Homeಕರ್ನಾಟಕಆಂತರಿಕ ಮೌಲ್ಯಮಾಪನದಲ್ಲಿ ಅನುತ್ತೀರ್ಣರಾದ 300 ಕ್ಕೂ ಹೆಚ್ಚು ಹೊಸಬರನ್ನು ಕೆಲಸದಿಂದ ತೆಗೆದ ಇನ್ಫೋಸಿಸ್

ಆಂತರಿಕ ಮೌಲ್ಯಮಾಪನದಲ್ಲಿ ಅನುತ್ತೀರ್ಣರಾದ 300 ಕ್ಕೂ ಹೆಚ್ಚು ಹೊಸಬರನ್ನು ಕೆಲಸದಿಂದ ತೆಗೆದ ಇನ್ಫೋಸಿಸ್

- Advertisement -
- Advertisement -

ಆಂತರಿಕ ಮೌಲ್ಯಮಾಪನದಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ಕಾರಣ ಇನ್ಫೋಸಿಸ್ ತನ್ನ ಮೈಸೂರ್ ಕ್ಯಾಂಪಸ್‌ನಿಂದ 300 ಕ್ಕೂ ಹೆಚ್ಚು ಹೊಸಬರನ್ನು (ಫ್ರೆಶರ್‌ಗಳನ್ನು) ಕೆಲಸದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ಫ್ರೆಶರ್‌ಗಳು ಕಂಪನಿಯ ಮೈಸೂರು ಕ್ಯಾಂಪಸ್‌ನಲ್ಲಿ ತರಬೇತಿ ಪಡೆದಿದ್ದರು, ಆಂತರಿಕ ಪರೀಕ್ಷೆಯಲ್ಲಿ ಮೂರು ಬಾರಿ ಅನುತ್ತೀರ್ಣರಾದ ನಂತರ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್‌) ವಜಾಗೊಳಿಸಿದ ಫ್ರೆಶರ್‌ಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ ಎಂದು ಹೇಳುತ್ತದೆ.

“ಇನ್ಫೋಸಿಸ್‌ನಲ್ಲಿ, ನಾವು ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದ್ದೇವೆ, ನಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ವ್ಯಾಪಕವಾದ ಫೌಂಡೇಶನ್ ತರಬೇತಿಯನ್ನು ಪಡೆದ ನಂತರ ಎಲ್ಲ ಫ್ರೆಶರ್‌ಗಳು ಆಂತರಿಕ ಮೌಲ್ಯಮಾಪನಗಳಲ್ಲಿ ಉತ್ತೀರ್ಣರಾಗುವ ನಿರೀಕ್ಷೆಯಿದೆ” ಎಂದು ಬೆಂಗಳೂರು ಪ್ರಧಾನ ಕಚೇರಿಯ ಹೇಳಿದೆ ಎಂದು ಇಂಗ್ಲಿಷ್ ವಾಹಿನಿಯೊಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಎಲ್ಲಾ ಫ್ರೆಶರ್‌ಗಳು ಮೌಲ್ಯಮಾಪನದಲ್ಲಿ ಉತ್ತೀರ್ಣರಾಗಲು ಮೂರು ಪ್ರಯತ್ನಗಳನ್ನು ಪಡೆಯುತ್ತಾರೆ. ವಿಫಲವಾದರೆ ಅವರು ಸಂಸ್ಥೆಯೊಂದಿಗೆ ಮುಂದುವರಿಯಲು ಸಾಧ್ಯವಾಗುವುದಿಲ್ಲ ಎಂದು ಕಂಪನಿ ಹೇಳಿದೆ. ಈ ಷರತ್ತನ್ನು ಅವರ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ. ಈ ಪ್ರಕ್ರಿಯೆಯು ಎರಡು ದಶಕಗಳಿಗೂ ಹೆಚ್ಚು ಕಾಲ ಅಸ್ತಿತ್ವದಲ್ಲಿದ್ದು, ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಪ್ರತಿಭೆ ಲಭ್ಯತೆಯನ್ನು ಖಚಿತಪಡಿಸುತ್ತದೆ ಎಂದು ಇನ್ಫೋಸಿಸ್ ಹೇಳಿಕೊಂಡಿದೆ.

ಎನ್‌ಐಟಿಇಎಸ್‌ ಪ್ರಕಾರ, ಉದ್ಯೋಗಿಗಳನ್ನು ಅದರ ಮೈಸೂರು ಕ್ಯಾಂಪಸ್‌ನಲ್ಲಿರುವ ಸಭೆ ಕೊಠಡಿಗಳಿಗೆ ಕರೆಸಿ ಪರಸ್ಪರ ಬೇರ್ಪಡಿಕೆ ಪತ್ರಗಳಿಗೆ ಸಹಿ ಹಾಕುವಂತೆ ಕೇಳಲಾಯಿತು. ಕೆಲಸ ಕಳೆದುಕೊಂಡವರ ಸಂಖ್ಯೆಗಳು ತುಂಬಾ ಹೆಚ್ಚಿವೆ ಎನ್ನಲಾಗಿದ್ದು, ಫ್ರೆಶರ್‌ಗಳನ್ನು ಕೆಲವೇ ತಿಂಗಳುಗಳ ಹಿಂದೆ ಅಕ್ಟೋಬರ್ 2024 ರಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಎನ್‌ಐಟಿಇಎಸ್‌ ಹೇಳಿಕೊಂಡಿದೆ.

“ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದರೆ, ಎನ್‌ಐಟಿಇಎಸ್‌ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ಸಲ್ಲಿಸುತ್ತಿದ್ದು, ತಕ್ಷಣದ ಹಸ್ತಕ್ಷೇಪ ಮಾಡಿ ಇನ್ಫೋಸಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ” ಎಂದು ಅದು ಹೇಳಿದೆ.

ಇದನ್ನೂ ಒದಿ; ಯುವಜನರ ಹಠಾತ್ ಸಾವು – ತಜ್ಞರು, ವಿಜ್ಞಾನಿಗಳ ಸಮಿತಿ ರಚಿಸಿ ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...