Homeಮುಖಪುಟರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

ರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

- Advertisement -
- Advertisement -

ಟೆಕ್ ದೈತ್ಯ ಇನ್ಫೋಸಿಸ್ ಲಿಮಿಟೆಡ್ 32,000 ಕೋಟಿ ರೂಪಾಯಿಗೂ ಹೆಚ್ಚು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಆರೋಪದ ಮೇಲೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ)ದಿಂದ ಶೋಕಾಸ್ ನೋಟಿಸ್ ಪಡೆದಿದೆ ಎಂದು ವರದಿಯಾಗಿದೆ.

ಆಪಾದಿತ ವಂಚನೆಯು ಜುಲೈ 2017 ರಿಂದ ಮಾರ್ಚ್ 2022ರ ನಡುವಿನ ಸೇವೆಗಳ ಆಮದಿನ ಮೇಲೆ ಐಜಿಎಸ್‌ಟಿ ಪಾವತಿಸದಿರುವುದಕ್ಕೆ ಸಂಬಂಧಿಸಿದೆ ಎಂದು ವರದಿಗಳು ಹೇಳಿವೆ.

“ಕಂಪನಿಯು ತನ್ನ ಸಾಗರೋತ್ತರ ಶಾಖೆಗಳಿಂದ ಸೇವೆಗಳನ್ನು ಆಮದು ಮಾಡಿಕೊಂಡಿದೆ, ಆದರೆ ಅದರ ಮೇಲೆ ಐಜಿಎಸ್‌ಟಿ ಪಾವತಿಸಿಲ್ಲ” ಎಂದು ತಿಳಿದು ಬಂದಿದೆ.

ಶೋಕಾಸ್‌ ನೋಟಿಸ್‌ ಕುರಿತು ಪ್ರತಿಕ್ರಿಯಿಸಿರುವ ಇನ್ಫೋಸಿಸ್‌, “ಕಂಪನಿಯು 32,403 ಕೋಟಿ ರೂ. ಜಿಎಸ್‌ಟಿ ಪಾವತಿಗೆ ಸಂಬಂಧಿಸಿದಂತೆ ಜಿಎಸ್‌ಟಿ ಇಂಟೆಲಿಜೆನ್ಸ್ ಮಹಾನಿರ್ದೇಶಕರಿಂದ ಪೂರ್ವ ಶೋಕಾಸ್ ನೋಟಿಸ್ ಅನ್ನು ಸ್ವೀಕರಿಸಿದೆ. ಕಂಪನಿಯು ಅದಕ್ಕೆ ಪ್ರತಿಕ್ರಿಯಿಸುವ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದೆ.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇಲೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (ಸಿಬಿಐಸಿ) ಮಂಡಳಿಯು ಹೊರಡಿಸಿದ ಜೂನ್ 26, 2024ರ ಸುತ್ತೋಲೆಯ ಪ್ರಕಾರ, ಭಾರತೀಯ ಘಟಕಕ್ಕೆ ಸಾಗರೋತ್ತರ ಶಾಖೆಗಳು ಒದಗಿಸುವ ಸೇವೆಗಳು ಜಿಎಸ್‌ಟಿಗೆ ಒಳಪಡುವುದಿಲ್ಲ ಎಂದು ಇನ್ಫೋಸಿಸ್ ಪ್ರತಿಪಾದಿಸಿದೆ.

“ಜಿಎಸ್‌ಟಿ ಪಾವತಿಗಳು ಐಟಿ ಸೇವೆಗಳ ರಫ್ತಿನ ವಿರುದ್ಧ ಕ್ರೆಡಿಟ್ ಅಥವಾ ಮರುಪಾವತಿಗೆ ಅರ್ಹವಾಗಿವೆ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಇನ್ಫೋಸಿಸ್ ತನ್ನ ಎಲ್ಲಾ ಜಿಎಸ್‌ಟಿ ಬಾಕಿಗಳನ್ನು ಪಾವತಿಸಿದೆ ಮತ್ತು ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ನಿಯಮಗಳಿಗೆ ಸಂಪೂರ್ಣವಾಗಿ ಅನುಸಾರವಾಗಿದೆ” ಎಂದು ಕಂಪನಿ ಹೇಳಿದೆ.

ಗಮನಾರ್ಹ ಸಂಗತಿ ಎಂದರೆ, ಜಿಎಸ್‌ಟಿ ನೆಟ್‌ವರ್ಕ್ (ಜಿಎಸ್‌ಟಿಎನ್‌) ಅನ್ನು ಇನ್ಫೋಸಿಸ್ ಕಂಪನಿಯೇ ನಿರ್ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಪರೋಕ್ಷ ತೆರಿಗೆ ಇಲಾಖೆಯೊಂದಿಗೆ ಇನ್ಫೋಸಿಸ್‌ನ ಕಿತ್ತಾಟಕ್ಕಿಳಿದಿರುವುದು ಇದು ಎರಡನೇ ಬಾರಿಯಾಗಿದೆ. ಏಪ್ರಿಲ್‌ನಲ್ಲಿ, ಒಡಿಶಾ ಜಿಎಸ್‌ಟಿ ಪ್ರಾಧಿಕಾರವು 2018-19ರ ಅನರ್ಹ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಕಂಪನಿಗೆ 1.46 ಲಕ್ಷ ರೂಪಾಯಿ ದಂಡ ವಿಧಿಸಿತ್ತು.

ಇದನ್ನೂ ಓದಿ : ‘ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್’ : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...