Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...