Homeಮುಖಪುಟ25 ಸಾವಿರ ರೂಗಳಿಗೆ ಅಭ್ಯರ್ಥಿಗಳಿಗೆ ಮತದಾರರ ಮಾಹಿತಿ ಮಾರಾಟ: ಎಫ್‌ಐಆರ್ ದಾಖಲು

25 ಸಾವಿರ ರೂಗಳಿಗೆ ಅಭ್ಯರ್ಥಿಗಳಿಗೆ ಮತದಾರರ ಮಾಹಿತಿ ಮಾರಾಟ: ಎಫ್‌ಐಆರ್ ದಾಖಲು

- Advertisement -
- Advertisement -

25 ಸಾವಿರ ನೀಡಿ, ಮತದಾರರ ಸಂಪೂರ್ಣ ಮಾಹಿತಿ ಪಡೆದಕೊಳ್ಳಿ, ಜಯ ಸಾಧಿಸಿ ಎಂದು 6.5 ಲಕ್ಷ ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದ ಕೋರಮಂಗಲದ ಖಾಸಗಿ ಸಂಸ್ಥೆಯ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿಷಯದ ಕುರಿತು ಪಕ್ಷೇತರ ಅಭ್ಯರ್ಥಿಯೊಬ್ಬರ ಮಾಹಿತಿ ಮೇರೆಗೆ ‘ದಿ ನ್ಯೂಸ್‌ ಮಿನಿಟ್‌’ ವೆಬ್‌ಸೈಟ್‌ ತನಿಖಾ ವರದಿ ಪ್ರಕಟಿಸಿತ್ತು. ಬಳಿಕ ಚುನಾವಣಾಧಿಕಾರಿಯು ಪೊಲೀಸರಿಗೆ ದೂರು ನೀಡಿದ್ದರು. ಆಗ್ನೇಯ ವಿಭಾಗದ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಕಂಪನಿಯ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ವೆಬ್‌ಸೈಟ್ ತೆಗೆದ ತಕ್ಷಣ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳಿಗೆ ಸ್ವಾಗತ ಎಂಬ ಸಂದೇಶ ಬರುತ್ತಿತ್ತು. ₹25 ಸಾವಿರ ಜೊತೆಗೆ ₹500 ಸೇವಾ ಶುಲ್ಕ ನೀಡಿದರೆ ಕ್ಷೇತ್ರದ ಮತದಾರರ ಮಾಹಿತಿ ನೀಡಲಾಗುತ್ತದೆ. ಮಾಹಿತಿ ಪಡೆದು ಚುನಾವಣೆಯಲ್ಲಿ ಜಯಶಾಲಿಯಾಗಿ ಎಂದು ವೆನ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಒಂದು ವೇಳೆ ಸೋತರೆ ಹಣ ವಾಪಸ್ ಎಂಬ ಪ್ರಣಾಳಿಕೆ ಮಾಡಿಕೊಂಡಿತ್ತು ಎಂದು ವರದಿಯಾಗಿದೆ.

ಕಳೆದ ನವೆಂಬರ್‌ನಲ್ಲಿ ‘ಚಿಲುಮೆ ಸಂಸ್ಥೆ’ಯೂ ಮತದಾರರ ದತ್ತಾಂಶ ಮಾರಾಟ ಮಾಡಿತ್ತು. ಅದೇ ಮಾದರಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಕೋರಮಂಗಲದ ಸಂಸ್ಥೆಯೂ ಸಮೀಕ್ಷೆ ನಡೆಸಿದೆ ಎನ್ನಲಾಗಿದೆ.

ಈ ಖಾಸಗಿ ಕಂಪನಿಯೂ ಮತದಾರರ ಸಂಪೂರ್ಣ ವಿವರಗಳನ್ನು ಸಂಗ್ರಹಿಸುತ್ತಿತ್ತು. ಇದಕ್ಕಾಗಿಯೇ, ಪ್ರತ್ಯೇಕ ಆ್ಯಪ್ ಬಳಸಿ ಮತದಾರರ ಮಾಹಿತಿ, ಹೆಸರು, ವಿಳಾಸ, ಜಾತಿ, ಮತದಾರರು ಕಳೆದ ಬಾರಿ ಯಾವ ಪಕ್ಷಕ್ಕೆ ಬೆಂಬಲಿಸಿದ್ದರು. ಈ ಬಾರಿ ಯಾವ‌ ಪಕ್ಷಕ್ಕೆ ಬೆಂಬಲಿಸಲಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಆ್ಯಪ್​ನಲ್ಲಿ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

“ಸುಮಾರು ಆರು ಲಕ್ಷದಷ್ಟು ಮತದಾರರ ಮಾಹಿತಿ ಈ ಖಾಸಗಿ ಸಂಸ್ಥೆಯ ಬಳಿ ಇತ್ತು. ಇದು ನಿರ್ದಿಷ್ಟ ಕ್ಷೇತ್ರದ ಮತದಾರರ ಪಟ್ಟಿಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ. ಈ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಮೊಬೈಲ್‌ ಸಂಖ್ಯೆ ಹಾಕಿತ್ತು. ₹ 25 ಸಾವಿರ ನೀಡಿದರೆ ಲಾಗ್‌ಇನ್‌ ಐಡಿ ನೀಡುತ್ತಿತ್ತು” ಎಂದು ತಿಳಿದುಬಂದಿದೆ.

“ಖಾಸಗಿ ಕಂಪನಿಯ ವೆಬ್‌ಸೈಟ್‌ವೊಂದರಲ್ಲಿ ಹಣ ಪಡೆದು ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದಾರೆಂದು ಚುನಾವಣೆ ಅಧಿಕಾರಿಗಳು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ. ಪ್ರಸ್ತುತವಾಗಿ ತನಿಖೆ ಕೈಗೊಂಡಿರುವುದರಿಂದ ಖಾಸಗಿ ಸಂಸ್ಥೆಯ ಹೆಸರು ಬಹಿರಂಗ ಪಡಿಸುವುದಿಲ್ಲ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...