ಇನ್ಫೋಸಿಸ್ ಸಹ-ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್, ಮಾಜಿ ಐಐಎಸ್ಸಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಸೋಮವಾರ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್) ನಿರ್ದೇಶನದ ಆಧಾರದ ಮೇಲೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದ, ಬುಡಕಟ್ಟು ಬೋವಿ ಸಮುದಾಯದ ದುರ್ಗಪ್ಪ ಅವರು ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಾಗಿದೆ. ಇನ್ಫೋಸಿಸ್ ಸಹ-ಸಂಸ್ಥಾಪಕ
2014 ರಲ್ಲಿ, ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಯಿತು ಮತ್ತು ನಂತರ ಸೇವೆಯಿಂದ ವಜಾಗೊಳಿಸಲಾಯಿತು ಎಂದು ಅವರು ಹೇಳಿಕೊಂಡಿದ್ದಾರೆ. ಈ ವೇಳೆ ತಾನು ಜಾತಿ ನಿಂದನೆ ಮತ್ತು ಬೆದರಿಕೆಗಳಿಗೆ ಒಳಗಾಗಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಸಲಾದ ಇತರ ವ್ಯಕ್ತಿಗಳನ್ನು ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂದ್ಯಾ ವಿಶ್ವೇಶ್ವರಯ್ಯ, ಹರಿ ಕೆ.ವಿ.ಎಸ್., ದಾಸಪ್ಪ, ಬಲರಾಮ್ ಪಿ., ಹೇಮಲತಾ ಮ್ಹಿಷಿ, ಚಟ್ಟೋಪದ್ಯಾಯ ಕೆ., ಪ್ರದೀಪ್ ಡಿ. ಸಾಹುಕಾರ್ ಮತ್ತು ಮನೋಹರನ್ ಎಂದು ಗುರುತಿಸಲಾಗಿದೆ.
ಐಐಎಸ್ಸಿ ಅಧ್ಯಾಪಕರಿಂದ ಅಥವಾ ಐಐಎಸ್ಸಿ ಟ್ರಸ್ಟಿಗಳ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿರುವ ಕ್ರಿಸ್ ಗೋಪಾಲಕೃಷ್ಣನ್ ಅವರಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಇದನ್ನೂಓದಿ: ಯುಜಿಸಿ ನಿಯಮಗಳಲ್ಲಿನ ಬದಲಾವಣೆ ಸಂವಿಧಾನದ ಮೇಲೆ ದಾಳಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಯುಜಿಸಿ ನಿಯಮಗಳಲ್ಲಿನ ಬದಲಾವಣೆ ಸಂವಿಧಾನದ ಮೇಲೆ ದಾಳಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ


