Homeಮುಖಪುಟ25 ಸಾವಿರ ರೂಗಳಿಗೆ ಅಭ್ಯರ್ಥಿಗಳಿಗೆ ಮತದಾರರ ಮಾಹಿತಿ ಮಾರಾಟ: ಎಫ್‌ಐಆರ್ ದಾಖಲು

25 ಸಾವಿರ ರೂಗಳಿಗೆ ಅಭ್ಯರ್ಥಿಗಳಿಗೆ ಮತದಾರರ ಮಾಹಿತಿ ಮಾರಾಟ: ಎಫ್‌ಐಆರ್ ದಾಖಲು

- Advertisement -
- Advertisement -

25 ಸಾವಿರ ನೀಡಿ, ಮತದಾರರ ಸಂಪೂರ್ಣ ಮಾಹಿತಿ ಪಡೆದಕೊಳ್ಳಿ, ಜಯ ಸಾಧಿಸಿ ಎಂದು 6.5 ಲಕ್ಷ ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದ ಕೋರಮಂಗಲದ ಖಾಸಗಿ ಸಂಸ್ಥೆಯ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿಷಯದ ಕುರಿತು ಪಕ್ಷೇತರ ಅಭ್ಯರ್ಥಿಯೊಬ್ಬರ ಮಾಹಿತಿ ಮೇರೆಗೆ ‘ದಿ ನ್ಯೂಸ್‌ ಮಿನಿಟ್‌’ ವೆಬ್‌ಸೈಟ್‌ ತನಿಖಾ ವರದಿ ಪ್ರಕಟಿಸಿತ್ತು. ಬಳಿಕ ಚುನಾವಣಾಧಿಕಾರಿಯು ಪೊಲೀಸರಿಗೆ ದೂರು ನೀಡಿದ್ದರು. ಆಗ್ನೇಯ ವಿಭಾಗದ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಕಂಪನಿಯ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ವೆಬ್‌ಸೈಟ್ ತೆಗೆದ ತಕ್ಷಣ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳಿಗೆ ಸ್ವಾಗತ ಎಂಬ ಸಂದೇಶ ಬರುತ್ತಿತ್ತು. ₹25 ಸಾವಿರ ಜೊತೆಗೆ ₹500 ಸೇವಾ ಶುಲ್ಕ ನೀಡಿದರೆ ಕ್ಷೇತ್ರದ ಮತದಾರರ ಮಾಹಿತಿ ನೀಡಲಾಗುತ್ತದೆ. ಮಾಹಿತಿ ಪಡೆದು ಚುನಾವಣೆಯಲ್ಲಿ ಜಯಶಾಲಿಯಾಗಿ ಎಂದು ವೆನ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಒಂದು ವೇಳೆ ಸೋತರೆ ಹಣ ವಾಪಸ್ ಎಂಬ ಪ್ರಣಾಳಿಕೆ ಮಾಡಿಕೊಂಡಿತ್ತು ಎಂದು ವರದಿಯಾಗಿದೆ.

ಕಳೆದ ನವೆಂಬರ್‌ನಲ್ಲಿ ‘ಚಿಲುಮೆ ಸಂಸ್ಥೆ’ಯೂ ಮತದಾರರ ದತ್ತಾಂಶ ಮಾರಾಟ ಮಾಡಿತ್ತು. ಅದೇ ಮಾದರಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಕೋರಮಂಗಲದ ಸಂಸ್ಥೆಯೂ ಸಮೀಕ್ಷೆ ನಡೆಸಿದೆ ಎನ್ನಲಾಗಿದೆ.

ಈ ಖಾಸಗಿ ಕಂಪನಿಯೂ ಮತದಾರರ ಸಂಪೂರ್ಣ ವಿವರಗಳನ್ನು ಸಂಗ್ರಹಿಸುತ್ತಿತ್ತು. ಇದಕ್ಕಾಗಿಯೇ, ಪ್ರತ್ಯೇಕ ಆ್ಯಪ್ ಬಳಸಿ ಮತದಾರರ ಮಾಹಿತಿ, ಹೆಸರು, ವಿಳಾಸ, ಜಾತಿ, ಮತದಾರರು ಕಳೆದ ಬಾರಿ ಯಾವ ಪಕ್ಷಕ್ಕೆ ಬೆಂಬಲಿಸಿದ್ದರು. ಈ ಬಾರಿ ಯಾವ‌ ಪಕ್ಷಕ್ಕೆ ಬೆಂಬಲಿಸಲಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಆ್ಯಪ್​ನಲ್ಲಿ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

“ಸುಮಾರು ಆರು ಲಕ್ಷದಷ್ಟು ಮತದಾರರ ಮಾಹಿತಿ ಈ ಖಾಸಗಿ ಸಂಸ್ಥೆಯ ಬಳಿ ಇತ್ತು. ಇದು ನಿರ್ದಿಷ್ಟ ಕ್ಷೇತ್ರದ ಮತದಾರರ ಪಟ್ಟಿಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ. ಈ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಮೊಬೈಲ್‌ ಸಂಖ್ಯೆ ಹಾಕಿತ್ತು. ₹ 25 ಸಾವಿರ ನೀಡಿದರೆ ಲಾಗ್‌ಇನ್‌ ಐಡಿ ನೀಡುತ್ತಿತ್ತು” ಎಂದು ತಿಳಿದುಬಂದಿದೆ.

“ಖಾಸಗಿ ಕಂಪನಿಯ ವೆಬ್‌ಸೈಟ್‌ವೊಂದರಲ್ಲಿ ಹಣ ಪಡೆದು ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದಾರೆಂದು ಚುನಾವಣೆ ಅಧಿಕಾರಿಗಳು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ. ಪ್ರಸ್ತುತವಾಗಿ ತನಿಖೆ ಕೈಗೊಂಡಿರುವುದರಿಂದ ಖಾಸಗಿ ಸಂಸ್ಥೆಯ ಹೆಸರು ಬಹಿರಂಗ ಪಡಿಸುವುದಿಲ್ಲ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...