Homeಮುಖಪುಟವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ - ಅಮಾನತು

ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾದ ಕ್ರಿಮಿನಲ್ ವಿಕಾಸ್ ದುಬೆಯ ಸಹಾಯಕ ದಯಾ ಶಂಕರ್ ಅಗ್ನಿಹೋತ್ರಿ ಭಾನುವಾರ ಬಂಧಿಸಲ್ಪಟ್ಟಿದ್ದು, ಆತ ನೀಡಿದ ವೀಡಿಯೊ ಹೇಳಿಕೆಯಲ್ಲಿ ಪೊಲೀಸರೇ ತಮ್ಮ ಮೇಲಿನ ದಾಳಿಯ ಸುಳಿವು ಕೊಟ್ಟಿದ್ದರು ಎಂದು ಹೇಳಿದ್ದಾನೆ.

ಕಳೆದ ವಾರ ಕಾನ್ಪುರದ ಡಿಕ್ರು ಗ್ರಾಮದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಗಳ ಹತ್ಯೆಯ ಹಿಂದಿನ ಪ್ರಮುಖ ಆರೋಪಿ ವಿಕಾಸ್ ದುಬೆ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಸೋಮವಾರ ಇನ್ನೂ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೆ.ಕೆ.ಶರ್ಮಾ ಮತ್ತು ಚೌಬೆಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ರಾಜೀವ್ ಸೇರಿದ್ದಾರೆ ಎಂದು ಕಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ವಿಶೇಷ ಪಡೆ ನಡೆಸಿದ ಆಂತರಿಕ ತನಿಖೆಯಲ್ಲಿ ಈ ಮೂವರು ಪೊಲೀಸರ ಕೈವಾಡ ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಕರೆಗಳ ದಾಖಲೆಗಳನ್ನು ಅಮಾನತುಗೊಳಿಸುವ ಮೊದಲು ಪರಿಶೀಲಿಸಲಾಗಿದೆ. ಅವರನ್ನು ಸೇವೆಯಿಂದ ಮುಕ್ತಾಯಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ದಾಳಿಯ ಬಗ್ಗೆ ಮಾಹಿತಿ ಸೋರಿಕೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರದ ಬಿಕ್ರು ಗ್ರಾಮದ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡಕ್ಕೆ ರಸ್ತೆ ತಡೆ ಮಾಡಿ ತಡೆಯೊಡ್ಡಿದ ಮತ್ತು ಪೊಲೀಸರ ಮೇಲೆ ದಾಳಿ ನಡೆಸಿದ ಗ್ಯಾಂಗ್‌ನ ಭಾಗ ಅಗ್ನಿಹೋತ್ರಿ ಎಂದು ಶಂಕಿಸಲಾಗಿದೆ.

ಆರೋಪಿಗೆ ದಾಳಿಯ ಮಾಹಿತಿ ಸೋರಿಕೆ ಸಂಶಯದಡಿಯಲ್ಲಿ ಚೌಬೆಪುರದ ಸ್ಟೇಷನ್ ಆಫೀಸರ್ (ಎಸ್‌ಒ) ವಿನಯ್ ತಿವಾರಿ ಅವರನ್ನು ಕಳೆದ ಶನಿವಾರ ಅಮಾನತುಗೊಳಿಸಿ ಲಖನೌಗೆ ಸ್ಥಳಾಂತರಿಸಲಾಯಿತು. ಸತತ ಒಂಭತ್ತು ಗಂಟೆಗಳ ಕಾಲ ಮಾಹಿತಿ ಸೋರಿಕೆಯ ಕುರಿತು ಆತನನ್ನು ವಿಚಾರಣೆ ನಡೆಸಲಾಗಿದೆ. ಆತನ ವಿರುದ್ಧದ ಆರೋಪಗಳ ಸ್ವರೂಪವನ್ನು ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ.

1993 ರ ಹಿಂದಿನ ಅಪರಾಧ ದಾಖಲೆಗಳ ಪ್ರಕಾರ ದುಬೆ ಒಬ್ಬ ಪ್ರಭಾವೀ ಗ್ಯಾಂಗ್ ಸ್ಟರ್ ಆಗಿದ್ದು, ಪೊಲೀಸ್ ಪಡೆಯೊಳಗೇ ಬೆಂಬಲವನ್ನು ಹೊಂದಿದ್ದಾನೆ.  ಕೊಲೆ, ಕೊಲೆ ಯತ್ನ ಮತ್ತು ಅಪಹರಣ ಪ್ರಕರಣಗಳ ಹೊರತಾಗಿಯೂ ಅವರನು ಮತ್ತು ಅವನ ಗ್ಯಾಂಗ್ ಮುಕ್ತವಾಗಿ ಓಡಾಡಲು ಪೊಲೀಸರೇ ಸಹಾಯ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು “ಈ ಹಿಂದೆ ಕನಿಷ್ಠ ಮೂವರು ಪೊಲೀಸರು ದುಬೆ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ ಮತ್ತು ಅವರ ವಿರುದ್ಧ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

“ದುಬೆಯೊಂದಿಗೆ ಲಿಂಕ್ ಹೊಂದಿರುವ ಪೊಲೀಸ್ ಸಿಬ್ಬಂದಿಗಳ ಸೇವೆಗಳನ್ನು ಕೊನೆಗೊಳಿಸಲಾಗುತ್ತದೆ ಮತ್ತು ಅವರು ಕ್ರಿಮಿನಲ್ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ” ಎಂದು ಅಗರ್ವಾಲ್ ಹೇಳಿದ್ದಾರೆ.

ಈ ನಡುವೆ ದುಬೆ ಬಂಧನಕ್ಕಾಗಿ 25 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ದುಬೆ ಬಗ್ಗೆ ಸುಳಿವು ನೀಡಿದವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಪೊಲಿಸರು ಘೋಷಿಸಿದ್ದಾರೆ.

ದುಬೆಗಾಗಿ ಪೊಲೀಸರು ಭಾರಿ ಪ್ರಮಾಣದ ಹುಡುಕಾಟ ಪ್ರಾರಂಭಿಸಿದ್ದಾರೆ. ದುಬೆ ಬಂಧನಕ್ಕಾಗಿ ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದ್ದು, ದರೋಡೆಕೋರರ ಹುಡುಕಾಟ ತೀವ್ರಗೊಂಡಿದೆ.


ಇದನ್ನೂ ಓದಿ: 8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...