Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...