Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...