Homeಮುಖಪುಟವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ - ಅಮಾನತು

ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾದ ಕ್ರಿಮಿನಲ್ ವಿಕಾಸ್ ದುಬೆಯ ಸಹಾಯಕ ದಯಾ ಶಂಕರ್ ಅಗ್ನಿಹೋತ್ರಿ ಭಾನುವಾರ ಬಂಧಿಸಲ್ಪಟ್ಟಿದ್ದು, ಆತ ನೀಡಿದ ವೀಡಿಯೊ ಹೇಳಿಕೆಯಲ್ಲಿ ಪೊಲೀಸರೇ ತಮ್ಮ ಮೇಲಿನ ದಾಳಿಯ ಸುಳಿವು ಕೊಟ್ಟಿದ್ದರು ಎಂದು ಹೇಳಿದ್ದಾನೆ.

ಕಳೆದ ವಾರ ಕಾನ್ಪುರದ ಡಿಕ್ರು ಗ್ರಾಮದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಗಳ ಹತ್ಯೆಯ ಹಿಂದಿನ ಪ್ರಮುಖ ಆರೋಪಿ ವಿಕಾಸ್ ದುಬೆ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಸೋಮವಾರ ಇನ್ನೂ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೆ.ಕೆ.ಶರ್ಮಾ ಮತ್ತು ಚೌಬೆಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ರಾಜೀವ್ ಸೇರಿದ್ದಾರೆ ಎಂದು ಕಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ವಿಶೇಷ ಪಡೆ ನಡೆಸಿದ ಆಂತರಿಕ ತನಿಖೆಯಲ್ಲಿ ಈ ಮೂವರು ಪೊಲೀಸರ ಕೈವಾಡ ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಕರೆಗಳ ದಾಖಲೆಗಳನ್ನು ಅಮಾನತುಗೊಳಿಸುವ ಮೊದಲು ಪರಿಶೀಲಿಸಲಾಗಿದೆ. ಅವರನ್ನು ಸೇವೆಯಿಂದ ಮುಕ್ತಾಯಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ದಾಳಿಯ ಬಗ್ಗೆ ಮಾಹಿತಿ ಸೋರಿಕೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರದ ಬಿಕ್ರು ಗ್ರಾಮದ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡಕ್ಕೆ ರಸ್ತೆ ತಡೆ ಮಾಡಿ ತಡೆಯೊಡ್ಡಿದ ಮತ್ತು ಪೊಲೀಸರ ಮೇಲೆ ದಾಳಿ ನಡೆಸಿದ ಗ್ಯಾಂಗ್‌ನ ಭಾಗ ಅಗ್ನಿಹೋತ್ರಿ ಎಂದು ಶಂಕಿಸಲಾಗಿದೆ.

ಆರೋಪಿಗೆ ದಾಳಿಯ ಮಾಹಿತಿ ಸೋರಿಕೆ ಸಂಶಯದಡಿಯಲ್ಲಿ ಚೌಬೆಪುರದ ಸ್ಟೇಷನ್ ಆಫೀಸರ್ (ಎಸ್‌ಒ) ವಿನಯ್ ತಿವಾರಿ ಅವರನ್ನು ಕಳೆದ ಶನಿವಾರ ಅಮಾನತುಗೊಳಿಸಿ ಲಖನೌಗೆ ಸ್ಥಳಾಂತರಿಸಲಾಯಿತು. ಸತತ ಒಂಭತ್ತು ಗಂಟೆಗಳ ಕಾಲ ಮಾಹಿತಿ ಸೋರಿಕೆಯ ಕುರಿತು ಆತನನ್ನು ವಿಚಾರಣೆ ನಡೆಸಲಾಗಿದೆ. ಆತನ ವಿರುದ್ಧದ ಆರೋಪಗಳ ಸ್ವರೂಪವನ್ನು ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ.

1993 ರ ಹಿಂದಿನ ಅಪರಾಧ ದಾಖಲೆಗಳ ಪ್ರಕಾರ ದುಬೆ ಒಬ್ಬ ಪ್ರಭಾವೀ ಗ್ಯಾಂಗ್ ಸ್ಟರ್ ಆಗಿದ್ದು, ಪೊಲೀಸ್ ಪಡೆಯೊಳಗೇ ಬೆಂಬಲವನ್ನು ಹೊಂದಿದ್ದಾನೆ.  ಕೊಲೆ, ಕೊಲೆ ಯತ್ನ ಮತ್ತು ಅಪಹರಣ ಪ್ರಕರಣಗಳ ಹೊರತಾಗಿಯೂ ಅವರನು ಮತ್ತು ಅವನ ಗ್ಯಾಂಗ್ ಮುಕ್ತವಾಗಿ ಓಡಾಡಲು ಪೊಲೀಸರೇ ಸಹಾಯ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು “ಈ ಹಿಂದೆ ಕನಿಷ್ಠ ಮೂವರು ಪೊಲೀಸರು ದುಬೆ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ ಮತ್ತು ಅವರ ವಿರುದ್ಧ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

“ದುಬೆಯೊಂದಿಗೆ ಲಿಂಕ್ ಹೊಂದಿರುವ ಪೊಲೀಸ್ ಸಿಬ್ಬಂದಿಗಳ ಸೇವೆಗಳನ್ನು ಕೊನೆಗೊಳಿಸಲಾಗುತ್ತದೆ ಮತ್ತು ಅವರು ಕ್ರಿಮಿನಲ್ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ” ಎಂದು ಅಗರ್ವಾಲ್ ಹೇಳಿದ್ದಾರೆ.

ಈ ನಡುವೆ ದುಬೆ ಬಂಧನಕ್ಕಾಗಿ 25 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ದುಬೆ ಬಗ್ಗೆ ಸುಳಿವು ನೀಡಿದವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಪೊಲಿಸರು ಘೋಷಿಸಿದ್ದಾರೆ.

ದುಬೆಗಾಗಿ ಪೊಲೀಸರು ಭಾರಿ ಪ್ರಮಾಣದ ಹುಡುಕಾಟ ಪ್ರಾರಂಭಿಸಿದ್ದಾರೆ. ದುಬೆ ಬಂಧನಕ್ಕಾಗಿ ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದ್ದು, ದರೋಡೆಕೋರರ ಹುಡುಕಾಟ ತೀವ್ರಗೊಂಡಿದೆ.


ಇದನ್ನೂ ಓದಿ: 8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...