Homeಮುಖಪುಟರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

ರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

- Advertisement -
- Advertisement -

ಟೆಕ್ ದೈತ್ಯ ಇನ್ಫೋಸಿಸ್ ಲಿಮಿಟೆಡ್ 32,000 ಕೋಟಿ ರೂಪಾಯಿಗೂ ಹೆಚ್ಚು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಆರೋಪದ ಮೇಲೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ)ದಿಂದ ಶೋಕಾಸ್ ನೋಟಿಸ್ ಪಡೆದಿದೆ ಎಂದು ವರದಿಯಾಗಿದೆ.

ಆಪಾದಿತ ವಂಚನೆಯು ಜುಲೈ 2017 ರಿಂದ ಮಾರ್ಚ್ 2022ರ ನಡುವಿನ ಸೇವೆಗಳ ಆಮದಿನ ಮೇಲೆ ಐಜಿಎಸ್‌ಟಿ ಪಾವತಿಸದಿರುವುದಕ್ಕೆ ಸಂಬಂಧಿಸಿದೆ ಎಂದು ವರದಿಗಳು ಹೇಳಿವೆ.

“ಕಂಪನಿಯು ತನ್ನ ಸಾಗರೋತ್ತರ ಶಾಖೆಗಳಿಂದ ಸೇವೆಗಳನ್ನು ಆಮದು ಮಾಡಿಕೊಂಡಿದೆ, ಆದರೆ ಅದರ ಮೇಲೆ ಐಜಿಎಸ್‌ಟಿ ಪಾವತಿಸಿಲ್ಲ” ಎಂದು ತಿಳಿದು ಬಂದಿದೆ.

ಶೋಕಾಸ್‌ ನೋಟಿಸ್‌ ಕುರಿತು ಪ್ರತಿಕ್ರಿಯಿಸಿರುವ ಇನ್ಫೋಸಿಸ್‌, “ಕಂಪನಿಯು 32,403 ಕೋಟಿ ರೂ. ಜಿಎಸ್‌ಟಿ ಪಾವತಿಗೆ ಸಂಬಂಧಿಸಿದಂತೆ ಜಿಎಸ್‌ಟಿ ಇಂಟೆಲಿಜೆನ್ಸ್ ಮಹಾನಿರ್ದೇಶಕರಿಂದ ಪೂರ್ವ ಶೋಕಾಸ್ ನೋಟಿಸ್ ಅನ್ನು ಸ್ವೀಕರಿಸಿದೆ. ಕಂಪನಿಯು ಅದಕ್ಕೆ ಪ್ರತಿಕ್ರಿಯಿಸುವ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದೆ.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇಲೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (ಸಿಬಿಐಸಿ) ಮಂಡಳಿಯು ಹೊರಡಿಸಿದ ಜೂನ್ 26, 2024ರ ಸುತ್ತೋಲೆಯ ಪ್ರಕಾರ, ಭಾರತೀಯ ಘಟಕಕ್ಕೆ ಸಾಗರೋತ್ತರ ಶಾಖೆಗಳು ಒದಗಿಸುವ ಸೇವೆಗಳು ಜಿಎಸ್‌ಟಿಗೆ ಒಳಪಡುವುದಿಲ್ಲ ಎಂದು ಇನ್ಫೋಸಿಸ್ ಪ್ರತಿಪಾದಿಸಿದೆ.

“ಜಿಎಸ್‌ಟಿ ಪಾವತಿಗಳು ಐಟಿ ಸೇವೆಗಳ ರಫ್ತಿನ ವಿರುದ್ಧ ಕ್ರೆಡಿಟ್ ಅಥವಾ ಮರುಪಾವತಿಗೆ ಅರ್ಹವಾಗಿವೆ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಇನ್ಫೋಸಿಸ್ ತನ್ನ ಎಲ್ಲಾ ಜಿಎಸ್‌ಟಿ ಬಾಕಿಗಳನ್ನು ಪಾವತಿಸಿದೆ ಮತ್ತು ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ನಿಯಮಗಳಿಗೆ ಸಂಪೂರ್ಣವಾಗಿ ಅನುಸಾರವಾಗಿದೆ” ಎಂದು ಕಂಪನಿ ಹೇಳಿದೆ.

ಗಮನಾರ್ಹ ಸಂಗತಿ ಎಂದರೆ, ಜಿಎಸ್‌ಟಿ ನೆಟ್‌ವರ್ಕ್ (ಜಿಎಸ್‌ಟಿಎನ್‌) ಅನ್ನು ಇನ್ಫೋಸಿಸ್ ಕಂಪನಿಯೇ ನಿರ್ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಪರೋಕ್ಷ ತೆರಿಗೆ ಇಲಾಖೆಯೊಂದಿಗೆ ಇನ್ಫೋಸಿಸ್‌ನ ಕಿತ್ತಾಟಕ್ಕಿಳಿದಿರುವುದು ಇದು ಎರಡನೇ ಬಾರಿಯಾಗಿದೆ. ಏಪ್ರಿಲ್‌ನಲ್ಲಿ, ಒಡಿಶಾ ಜಿಎಸ್‌ಟಿ ಪ್ರಾಧಿಕಾರವು 2018-19ರ ಅನರ್ಹ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಕಂಪನಿಗೆ 1.46 ಲಕ್ಷ ರೂಪಾಯಿ ದಂಡ ವಿಧಿಸಿತ್ತು.

ಇದನ್ನೂ ಓದಿ : ‘ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್’ : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...