Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...