Homeಮುಖಪುಟವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ - ಅಮಾನತು

ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾದ ಕ್ರಿಮಿನಲ್ ವಿಕಾಸ್ ದುಬೆಯ ಸಹಾಯಕ ದಯಾ ಶಂಕರ್ ಅಗ್ನಿಹೋತ್ರಿ ಭಾನುವಾರ ಬಂಧಿಸಲ್ಪಟ್ಟಿದ್ದು, ಆತ ನೀಡಿದ ವೀಡಿಯೊ ಹೇಳಿಕೆಯಲ್ಲಿ ಪೊಲೀಸರೇ ತಮ್ಮ ಮೇಲಿನ ದಾಳಿಯ ಸುಳಿವು ಕೊಟ್ಟಿದ್ದರು ಎಂದು ಹೇಳಿದ್ದಾನೆ.

ಕಳೆದ ವಾರ ಕಾನ್ಪುರದ ಡಿಕ್ರು ಗ್ರಾಮದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಗಳ ಹತ್ಯೆಯ ಹಿಂದಿನ ಪ್ರಮುಖ ಆರೋಪಿ ವಿಕಾಸ್ ದುಬೆ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಸೋಮವಾರ ಇನ್ನೂ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೆ.ಕೆ.ಶರ್ಮಾ ಮತ್ತು ಚೌಬೆಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ರಾಜೀವ್ ಸೇರಿದ್ದಾರೆ ಎಂದು ಕಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ವಿಶೇಷ ಪಡೆ ನಡೆಸಿದ ಆಂತರಿಕ ತನಿಖೆಯಲ್ಲಿ ಈ ಮೂವರು ಪೊಲೀಸರ ಕೈವಾಡ ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಕರೆಗಳ ದಾಖಲೆಗಳನ್ನು ಅಮಾನತುಗೊಳಿಸುವ ಮೊದಲು ಪರಿಶೀಲಿಸಲಾಗಿದೆ. ಅವರನ್ನು ಸೇವೆಯಿಂದ ಮುಕ್ತಾಯಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ದಾಳಿಯ ಬಗ್ಗೆ ಮಾಹಿತಿ ಸೋರಿಕೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರದ ಬಿಕ್ರು ಗ್ರಾಮದ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡಕ್ಕೆ ರಸ್ತೆ ತಡೆ ಮಾಡಿ ತಡೆಯೊಡ್ಡಿದ ಮತ್ತು ಪೊಲೀಸರ ಮೇಲೆ ದಾಳಿ ನಡೆಸಿದ ಗ್ಯಾಂಗ್‌ನ ಭಾಗ ಅಗ್ನಿಹೋತ್ರಿ ಎಂದು ಶಂಕಿಸಲಾಗಿದೆ.

ಆರೋಪಿಗೆ ದಾಳಿಯ ಮಾಹಿತಿ ಸೋರಿಕೆ ಸಂಶಯದಡಿಯಲ್ಲಿ ಚೌಬೆಪುರದ ಸ್ಟೇಷನ್ ಆಫೀಸರ್ (ಎಸ್‌ಒ) ವಿನಯ್ ತಿವಾರಿ ಅವರನ್ನು ಕಳೆದ ಶನಿವಾರ ಅಮಾನತುಗೊಳಿಸಿ ಲಖನೌಗೆ ಸ್ಥಳಾಂತರಿಸಲಾಯಿತು. ಸತತ ಒಂಭತ್ತು ಗಂಟೆಗಳ ಕಾಲ ಮಾಹಿತಿ ಸೋರಿಕೆಯ ಕುರಿತು ಆತನನ್ನು ವಿಚಾರಣೆ ನಡೆಸಲಾಗಿದೆ. ಆತನ ವಿರುದ್ಧದ ಆರೋಪಗಳ ಸ್ವರೂಪವನ್ನು ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ.

1993 ರ ಹಿಂದಿನ ಅಪರಾಧ ದಾಖಲೆಗಳ ಪ್ರಕಾರ ದುಬೆ ಒಬ್ಬ ಪ್ರಭಾವೀ ಗ್ಯಾಂಗ್ ಸ್ಟರ್ ಆಗಿದ್ದು, ಪೊಲೀಸ್ ಪಡೆಯೊಳಗೇ ಬೆಂಬಲವನ್ನು ಹೊಂದಿದ್ದಾನೆ.  ಕೊಲೆ, ಕೊಲೆ ಯತ್ನ ಮತ್ತು ಅಪಹರಣ ಪ್ರಕರಣಗಳ ಹೊರತಾಗಿಯೂ ಅವರನು ಮತ್ತು ಅವನ ಗ್ಯಾಂಗ್ ಮುಕ್ತವಾಗಿ ಓಡಾಡಲು ಪೊಲೀಸರೇ ಸಹಾಯ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು “ಈ ಹಿಂದೆ ಕನಿಷ್ಠ ಮೂವರು ಪೊಲೀಸರು ದುಬೆ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ ಮತ್ತು ಅವರ ವಿರುದ್ಧ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

“ದುಬೆಯೊಂದಿಗೆ ಲಿಂಕ್ ಹೊಂದಿರುವ ಪೊಲೀಸ್ ಸಿಬ್ಬಂದಿಗಳ ಸೇವೆಗಳನ್ನು ಕೊನೆಗೊಳಿಸಲಾಗುತ್ತದೆ ಮತ್ತು ಅವರು ಕ್ರಿಮಿನಲ್ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ” ಎಂದು ಅಗರ್ವಾಲ್ ಹೇಳಿದ್ದಾರೆ.

ಈ ನಡುವೆ ದುಬೆ ಬಂಧನಕ್ಕಾಗಿ 25 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ದುಬೆ ಬಗ್ಗೆ ಸುಳಿವು ನೀಡಿದವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಪೊಲಿಸರು ಘೋಷಿಸಿದ್ದಾರೆ.

ದುಬೆಗಾಗಿ ಪೊಲೀಸರು ಭಾರಿ ಪ್ರಮಾಣದ ಹುಡುಕಾಟ ಪ್ರಾರಂಭಿಸಿದ್ದಾರೆ. ದುಬೆ ಬಂಧನಕ್ಕಾಗಿ ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದ್ದು, ದರೋಡೆಕೋರರ ಹುಡುಕಾಟ ತೀವ್ರಗೊಂಡಿದೆ.


ಇದನ್ನೂ ಓದಿ: 8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...