ನೂ ಓದಿ: 8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...