Homeಮುಖಪುಟವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ - ಅಮಾನತು

ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾದ ಕ್ರಿಮಿನಲ್ ವಿಕಾಸ್ ದುಬೆಯ ಸಹಾಯಕ ದಯಾ ಶಂಕರ್ ಅಗ್ನಿಹೋತ್ರಿ ಭಾನುವಾರ ಬಂಧಿಸಲ್ಪಟ್ಟಿದ್ದು, ಆತ ನೀಡಿದ ವೀಡಿಯೊ ಹೇಳಿಕೆಯಲ್ಲಿ ಪೊಲೀಸರೇ ತಮ್ಮ ಮೇಲಿನ ದಾಳಿಯ ಸುಳಿವು ಕೊಟ್ಟಿದ್ದರು ಎಂದು ಹೇಳಿದ್ದಾನೆ.

ಕಳೆದ ವಾರ ಕಾನ್ಪುರದ ಡಿಕ್ರು ಗ್ರಾಮದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಗಳ ಹತ್ಯೆಯ ಹಿಂದಿನ ಪ್ರಮುಖ ಆರೋಪಿ ವಿಕಾಸ್ ದುಬೆ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಸೋಮವಾರ ಇನ್ನೂ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೆ.ಕೆ.ಶರ್ಮಾ ಮತ್ತು ಚೌಬೆಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ರಾಜೀವ್ ಸೇರಿದ್ದಾರೆ ಎಂದು ಕಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ವಿಶೇಷ ಪಡೆ ನಡೆಸಿದ ಆಂತರಿಕ ತನಿಖೆಯಲ್ಲಿ ಈ ಮೂವರು ಪೊಲೀಸರ ಕೈವಾಡ ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಕರೆಗಳ ದಾಖಲೆಗಳನ್ನು ಅಮಾನತುಗೊಳಿಸುವ ಮೊದಲು ಪರಿಶೀಲಿಸಲಾಗಿದೆ. ಅವರನ್ನು ಸೇವೆಯಿಂದ ಮುಕ್ತಾಯಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ದಾಳಿಯ ಬಗ್ಗೆ ಮಾಹಿತಿ ಸೋರಿಕೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರದ ಬಿಕ್ರು ಗ್ರಾಮದ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡಕ್ಕೆ ರಸ್ತೆ ತಡೆ ಮಾಡಿ ತಡೆಯೊಡ್ಡಿದ ಮತ್ತು ಪೊಲೀಸರ ಮೇಲೆ ದಾಳಿ ನಡೆಸಿದ ಗ್ಯಾಂಗ್‌ನ ಭಾಗ ಅಗ್ನಿಹೋತ್ರಿ ಎಂದು ಶಂಕಿಸಲಾಗಿದೆ.

ಆರೋಪಿಗೆ ದಾಳಿಯ ಮಾಹಿತಿ ಸೋರಿಕೆ ಸಂಶಯದಡಿಯಲ್ಲಿ ಚೌಬೆಪುರದ ಸ್ಟೇಷನ್ ಆಫೀಸರ್ (ಎಸ್‌ಒ) ವಿನಯ್ ತಿವಾರಿ ಅವರನ್ನು ಕಳೆದ ಶನಿವಾರ ಅಮಾನತುಗೊಳಿಸಿ ಲಖನೌಗೆ ಸ್ಥಳಾಂತರಿಸಲಾಯಿತು. ಸತತ ಒಂಭತ್ತು ಗಂಟೆಗಳ ಕಾಲ ಮಾಹಿತಿ ಸೋರಿಕೆಯ ಕುರಿತು ಆತನನ್ನು ವಿಚಾರಣೆ ನಡೆಸಲಾಗಿದೆ. ಆತನ ವಿರುದ್ಧದ ಆರೋಪಗಳ ಸ್ವರೂಪವನ್ನು ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ.

1993 ರ ಹಿಂದಿನ ಅಪರಾಧ ದಾಖಲೆಗಳ ಪ್ರಕಾರ ದುಬೆ ಒಬ್ಬ ಪ್ರಭಾವೀ ಗ್ಯಾಂಗ್ ಸ್ಟರ್ ಆಗಿದ್ದು, ಪೊಲೀಸ್ ಪಡೆಯೊಳಗೇ ಬೆಂಬಲವನ್ನು ಹೊಂದಿದ್ದಾನೆ.  ಕೊಲೆ, ಕೊಲೆ ಯತ್ನ ಮತ್ತು ಅಪಹರಣ ಪ್ರಕರಣಗಳ ಹೊರತಾಗಿಯೂ ಅವರನು ಮತ್ತು ಅವನ ಗ್ಯಾಂಗ್ ಮುಕ್ತವಾಗಿ ಓಡಾಡಲು ಪೊಲೀಸರೇ ಸಹಾಯ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು “ಈ ಹಿಂದೆ ಕನಿಷ್ಠ ಮೂವರು ಪೊಲೀಸರು ದುಬೆ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ ಮತ್ತು ಅವರ ವಿರುದ್ಧ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

“ದುಬೆಯೊಂದಿಗೆ ಲಿಂಕ್ ಹೊಂದಿರುವ ಪೊಲೀಸ್ ಸಿಬ್ಬಂದಿಗಳ ಸೇವೆಗಳನ್ನು ಕೊನೆಗೊಳಿಸಲಾಗುತ್ತದೆ ಮತ್ತು ಅವರು ಕ್ರಿಮಿನಲ್ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ” ಎಂದು ಅಗರ್ವಾಲ್ ಹೇಳಿದ್ದಾರೆ.

ಈ ನಡುವೆ ದುಬೆ ಬಂಧನಕ್ಕಾಗಿ 25 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ದುಬೆ ಬಗ್ಗೆ ಸುಳಿವು ನೀಡಿದವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಪೊಲಿಸರು ಘೋಷಿಸಿದ್ದಾರೆ.

ದುಬೆಗಾಗಿ ಪೊಲೀಸರು ಭಾರಿ ಪ್ರಮಾಣದ ಹುಡುಕಾಟ ಪ್ರಾರಂಭಿಸಿದ್ದಾರೆ. ದುಬೆ ಬಂಧನಕ್ಕಾಗಿ ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದ್ದು, ದರೋಡೆಕೋರರ ಹುಡುಕಾಟ ತೀವ್ರಗೊಂಡಿದೆ.


ಇದನ್ನೂ ಓದಿ: 8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...