Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...