Homeಮುಖಪುಟವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ - ಅಮಾನತು

ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾದ ಕ್ರಿಮಿನಲ್ ವಿಕಾಸ್ ದುಬೆಯ ಸಹಾಯಕ ದಯಾ ಶಂಕರ್ ಅಗ್ನಿಹೋತ್ರಿ ಭಾನುವಾರ ಬಂಧಿಸಲ್ಪಟ್ಟಿದ್ದು, ಆತ ನೀಡಿದ ವೀಡಿಯೊ ಹೇಳಿಕೆಯಲ್ಲಿ ಪೊಲೀಸರೇ ತಮ್ಮ ಮೇಲಿನ ದಾಳಿಯ ಸುಳಿವು ಕೊಟ್ಟಿದ್ದರು ಎಂದು ಹೇಳಿದ್ದಾನೆ.

ಕಳೆದ ವಾರ ಕಾನ್ಪುರದ ಡಿಕ್ರು ಗ್ರಾಮದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಗಳ ಹತ್ಯೆಯ ಹಿಂದಿನ ಪ್ರಮುಖ ಆರೋಪಿ ವಿಕಾಸ್ ದುಬೆ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಸೋಮವಾರ ಇನ್ನೂ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೆ.ಕೆ.ಶರ್ಮಾ ಮತ್ತು ಚೌಬೆಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ರಾಜೀವ್ ಸೇರಿದ್ದಾರೆ ಎಂದು ಕಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ವಿಶೇಷ ಪಡೆ ನಡೆಸಿದ ಆಂತರಿಕ ತನಿಖೆಯಲ್ಲಿ ಈ ಮೂವರು ಪೊಲೀಸರ ಕೈವಾಡ ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಕರೆಗಳ ದಾಖಲೆಗಳನ್ನು ಅಮಾನತುಗೊಳಿಸುವ ಮೊದಲು ಪರಿಶೀಲಿಸಲಾಗಿದೆ. ಅವರನ್ನು ಸೇವೆಯಿಂದ ಮುಕ್ತಾಯಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ದಾಳಿಯ ಬಗ್ಗೆ ಮಾಹಿತಿ ಸೋರಿಕೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರದ ಬಿಕ್ರು ಗ್ರಾಮದ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡಕ್ಕೆ ರಸ್ತೆ ತಡೆ ಮಾಡಿ ತಡೆಯೊಡ್ಡಿದ ಮತ್ತು ಪೊಲೀಸರ ಮೇಲೆ ದಾಳಿ ನಡೆಸಿದ ಗ್ಯಾಂಗ್‌ನ ಭಾಗ ಅಗ್ನಿಹೋತ್ರಿ ಎಂದು ಶಂಕಿಸಲಾಗಿದೆ.

ಆರೋಪಿಗೆ ದಾಳಿಯ ಮಾಹಿತಿ ಸೋರಿಕೆ ಸಂಶಯದಡಿಯಲ್ಲಿ ಚೌಬೆಪುರದ ಸ್ಟೇಷನ್ ಆಫೀಸರ್ (ಎಸ್‌ಒ) ವಿನಯ್ ತಿವಾರಿ ಅವರನ್ನು ಕಳೆದ ಶನಿವಾರ ಅಮಾನತುಗೊಳಿಸಿ ಲಖನೌಗೆ ಸ್ಥಳಾಂತರಿಸಲಾಯಿತು. ಸತತ ಒಂಭತ್ತು ಗಂಟೆಗಳ ಕಾಲ ಮಾಹಿತಿ ಸೋರಿಕೆಯ ಕುರಿತು ಆತನನ್ನು ವಿಚಾರಣೆ ನಡೆಸಲಾಗಿದೆ. ಆತನ ವಿರುದ್ಧದ ಆರೋಪಗಳ ಸ್ವರೂಪವನ್ನು ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ.

1993 ರ ಹಿಂದಿನ ಅಪರಾಧ ದಾಖಲೆಗಳ ಪ್ರಕಾರ ದುಬೆ ಒಬ್ಬ ಪ್ರಭಾವೀ ಗ್ಯಾಂಗ್ ಸ್ಟರ್ ಆಗಿದ್ದು, ಪೊಲೀಸ್ ಪಡೆಯೊಳಗೇ ಬೆಂಬಲವನ್ನು ಹೊಂದಿದ್ದಾನೆ.  ಕೊಲೆ, ಕೊಲೆ ಯತ್ನ ಮತ್ತು ಅಪಹರಣ ಪ್ರಕರಣಗಳ ಹೊರತಾಗಿಯೂ ಅವರನು ಮತ್ತು ಅವನ ಗ್ಯಾಂಗ್ ಮುಕ್ತವಾಗಿ ಓಡಾಡಲು ಪೊಲೀಸರೇ ಸಹಾಯ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು “ಈ ಹಿಂದೆ ಕನಿಷ್ಠ ಮೂವರು ಪೊಲೀಸರು ದುಬೆ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ ಮತ್ತು ಅವರ ವಿರುದ್ಧ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

“ದುಬೆಯೊಂದಿಗೆ ಲಿಂಕ್ ಹೊಂದಿರುವ ಪೊಲೀಸ್ ಸಿಬ್ಬಂದಿಗಳ ಸೇವೆಗಳನ್ನು ಕೊನೆಗೊಳಿಸಲಾಗುತ್ತದೆ ಮತ್ತು ಅವರು ಕ್ರಿಮಿನಲ್ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ” ಎಂದು ಅಗರ್ವಾಲ್ ಹೇಳಿದ್ದಾರೆ.

ಈ ನಡುವೆ ದುಬೆ ಬಂಧನಕ್ಕಾಗಿ 25 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ದುಬೆ ಬಗ್ಗೆ ಸುಳಿವು ನೀಡಿದವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಪೊಲಿಸರು ಘೋಷಿಸಿದ್ದಾರೆ.

ದುಬೆಗಾಗಿ ಪೊಲೀಸರು ಭಾರಿ ಪ್ರಮಾಣದ ಹುಡುಕಾಟ ಪ್ರಾರಂಭಿಸಿದ್ದಾರೆ. ದುಬೆ ಬಂಧನಕ್ಕಾಗಿ ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದ್ದು, ದರೋಡೆಕೋರರ ಹುಡುಕಾಟ ತೀವ್ರಗೊಂಡಿದೆ.


ಇದನ್ನೂ ಓದಿ: 8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...