Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...