Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...