Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...